ಪ್ರಧಾನಿ ಸಂಕಲ್ಪದ ‘ಜಲಶಕ್ತಿ’ಗೆ ರಾಜ್ಯದ 18 ಜಿಲ್ಲೆಗಳು ಆಯ್ಕೆ


Team Udayavani, Jul 19, 2019, 5:00 AM IST

t-52

ಮಂಗಳೂರು: ದೇಶದ 255 ಜಿಲ್ಲೆಗಳಲ್ಲಿ ಜಲವರ್ಧನ ಚಟುವಟಿಕೆಗಳನ್ನು ಕೇಂದ್ರ ಸರಕಾರ ಹಮ್ಮಿಕೊಂಡಿದ್ದು, ರಾಜ್ಯದ 18 ಜಿಲ್ಲೆಗಳು ಮಹತ್ವದ ‘ಜಲಶಕ್ತಿ’ ಅಭಿಯಾನಕ್ಕೆ ಆಯ್ಕೆಯಾಗಿವೆ.

ತೀವ್ರ ಜಲಾಭಾವ ಎದುರಿಸುತ್ತಿರುವ ದೇಶದ ಹಲವು ಜಿಲ್ಲೆಗಳನ್ನು ಗುರುತಿಸಿ, ಆ ಜಿಲ್ಲೆಗಳ ಆಯ್ದ ಬ್ಲಾಕ್‌ಗಳಲ್ಲಿ ಜಲಸಂರಕ್ಷಣೆ ಚಟುವಟಿಕೆಗಳನ್ನು ಕೈಗೊಳ್ಳುವುದು ಪ್ರಧಾನಿ ಮೋದಿ ಅವರ ಸಂಕಲ್ಪದ ‘ಜಲಶಕ್ತಿ’ ಆಂದೋಲನದ ಗುರಿ.

ಅಭಿಯಾನದಡಿ ಆಯ್ಕೆಯಾದ ರಾಜ್ಯದ 18ಜಿಲ್ಲೆಗಳಿಗೂ ಕೇಂದ್ರ ಸರಕಾರದ ಜಂಟಿ ಕಾರ್ಯದರ್ಶಿ, ಹೆಚ್ಚುವರಿ ಕಾರ್ಯದರ್ಶಿ ದರ್ಜೆಯ ಐಎಎಸ್‌ ಅಧಿಕಾರಿಗಳ ಉಸ್ತು ವಾರಿಯ ಸಮಿತಿ ರಚಿಸಲಾಗಿದೆ. ಕೇಂದ್ರ ಜಲಶಕ್ತಿ ಇಲಾಖೆ, ಅಭಿವೃದ್ಧಿ, ಬಾಹ್ಯಾಕಾಶ, ರಕ್ಷಣೆ, ಪೆಟ್ರೋಲಿಯಂ, ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಪರಿಸರ, ಕೃಷಿ, ಕೈಗಾರಿಕೆ ಸಹಿತ ವಿವಿಧ ಇಲಾಖೆಗಳಿಂದ ಈ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಆಯ್ಕೆಯಾದ ಜಿಲ್ಲೆಗಳಲ್ಲಿ ಐಎಎಸ್‌ ಅಧಿಕಾರಿಯ ಅಧ್ಯಕ್ಷತೆ ಮತ್ತು ಜಿಲ್ಲಾಧಿಕಾರಿಗಳ ಸಂಚಾಲಕತ್ವದಲ್ಲಿ ಇಲಾಖೆ ಮಟ್ಟದ ಸಮನ್ವಯ ಸಮಿತಿ ರಚಿಸಲಾಗುತ್ತದೆ.

ಹೀಗಿರುತ್ತದೆ ‘ಜಲಶಕ್ತಿ’ ಯೋಜನೆ
ಆಯ್ಕೆಯಾದ ಜಿಲ್ಲೆಯಲ್ಲಿ ಜಲಸಂರಕ್ಷಣೆ ಮತ್ತು ಮಳೆನೀರು ಕೊಯ್ಲು, ಜಲಮೂಲಗಳ ಪುನರುತ್ಥಾನ ಮತ್ತು ನವೀಕರಣಕ್ಕೆ ಆದ್ಯತೆ ನೀಡಲಾಗುತ್ತದೆ. ಕೊಳವೆಬಾವಿಗಳ ಮರುಪೂರಣ, ಇಂಗುಗುಂಡಿಗಳ ರಚನೆ ಮತ್ತು ನೀರಾವರಿ ದಕ್ಷತೆ ಹೆಚ್ಚಳ ಮಾಡಲಾಗುತ್ತದೆ. ಜತೆಗೆ ಜಲಮೂಲಗಳ ನವೀಕರಣ, ಸಂರಕ್ಷಣೆ, ವ್ಯಾಪಕ ವೃಕ್ಷಾಂದೋಲನ ಕೂಡ ಕೈಗೊಳ್ಳಲಾಗುತ್ತದೆ. ಈ ಎಲ್ಲ ಚಟುವಟಿಕೆಗಳನ್ನು ನೈಋತ್ಯ ಮತ್ತು ಈಶಾನ್ಯ ಮಾರುತ ಚುರುಕಾಗಿರುವ ಪ್ರದೇಶಗಳಿಗೆ ತಕ್ಕ ಹಾಗೆ ಎರಡು ಹಂತಗಳಲ್ಲಿ (ಜು.1-ಸೆ.15 ಮತ್ತು ಅ.1-ನ.30)ಕೈಗೊಳ್ಳಲಾಗುತ್ತದೆ.

