ಎಡಪದವು: ಗ್ರಾಮಸ್ಥರ ನೆಮ್ಮದಿ ಹಾಳು ಮಾಡಿದ ನೊಣಗಳು

ನೊಣ ಕಾಟಕ್ಕೆ ಕಾರಣವಾಗಿರುವ ಕೋಳಿ ಫಾರಂ.

Team Udayavani, Aug 5, 2019, 5:05 AM IST

c-26

ಎಡಪದವು: ಎಡಪದವು ಪಂಚಾಯತ್‌ ವ್ಯಾಪ್ತಿಯ ಕಿನ್ನಿಬೆಟ್ಟು ನಲ್ಯೆ ಗ್ರಾಮದಲ್ಲಿ ನೊಣಗಳ ಕಾಟದಿಂದಾಗಿ ಊರಿನವರೂ ನೆಮ್ಮದಿಯನ್ನು ಕಳೆದುಕೊಂಡಿದ್ದಾರೆ.

ಈ ಪ್ರದೇಶದಲ್ಲಿರುವ ಕೋಳಿ ಫಾರಂನ ಸ್ವಚ್ಛತೆಯ ಕೊರತೆ ಇದ್ದು ಮತ್ತು ಕೋಳಿಗಳಿಗೆ ಹಾಕುವ ಆಹಾರಗಳಿಂದಾಗಿ ನೊಣಗಳು ರಕ್ತಬೀಜಾಸುರನಂತೆ ಹುಟ್ಟಿಕೊಳ್ಳುತ್ತಿವೆ. ಇದೇ ನೊಣಗಳು ಊರಿಗೆ ಹರಡಿಕೊಂಡು ಗ್ರಾಮಸ್ಥರ ನೆಮ್ಮದಿ ಹಾಳುಗೆಡುತ್ತಿರುವುದಕ್ಕೆ ಕಾರಣ ಎಂಬುದು ಗ್ರಾಮಸ್ಥರು ವಾದ. ಈ ಬಗ್ಗೆ ಇತ್ತೀಚೆಗೆ ಗ್ರಾಮಸಭೆಯಲ್ಲಿ ಕೂಡ ಆರೋಪಿಸಲಾಗಿತ್ತು.

ಕಿನ್ನಿಬೆಟ್ಟುವಿನ ಮನೆಗಳು, ಹೊಟೇಲ್ ಸಹಿತ ಎಲ್ಲ ಕಡೆಗಳಲ್ಲೂ ನೊಣಗಳದ್ದೇ ಪಾರಮ್ಯ. ನೊಣಗಳ ಕಾಟ ತಪ್ಪಿಸುವುದಕ್ಕೆ ಊರಿನವರೂ ರಾಸಾಯನಿಕ ಔಷಧವನ್ನು ಸಿಂಪಡಿಸುತ್ತಿದ್ದು ಇದರಿಂದಾಗಿ ರಾಸಾಯನಿಕವೂ ಕುಡಿಯುವ ನೀರು, ಊಟದಲ್ಲಿ ಸೇರಿ ನೀರು, ಊಟವೂ ಸೇರದಂತಾಗಿದೆ. ಇದರಿಂದ ಜನರೂ ಉಪವಾಸ ಮಾಡುವಂತಾಗಿದೆ.

ಕಿನ್ನಿಬೆಟ್ಟುವಿನ ರಾಕೇಶ್‌ ಎಂಬವವರ ಮನೆಯಲ್ಲಿ ನೊಣಗಳ ಕಾಟ ಹೆಚ್ಚಾಗಿದ್ದು ಅವರ ಮನೆಯ ಸಂತೋಷವನ್ನು ಕಿತ್ತುಕೊಂಡಿವೆ. ಮನೆಯಲ್ಲಿ ಮಾಡಿರುವ ಅಡುಗೆಗೆ ನೊಣಗಳ ದಿಂಡು ಆವರಿಸಿಕೊಳ್ಳುವುದರಿಂದ ಮಾಡಿದ ಅಡುಗೆ ತಿನ್ನಲಾಗದೇ ಮನೆಯ ಸಾಕು ಪ್ರಾಣಿಗಳಿಗೆ ಹಾಕುವಂತಾಗಿದೆ.

