127 ವರ್ಷ ಕಂಡ ಎಡಪದವು ದ.ಕ.ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆ

ಮಕ್ಕಳಲ್ಲಿ ದೇಶಪ್ರೇಮ ಬೆಳೆಸುವ ಉದ್ದೇಶದಿಂದ ಶಾಲೆ ಸ್ಥಾಪನೆ

Team Udayavani, Nov 27, 2019, 4:49 AM IST

as-24

19ನೇಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

1892 ಶಾಲೆ ಆರಂಭ
ಹುಲ್ಲಿನ ಚಾವಣಿಯಲ್ಲಿ ಶಾಲೆ ಆರಂಭ

ಕೈಕಂಬ: ಎಡಪದವಿನ ದ.ಕ.ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮಿಜಾರುಗುತ್ತು ಮನೆತನದ ಧೂಮ ಆಳ್ವ ಅವರು 1892ರಲ್ಲಿ ಆರಂಭಿಸಿದರು.
ಹುಲ್ಲಿನ ಚಾವಣಿಯಲ್ಲಿ ಆರಂಭಗೊಂಡ ಈ ಶಾಲೆಯಲ್ಲಿ ಸುಮಾರು 20 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಪಡೆಯುತ್ತಿದ್ದರು.

ಈ ಶಾಲೆ ಇಂದಿಗೂ ಬೆಳ್ಳೆಚ್ಚಾರು ಶಾಲೆ ಎಂದೇ ಪ್ರಸಿದ್ಧಿ ಪಡೆದಿದೆ. ದೇಶಪ್ರೇಮ, ಸಜ್ಜನಿಕೆ, ಮಾನವೀಯ ಮೌಲ್ಯಗಳನ್ನು ವಿದ್ಯಾರ್ಥಿ ಜೀವನದಲ್ಲಿ ಮಕ್ಕಳಲ್ಲಿ ಬೆಳೆಸಬೇಕು ಎಂಬ ಉದ್ದೇಶದಿಂದ ಈ ಶಾಲೆ ಸ್ಥಾಪನೆಯಾಗಿತ್ತು. ಮಹಾಲಿಂಗ ಶೆಟ್ಟಿ ಅವರು ಈ ಶಾಲೆಯ ಪ್ರಥಮ ಮುಖ್ಯೋಪಾಧ್ಯಾಯರು. 1953ರಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಈ ಶಾಲೆಯಾಗಿ ಮಾರ್ಪಾಡುಗೊಂಡಿತ್ತು. ಆಗ 160 ಮಕ್ಕಳ ಸಂಖ್ಯೆಯಾಗಿತ್ತು.

ಎರಡು ಗ್ರಾಮಗಳಿಗೆ ಒಂದೇ ಶಾಲೆ
ಎರಡು ಗ್ರಾಮದ ವ್ಯಾಪ್ತಿಯಲ್ಲಿ ಈ ಶಾಲೆ ಇರುವುದು ಒಂದು ವಿಶೇಷತೆ. ಬಡಗ ಎಡಪದವು ಹಾಗೂ ತೆಂಕ ಮಿಜಾರು ಗ್ರಾಮದ ವ್ಯಾಪ್ತಿಯಲ್ಲಿ ಈ ಶಾಲೆ ಇದೆ. ಒಟ್ಟು 1.95 ಎಕ್ರೆ ಜಾಗದಲ್ಲಿ ಈ ಶಾಲೆ ಇದೆ. ವಿಶಾಲ ಮೈದಾನವನ್ನು ಹೊಂದಿದೆ.

