ರಾಜಕಾಲುವೆ ಹೂಳೆತ್ತುವ ಕಾಮಗಾರಿ ಆರಂಭ
Team Udayavani, May 9, 2020, 5:02 AM IST
ಮಂಗಳೂರು: ಇನ್ನೇನು ಕೆಲವು ದಿನಗಳಲ್ಲಿ ಮಳೆಗಾಲ ಆರಂಭವಾಗಲಿದ್ದು, ಮುಂಜಾಗ್ರತಾ ದೃಷ್ಟಿಯಿಂದ ಇದೀಗ ಮಂಗಳೂರು ಮಹಾನಗರ ಪಾಲಿಕೆಯು ನಗರದ ರಾಜಕಾಲುವೆಗಳಲ್ಲಿ ಹೂಳೆತ್ತುವ ಕಾಮಗಾರಿ ಆರಂಭಿಸಿದೆ.
ನಗರದ ಕೊಟ್ಟಾರ ಚೌಕಿ ಬಳಿ ಸುಮಾರು 2 ಕಿ. ಮೀ. ವ್ಯಾಪ್ತಿಯ ರಾಜಕಾಲುವೆಯಲ್ಲಿ ಶುಕ್ರವಾರ ಬೆಳಗ್ಗೆ ಹೂಳೆತ್ತುವ ಕಾಮಗಾರಿ ಆರಂಭಗೊಂಡಿದೆ. ಮುಂದಿನ ದಿನಗಳಲ್ಲಿ ನಗರದ ಇನ್ನುಳಿದ ಭಾಗಗಳಲ್ಲಿಯೂ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಪಾಲಿಕೆ ಎಂಜಿನಿಯರ್ ಮರಳಹಳ್ಳಿ ಅವರು “ಸುದಿನ’ಕ್ಕೆ ತಿಳಿಸಿದ್ದಾರೆ.
ಕಳೆದ ಎರಡು ವರ್ಷಗಳ ಹಿಂದೆ ನಗರದಲ್ಲಿ ಸುರಿದ ಭಾರೀ ಮಳೆಗೆ ನಗರದ ಬಹುತೇಕ ಭಾಗ ಮುಳುಗಡೆಗೊಂಡಿತ್ತು. ರಾಜಕಾಲುವೆ ಹೂಳೆತ್ತದೇ ಇರುವುದೇ ಕಾರಣ ಎಂದು ಸಾರ್ವಜನಿಕರು ದೂರಿದ್ದರು. ಈ ಹಿನ್ನೆಲೆಯಲ್ಲಿ ಈ ಬಾರಿ ಮಳೆಗಾಲ ಆರಂಭಕ್ಕೆ ಒಂದು ತಿಂಗಳು ಇರುವಾಗಲೇ ಮಹಾನಗರ ಪಾಲಿಕೆಯು ಹೂಳೆತ್ತುವ ಕಾಮಗಾರಿ ಆರಂಭಿಸಿದೆ.
ಹೆದ್ದಾರಿ ಇಲಾಖೆಯಿಂದ
ಕಾಮಗಾರಿ ಆರಂಭ
ನಗರದ ನಂತೂರು ವೃತ್ತ ಬಳಿ ಹೆದ್ದಾರಿ ಇಲಾಖೆಯಿಂದ ಕಾಮಗಾರಿ ಆರಂಭವಾಗಿದೆ. ಕಳೆದ ಕೆಲವು ವರ್ಷಗಳಿಂದ ಮಳೆಗಾಲದಲ್ಲಿ ನಂತೂರು ವೃತ್ತ ಬಳಿ ನೀರು ನಿಂತು ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿತ್ತು. ಕೆ.ಪಿ.ಟಿ. ಕಡೆಯಿಂದ ನಂತೂರಿಗೆ ಇಳಿಜಾರು ಇದ್ದು, ಈ ಪ್ರದೇಶದಿಂದ ಮಳೆ ನೀರು ಬಂದು ನಂತೂರು ವೃತ್ತ ಬಳಿ ನಿಲ್ಲುತ್ತಿತ್ತು. ಇದೀಗ ನಂತೂರು ವೃತ್ತದಿಂದ ಕುಲಶೇಖರ ಕಡೆ ತೆರಳುವ ರಾಷ್ಟ್ರೀಯ ಹೆದ್ದಾರಿಯ ಒಂದು ಕಡೆ ರಸ್ತೆ ಬಂದ್ ಮಾಡಲಾಗಿದ್ದು, ರಸ್ತೆ ಅಗೆದು ಕಾಮಗಾರಿ ಆರಂಭವಾಗಲಿದೆ. ಹೆದ್ದಾರಿ ಇಲಾಖೆ ಅಧಿಕಾರಿಗಳು ಹೇಳುವಂತೆ ಮುಂದಿನ ಸುಮಾರು ಮೂರು ವಾರಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
ಬಸ್ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