ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!


Team Udayavani, Apr 26, 2024, 4:21 PM IST

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಮಹಾನಗರ: ಮಕ್ಕಳಿಗೆ ಶೈಕ್ಷಣಕ ವರ್ಷ ಮುಗಿದು ಬೇಸಗೆ ರಜೆ ಆರಂಭವಾಗಿ ಎರಡು ವಾರಗಳು ಕಳೆದಿವೆ. ಆದರೆ ಮೈದಾನಗಳು, ಗದ್ದೆ, ಬಯಲುಗಳು, ಓಣಿ-ಕೇರಿಗಳಲ್ಲಿ ಮಕ್ಕಳ ಕಲರವ ಮಾತ್ರ ಕೇಳಿಸುತ್ತಿಲ್ಲ!

ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಬಿಸಿಲ ಝಳ ಹೆಚ್ಚಾಗಿದ್ದು, ರಜೆಯಲ್ಲಿ ಮಕ್ಕಳನ್ನು ಮನೆಯಿಂದ ಹೊರಗೆ ಬಾರದಂತೆ ತಡೆಯುತ್ತಿದೆ. ಇದರಿಂದಾಗಿ ಮಕ್ಕಳು ಮೈದಾನಗಳ ಬದಲು ಮನೆಯಲ್ಲೇ ರಜೆ ಕಳೆಯುವಂತಾಗಿದೆ. ಬ್ಯಾಟ್‌-ಬಾಲ್‌
ಹಿಡಿದುಕೊಂಡು ಮೈದಾನಕ್ಕೆ ಹೋಗುತ್ತಿದ್ದ ವಿದ್ಯಾರ್ಥಿಗಳು ಮನೆಯಲ್ಲೇ ಟಿ.ವಿ. ನೋಡುತ್ತಾ, ಒಳಾಂಗಣ ಆಟಗಳನ್ನು
ಆಡುತ್ತಾ ಕಾಲ ಕಳೆಯುವಂತಾಗಿದೆ.

ಸಾಮಾನ್ಯವಾಗಿ ಬೇಸಗೆ ರಜೆ ಆರಂಭವಾಯಿತೆಂದರೆ ಮೈದಾನಗಳು ಮಕ್ಕಳಿಂದ ತುಂಬಿರುತಿತ್ತು. ಬೆಳಗ್ಗೆ ಆರಂಭವಾದರೆ ಮಧ್ಯಾಹ್ನದವರೆಗೂ ಆಡವಾಡುವುದು, ಸಂಜೆ ಮತ್ತೆ ಬಂದು ಆಟ, ಹೀಗೆ ದಿನವಿಡೀ ಆಟವಾಡುವುದೇ ಮಕ್ಕಳ ಕೆಲಸವಾಗಿರುತಿತ್ತು. ಆದರೆ ಪ್ರಸ್ತುತ ಮೈದಾನಗಳೆಲ್ಲ ಖಾಲಿಯಾಗಿ ಕಂಡು ಬರುತ್ತಿವೆ. ಆಡಲೇಬೇಕು ಎನ್ನುವವರು ಮಾತ್ರ ಮನೆಯಲ್ಲಿ ಅಂಗಳದ ಸಣ್ಣ ಜಾಗದಲ್ಲಿ ಆಡುತ್ತಿದ್ದಾರೆ. ಕ್ರಿಕೆಟ್‌ ಕೋಚಿಂಗ್‌ ಶಿಬಿರಗಳು ಬಿಸಿಲಿನ ಬದಲು ಬೆಳಗ್ಗೆ – ಸಂಜೆಯ ನೆರಳಿನಲ್ಲೇ ಆಯೋಜಿಸಲಾಗುತ್ತಿದೆ. ನಗರ ಪ್ರದೇಶದಲ್ಲಿ ಮಾತ್ರವಲ್ಲ, ಗ್ರಾಮೀಣ ಭಾಗದಲ್ಲೂ ಇದೇ ಪರಿಸ್ಥಿತಿ ಇರುವುದು ವಿಪರ್ಯಾಸ.