1992ರಲ್ಲಿ ಶಾಲೆಯು ಶತಮಾನೋತ್ಸವವನ್ನು ಆಚರಿಸಿಕೊಂಡಿದ್ದು ಇದರ ಸವಿ ನೆನೆಪಿಗಾಗಿ ಕಟ್ಟಡವನ್ನು ಕೂಡ ನಿರ್ಮಿಸಲಾಗಿದೆ. ಅನಂತರ ದ.ಕ.ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆಯಾಗಿ ಮಾರ್ಪಾಡಾಯಿತು. ಒಂದು ಕಾಲದಲ್ಲಿ 800ಕ್ಕಿಂತ ಅಧಿಕ ವಿದ್ಯಾರ್ಥಿಗಳು ಇಲ್ಲಿ ವಿದ್ಯಾಭ್ಯಾಸ ಪಡೆಯುತ್ತಿದ್ದರು. 1991-92ರಲ್ಲಿ ಈ ಶಾಲೆಯಲ್ಲಿ 14 ಶಿಕ್ಷಕರು ಇದ್ದು 650 ಮಕ್ಕಳು ವಿದ್ಯಾರ್ಜನೆಗೈದ್ದಿದ್ದರು. ಪ್ರಸ್ತುತವಾಗಿ ಒಂದರಿಂದ 7 ತರಗತಿಗಳಿದ್ದು 4 ಶಿಕ್ಷಕರು 87 ಮಕ್ಕಳು ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ. ಈ ಶಾಲೆ 5 ಕಟ್ಟಡವನ್ನು ಹೊಂದಿದೆ. ಶಾಲೆಯಲ್ಲಿ ಮಳೆ ನೀರು ಕೊಯ್ಲುನ್ನು ಅಳವಡಿಸಲಾಗಿದೆ. ಮಕ್ಕಳಿಗೆ ಬಿಸಿಯೂಟ ಹಾಗೂ ಶಾಲಾ ಅವರಣದೊಳಗೆ ಅಂಗನವಾಡಿ ಕೇಂದ್ರ ಇದೆ.

ತೆಂಕ ಮಿಜಾರು ಹಾಗೂ ಬಡಗ ಎಡಪದವು, ಎಡಪದವು,ದಡ್ಡಿ, ಅಶ್ವತ್ಥ‌ಪುರ,ಇರುವೈಲು, ಉರ್ಕಿ ಪದವು, ತೋಡಾರು, ಕೊಂಪದವು ಪ್ರದೇಶಗಳಿಂದ ಈ ಶಾಲೆಗೆ ವಿದ್ಯಾರ್ಥಿಗಳು ಬರುತ್ತಿದ್ದರು. ಆರಂಭದಲ್ಲಿ ಈ ಪ್ರದೇಶದಲ್ಲಿ ಎರಡೇ ಶಾಲೆಗಳಿದ್ದು ಈಗ 6 ಶಾಲೆಗಳಿವೆ. ಶಾಲಾ ಶತಮಾನೋತ್ಸವದ ನೆನಪಿಗೆ ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಮಿಜಾರುಗುತ್ತು ಆನಂದ ಆಳ್ವ ನೇತೃತ್ವದಲ್ಲಿ ಶಾಲೆಗೆ ಹೊಸ ಕಟ್ಟಡವನ್ನು ನಿರ್ಮಿಸಲಾಗಿದೆ. 27ವರ್ಷಗಳಿಂದ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸದಾಶಿವ ಗೌಡ ಹಾಗೂ ಕಾರ್ಯದರ್ಶಿ ರಾಮಣ್ಣ ಶೆಟ್ಟಿ ಅವರ ನೇತೃತ್ವದಲ್ಲಿ ಶಾಲಾ ಬೆಳವಣಿಗೆಗೆ ಎಸ್‌ಡಿಎಂಸಿ ಜತೆ ಸಹಕಾರ ನೀಡುತ್ತಿದೆ.

ಮುಖ್ಯ ಶಿಕ್ಷಕರಾಗಿ ರಾಮ ರಾವ್‌, ಭಾಸ್ಕರ ನಾೖಕ್‌, ಎಂ. ಭೀಮಪ್ಪ, ಸಿಂತಿಯಾ ಜ್ಯೂಲಿಯೆಟ್‌ ಪ್ಯಾಸ್‌ ಮುಂತಾದವರು ಸೇವೆ ಸಲ್ಲಿಸಿದ್ದಾರೆ. ಗಣಪತಿ ಮಾಸ್ಟ್ರು, ಚಂದ್ರಕಲಾ ಟೀಚರ್‌, ಶಾರದಾ ಟೀಚರ್‌, ಕೃಷ್ಣ ಕಾರಂತ ಮಾಸ್ತರು, ರಾಮಗೌಡ ಮೊದಲಾದವರು ಶಿಕ್ಷಕರಾಗಿ ಗಣನೀಯ ಸೇವೆ ಸಲ್ಲಿಸಿದ್ದಾರೆ.

