ಪೊಲೀಸರ ಲಾಠಿ, ರಿವಾಲ್ವರ್ ಪ್ರದರ್ಶನಕ್ಕಲ್ಲ: ಹಲ್ಲೆಕೋರರಿಗೆ ಕೋಟ ಎಚ್ಚರಿಕೆ
Team Udayavani, Apr 23, 2020, 10:04 AM IST
ಮಂಗಳೂರು: ಕೋವಿಡ್ ವಾರಿಯರ್ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು, ಪೊಲೀಸರು, ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಗೂಂಡಾ ಕೇಸ್ ಹಾಕಿ ಜೈಲಿಗಟ್ಟಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ವಾರಿಯರ್ ಮೇಲೆ ಹಲ್ಲೆ ಪ್ರಕರಣಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಪೊಲೀಸರಿಗೆ ಲಾಠಿ, ರಿವಾಲ್ವರ್ ಕೊಟ್ಟಿರುವುದು, ಪ್ರದರ್ಶನಕ್ಕೆ ಅಲ್ಲ, ಜೀವರಕ್ಷಣೆಗಾಗಿ. ಅವರ ಮೇಲೆ ನಡೆ ಯುವ ಹಲ್ಲೆಯನ್ನು ಸಹಿಸುವುದು ಅಸಾಧ್ಯ. ಕೊರೊನಾ ತಪಾಸಣೆಗೆ ಹೋದವರ ಮೇಲೆ ಹಲ್ಲೆಗೆ ಯಾರಾದರೂ ಮುಂದಾದಲ್ಲಿ ಯಾವುದೇ ಮುಲಾ ಜಿಲ್ಲದೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು. ಜನರಿಗೆ ಮುಜರಾಯಿ ಇಲಾಖೆಯ ವತಿಯಿಂದ ಪ್ರತೀ ದೇವಸ್ಥಾನದಲ್ಲೂ ಆಹಾರ ವಿತರಿಸಲಾಗುತ್ತಿದೆ ಎಂದು ಅವರು ಹೇಳಿದರು.
ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಪತ್ರಕರ್ತರ ಆರೋಗ್ಯ ತಪಾಸಣೆ ನಡೆಸಲು ವ್ಯವಸ್ಥೆ ಮಾಡಬೇಕೆಂದು ಕೋರಿ ಸಂಘದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಈ ವೇಳೆ ಮನವಿ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