ಯಾಕಾಗಿ ‘ಜಲಶಕ್ತಿ’?
ಸದ್ಯ ದೇಶ ಹಿಂದೆಂದೂ ಕಂಡರಿಯದ ಜಲ ಸಂಕಟ ವನ್ನು ಎದುರಿಸುತ್ತಿದ್ದು, ಮಳೆಗಾಲದಲ್ಲಿಯೂ ಜನರು ನೀರಿಗಾಗಿ ಪರದಾಡುವಂತಾಗಿದೆ. ನದಿ-ಹಳ್ಳಗಳಂಥ ಜಲಮೂಲಗಳು ಅತಿಬೇಗನೆ ಬರಿದಾಗುತ್ತಿದ್ದು, ಅಂತರ್ಜಲ ಮಟ್ಟ ಅತ್ಯಂತ ಅಪಾಯಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಪಾರಂಪರಿಕ ಜಲಮೂಲಗಳಾದ ಬಾವಿ, ಕೆರೆ, ಪುಷ್ಕರಿಣಿ ಇತ್ಯಾದಿಗಳ ಬಗ್ಗೆ ಜನತೆ ತೋರಿದ ನಿರ್ಲಕ್ಷ್ಯದಿಂದ ಅವು ಕೂಡ ಅವಸಾನದ ಅಂಚಿನಲ್ಲಿವೆ. 2023ರ ಹೊತ್ತಿಗೆ ದೇಶದ ನೀರಿನ ಬೇಡಿಕೆ ದ್ವಿಗುಣಗೊಳ್ಳುವ ನಿರೀಕ್ಷೆ ಇದೆ. ಇದನ್ನು ಸಂಪೂರ್ಣ ಮನಗಂಡಿರುವ ಪ್ರಧಾನಿ ಮೋದಿ ಜಲಸಂರಕ್ಷಣೆ ಮತ್ತು ಜಲಮರುಪೂರಣದ ರಾಷ್ಟ್ರೀಯ ಜಲಶಕ್ತಿ ಅಭಿಯಾನಕ್ಕೆ ಕರೆ ನೀಡಿದ್ದಾರೆ.

ಜಲಶಕ್ತಿಗೆ ಆಯ್ಕೆಯಾದ ಜಿಲ್ಲೆಗಳು

ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಚಾಮರಾಜನಗರ,ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಗದಗ, ಹಾಸನ, ಹಾವೇರಿ, ಕೋಲಾರ, ಕೊಪ್ಪಳ, ರಾಮನಗರ, ತುಮಕೂರು, ವಿಜಯಪುರ. ಸದ್ಯ ಜಲಶಕ್ತಿ ಅಭಿಯಾನದಡಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಆಯ್ಕೆಯಾಗಿಲ್ಲ. ಆದರೂ ಜಲವರ್ಧನೆ ಸಂಬಂಧಿತ ಕಾರ್ಯಕ್ರಮಗಳು ಈ ಎರಡೂ ಜಿಲ್ಲೆಗಳಲ್ಲಿ ನಡೆಯುತ್ತಿವೆ.

ಕಾಸರಗೋಡಿಗೆ ‘ಜಲಶಕ್ತಿ’

ಕೇರಳದಲ್ಲಿ ಎರಡು ಜಿಲ್ಲೆಗಳನ್ನು ಮಾತ್ರ ಅಭಿಯಾನದಡಿ ಆಯ್ಕೆ ಮಾಡಲಾಗಿದ್ದು, ಕಾಸರ ಗೋಡು ಸೇರಿದೆ. ಇನ್ನೊಂದು ಪಾಲಕ್ಕಾಡ್‌. ಕೇಂದ್ರದಪ್ರತಿನಿಧಿಯಾಗಿ ಅಶೋಕ್‌ ಕುಮಾರ್‌ ಸಿಂಗ್‌ ಮತ್ತುವಾಣಿಜ್ಯ ಸಚಿವಾಲಯದ ಇಂದು ಸಿ. ನಾಯರ್‌ ಕಾಸರಗೋಡಿಗೆ ಆಗಮಿಸಿ, ಜಿಲ್ಲಾಧಿಕಾರಿ-ಜಿ.ಪಂ. ಪ್ರಮುಖರ ಜತೆಗೆ ಚರ್ಚೆ ನಡೆಸಿದ್ದಾರೆ.

-ದಿನೇಶ್‌ ಇರಾ

 

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.