ಸಾಧಕ ಹಳೆ ವಿದ್ಯಾರ್ಥಿಗಳು
ಆಳ್ವಾಸ ಶಿಕ್ಷಣ ಸಂಸ್ಥೆಯ ಡಾ| ಮೋಹನ್‌ ಆಳ್ವ, ವಿಜ್ಞಾನಿ ಮಿಜಾರ್‌ ಕನಕಬೆಟ್ಟು ಶ್ರೀಧರ್‌, ಡಾ| ದುರ್ಗಾಪ್ರಸಾದ್‌ ಎಂ.ಆರ್‌., ಡಾ| ಗುರುರಾಜ್‌ ತಂತ್ರಿ, ಸಿಎ ಉಮೇಶ್‌ ರಾವ್‌ ಮಿಜಾರ್‌, ರಾಜ್‌ ರೋಡ್ರಿಗಸ್‌, ಉದ್ಯಮಿ ಮಿಜಾರ್‌ ರತ್ನಾಕರ ಶೆಟ್ಟಿ, ಅಬ್ದುಲ್‌ ಖಾದರ್‌, ಯಕ್ಷಗಾನ ಕಲಾವಿದ ಮಿಜಾರು ತಿಮ್ಮಪ್ಪ ,ಡಾ| ಮಯ್ಯಪ್ಪ, ಡಾ|ಅಬ್ದುಲ್‌ ರೆಹಮಾನ್‌ಮೊದಲಾದವರು ಇಲ್ಲಿನ ಸಾಧಕ ಹಳೆವಿದ್ಯಾರ್ಥಿಗಳು.

ಮಿಜಾರು ಗುತ್ತು ಮನೆ ತನದವರು ಇಂದಿಗೂ ಈ ಶಾಲೆಯ ಆವಶ್ಯಕತೆಗೆ ಸ್ಪಂದಿಸಿ, ಸಹಾಯ ಮಾಡುತ್ತಿದ್ದಾರೆ. ಶಾಲೆಗೆ ಸುಸಜ್ಜಿತ ಕಟ್ಟಡದ ಅಗತ್ಯವಿದೆ. ಶಾಲಾಗೆ ಅವರಣ ಗೋಡೆ ಅಗತ್ಯವಿದೆ.
-ಪದ್ಮಾವತಿ ಎನ್‌, ಶಾಲಾ ಮುಖ್ಯೋಪಾಧ್ಯಾಯಿನಿ.

ನನ್ನ ಅಣ್ಣ,ಅಕ್ಕ ಎಲ್ಲರೂ ಅಲ್ಲಿ ಕಲಿತು ಒಳ್ಳೆಯ ಹುದ್ದೆಯಲ್ಲಿ ಇರಲು ಹಾಗೂ ಸಾಧನೆಗೆ ಆ ಶಾಲೆಯ ಪ್ರಾಥಮಿಕ ಶಿಕ್ಷಣ ಕಾರಣವಾಗಿದೆ. ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರ ಹಾಗೂ ವಿವಿಧ ಕ್ಷೇತ್ರದಲ್ಲಿ ಮನೋಧರ್ಮ ಬೆಳೆಯಲು ಸಾಧ್ಯವಾಯಿತು.
-ಡಾ| ಮೋಹನ್‌ ಆಳ್ವ, ಹಳೆ ವಿದ್ಯಾರ್ಥಿ

-ಸುಬ್ರಾಯ ನಾಯಕ್‌ ಎಕ್ಕಾರು

ಟಾಪ್ ನ್ಯೂಸ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEW-SCHOOL

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜಿಲ್ಲೆಯ ಮೊದಲ ಕ್ರಿಶ್ಚಿಯನ್‌ ಪ್ರೌಢಶಾಲೆಗೆ 121ರ ಸಂಭ್ರಮ

430514561342IMG-20191203-WA0023

ಅನಂತೇಶ್ವರ ದೇಗುಲದ ಪೌಳಿಯಲ್ಲಿ ಪ್ರಾರಂಭವಾದ ಶಾಲೆಗೆ 128ರ ಸಂಭ್ರಮ

sx-22

ಸ್ವಾತಂತ್ರ್ಯಹೋರಾಟಗಾರರನ್ನು ನೀಡಿದ ಶಾಲೆಗೆ 111 ವರ್ಷಗಳ ಸಂಭ್ರಮ

ds-24

112 ವರ್ಷ ಕಂಡಿರುವ ಮೂಡುಬಿದಿರೆಯ ಡಿ.ಜೆ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ds-35

ಮನೆಯ ಚಾವಡಿಯಲ್ಲಿ ಪ್ರಾರಂಭಗೊಂಡಿದ್ದ ಶಾಲೆಗೆ 105ರ ಸಂಭ್ರಮ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.