ಮುಂಜಾನೆಯಿಂದಲೇ ಸೆಖೆ ಬೆಳಗ್ಗೆ 8-9 ಗಂಟೆಯಿಂದಲೇ ಆರಂಭವಾಗುವ ಉರಿ ಸೆಖೆ ಸಂಜೆ 6 ಗಂಟೆಯ ವರೆಗೂ ಅನುಭವವಾಗುತ್ತದೆ. ಇದರಿಂದಾಗಿ ಸ್ವಲ್ಪ ಆಟವಾಡಿದರೂ ದಣಿವು ಹೆಚ್ಚಾಗುತ್ತದೆ. ನೀರು ಕುಡಿಯದಿದ್ದರೆ ನಿರ್ಜಲೀಕರಣ ಸಮಸ್ಯೆಯೂ ಹೆಚ್ಚಾಗಿ ತಲೆ ತಿರುಗುವುದು ಮೊದಲಾದವುಗಳು ಉಂಟಾಗುತ್ತವೆ. ಹಾಗಾಗಿ ಬಹುತೇಕ ಮಕ್ಕಳು ಮೈದಾನದ ಬದಲು ಮನೆಯನ್ನೇ ಆಟದ ಮೈದಾನವನ್ನಾಗಿ ಮಾಡಿಕೊಂಡಿದ್ದಾರೆ. ಹೆತ್ತವರೂ ಮಕ್ಕಳನ್ನು ಬಿಸಿಲಿಗೆ ಹೋಗಲು ಬಿಡುತ್ತಿಲ್ಲ.

ಬಿಸಿಲಲ್ಲಿ ಆಟವಾಡುವವರು ಮುನ್ನೆಚ್ಚರಿಕೆ ವಹಿಸಿ 
*ಮೈದಾನಗಳಲ್ಲಿ ಬಿಸಿಲಿಗೆ ಆಟ ಆಡುವಾಗ ತಲೆಗೆ ಟೋಪಿ, ಫುಲ್‌ ಕೈಯ ಟಿ-ಶರ್ಟ್‌ ಪ್ಯಾಂಟ್‌ ಧರಿಸಬೇಕು.
*ನಿರ್ಜಲೀಕರಣ ಸಮಸ್ಯೆ ಉಂಟಾಗುವುದರಿಂದ ಸಾಕಷ್ಟು ನೀರು ಕುಡಿಯಬೇಕು.
*ಹಣ್ಣಿನ ರಸ – ಲಿಂಬೆ ಪಾನಕ, ಮಜ್ಜಿಗೆ, ಎಳನೀರು ಸೇವನೆ ಉತ್ತಮ.
*ಒಂದೆರಡು ಗಂಟೆ ಆಟವಾಡಿದ ಬಳಿಕ ವಿಶ್ರಾಂತಿ ತೆಗೆದುಕೊಳ್ಳಬೇಕು.
*ಬಿಸಿಲಿಗಿಂತ ನೆರಳು ಇರುವ ಪ್ರದೇಶವನ್ನೇ ಆಟಕ್ಕೆ ಆಯ್ಕೆ ಮಾಡುವುದು ಉತ್ತಮ.

ಸ್ವಿಮ್ಮಿಂಗ್‌ ಪೂಲ್‌ಗ‌ಳು ಫುಲ್‌
ಬೇಸಗೆ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯ ಈಜು ಕೊಳಗಳಿಗೆ ಬರುವ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಬೆಳಗ್ಗೆ- ಸಂಜೆಯ ಅವಧಿಯಲ್ಲಿ ಸ್ವಿಮ್ಮಿಂಗ್‌ ಪೂಲ್‌ಗ‌ಳು ರಶ್‌ ಆಗಿದ್ದು, ಸಾಮಾನ್ಯ ದಿನಗಳಲ್ಲಿ ಬರುವುದಕ್ಕಿಂತ ದುಪ್ಪಟ್ಟು ಜನರು ಈಜುಕೊಳಕ್ಕೆ ಬರುತ್ತಿದ್ದಾರೆ. ಸ್ವಿಮ್ಮಿಂಗ್‌ ಕ್ಯಾಂಪ್‌ಗ್ಳಿಗೂ ಬೇಡಿಕೆ ಹೆಚ್ಚಾಗಿದ್ದು, ಒಂದಷ್ಟು ಹೊತ್ತಾದರೂ ನೀರಿನಲ್ಲಿ ತಂಪಾಗಿರಬಹುದು ಎನ್ನುವ ಉದ್ದೇಶದಿಂದ ಮಕ್ಕಳು ಶಿಬಿರಗಳಿಗೆ ಸೇರಿಕೊಳ್ಳುತ್ತಿದ್ದಾರೆ.

*ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.