ಆರೋಗ್ಯ ಇಲಾಖೆಯಿಂದ ಸ್ಥಳಪರಿಶೀಲನೆ
ಈಗಾಗಲೇ ಎಡಪದವು ಪಂಚಾಯತ್‌ ಅಧ್ಯಕ್ಷೆ, ಪಿಡಿಒ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ವರದಿ ತಯಾರಿಸಿ ಆರೋಗ್ಯ ಇಲಾಖೆಗೆ ನೀಡಿದ್ದಾರೆ.

ಆಲ್ಲದೆ ಈ ಬಗ್ಗೆ ಎಡಪದವು ಗ್ರಾಮ ಸಭೆಯಲ್ಲೂ ಬಿಸಿಬಿಸಿ ಚರ್ಚೆ ನಡೆದಿದ್ದು, ಕ್ರಮ ಕೈಗೊಳ್ಳುವ ಭರವಸೆ ಅರೋಗ್ಯ ಇಲಾಖಾ ಅಧಿಕಾರಿಗಳು, ಪಂಚಾಯತ್‌ ಅಧಿಕಾರಿಗಳು, ಆಡಳಿತ ಮಂಡಳಿ ನೀಡಿದೆ.

ತಾಲೂಕು ಆರೋಗ್ಯ ಕೇಂದ್ರಕ್ಕೆ ವರದಿ ಸಲ್ಲಿಕೆ
ನೊಣಗಳ ಸಮಸ್ಯೆಗಳ ಬಗ್ಗೆ ಗ್ರಾಮಸಭೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೊಂಪದವು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಚೈತನ್ಯ ಅವರು ಸ್ಥಳಪರಿಶೀಲನೆ ನಡೆಸಿದ್ದು ಇದರ ವರದಿ ತಯಾರಿಸಿ ತಾಲೂಕು ಆರೋಗ್ಯ ಕೇಂದ್ರಕ್ಕೆ ನೀಡಲಿದ್ದಾರೆ.

ಗ್ರಾಮಸಭೆ ನಡೆದ ಮರುದಿನವೇ ಪಂಚಾಯತ್‌ ಪಿಡಿಒ ಅವರು ಕೋಳಿ ಫಾರಂ ಮಾಲಕರಿಗೆ ನೋಟಿಸ್‌ ಕಳಿಸಿದ್ದು, ಫಾರಂನಲ್ಲಿ ನೊಣಗಳನ್ನು ನಿಯಂತ್ರಿಸಲು ತಿಳಿಸಲಾಗಿದೆ, ಇಲ್ಲವಾದರೆ ಕೋಳಿ ಫಾರಂ ಮುಚ್ಚಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಈ ಸಮಸ್ಯೆ ಮುಂದುವರಿದರೆ ಕೋಳಿ ಫಾರಂ ವಿರುದ್ಧ ಕ್ರಮ ಕೈಗೊಳ್ಳುವುದು ಎಂದು ಎಡಪದವು ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ಗಂಗಾಧರ ತಿಳಿಸಿದ್ದಾರೆ.

ಸೂಕ್ತ ಕ್ರಮಕ್ಕೆ ಆಗ್ರಹ
ಕಿನ್ನಿಬೆಟ್ಟು ನಲ್ಯ ಪರಿಸರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನೊಣಗಳ ಉತ್ಪಾದನೆಯ ಕಾರಣಗಳನ್ನು ತಿಳಿದುಕೊಂಡು ಕೋಳಿ ಫಾರಂನ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ವರದಿಯನ್ನು ಗ್ರಾಮ ಪಂಚಾಯತ್‌ಗೆ ಸಲ್ಲಿಸಿದ್ದೇವೆ. ಈ ಬಗ್ಗೆ ಕ್ರಮ ಕೈಗೊಳ್ಳಬಹುದು.
– ಡಾ| ಚೈತನ್ಯ, ವೈದ್ಯಾಧಿಕಾರಿ, ಕೊಂಪದವು ಪ್ರಾಥಮಿಕ ಆರೋಗ್ಯ ಕೇಂದ್ರ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.