ಕೇರಳದಲ್ಲಿ ದುರ್ಬಲಗೊಂಡ ಮಾರುತ ; ರಾಜ್ಯ ಕರಾವಳಿಗೆ ಮುಂಗಾರು ವಿಳಂಬ ಸಾಧ್ಯತೆ
Team Udayavani, Jun 4, 2020, 10:37 AM IST
ನಿಸರ್ಗ ಚಂಡಮಾರುತ ಪರಿಣಾಮ ತಣ್ಣಿರುಬಾವಿ ಸಮುದ್ರ ತೀರದಲ್ಲಿ ಬುಧವಾರದ ನೋಟ.
ಮಂಗಳೂರು: ಕೇರಳ ಕರಾವಳಿ ಭಾಗಕ್ಕೆ ಸೋಮವಾರ ಅಪ್ಪಳಿಸಿದ ಮುಂಗಾರು ದುರ್ಬಲಗೊಂಡ ಪರಿಣಾಮ ಕರಾವಳಿ ಭಾಗಕ್ಕೆ ಮುಂಗಾರು ಅಪ್ಪಳಿಸುವುದು ತಡವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕೇರಳದಲ್ಲಿ ಮಳೆ ತೀವ್ರತೆ ಕಡಿಮೆಯಾಗಿದೆ. ಇದೇ ಕಾರಣಕ್ಕೆ ಗುರುವಾರ ಅಥವಾ ಶುಕ್ರವಾರ ರಾಜ್ಯ ಕರಾವಳಿ ಭಾಗಕ್ಕೆ ಮುಂಗಾರು ಪ್ರವೇಶ ಪಡೆಯುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಗುರುವಾರ “ಆರೆಂಜ್ ಅಲರ್ಟ್’ ಘೋಷಣೆ ಮಾಡಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದೆ. ನಿಸರ್ಗ ಚಂಡಮಾರುತದ ಪರಿಣಾಮ ರಾಜ್ಯ ಕರಾವಳಿ ಪ್ರದೇಶಕ್ಕೆ ಬೀರುವ ಸಾಧ್ಯತೆ ಕಡಿಮೆ ಎಂದು ಹೇಳುತ್ತಾರೆ ಹವಾಮಾನ ಇಲಾಖೆ ಅಧಿಕಾರಿಗಳು.
ಮಳೆ ಪ್ರಮಾಣ ಇಳಿಕೆ
ಕಳೆದ 2 ದಿನಗಳಿಂದ ಜಿಲ್ಲೆಯಲ್ಲಿ ಸುರಿ ಯುತ್ತಿದ್ದ ಮಳೆ ಪ್ರಮಾಣ ಬುಧವಾರ ತುಸು ಇಳಿಕೆ ಕಂಡಿದೆ. ಮಂಗಳೂರು ನಗರದಲ್ಲಿ ಬುಧವಾರ ಬೆಳಗ್ಗಿನ ಜಾವ ಮತ್ತು ರಾತ್ರಿ ವೇಳೆ ಉತ್ತಮ ಗಾಳಿ-ಮಳೆಯಾಗಿತ್ತು.
ಉಡುಪಿ ಜಿಲ್ಲೆಯ ವಿವಿಧೆಡೆ ಹಗುರ ಮಳೆ
ಉಡುಪಿ: ಜಿಲ್ಲೆಯ ವಿವಿಧೆಡೆಗಳಲ್ಲಿ ಬುಧವಾರ ಸಂಜೆ ವೇಳೆಗೆ ಸಾಧಾರಣ ಗಾಳಿ-ಮಳೆಯಾಗಿದೆ. ಬೆಳಗ್ಗೆ ಕೆಲವೆಡೆ ತುಂತುರು ಮಳೆಯಾಗಿತ್ತು. ದಿನವಿಡಿ ಮೋಡದ ವಾತಾವರಣವಿತ್ತು. ಸಂಜೆ ವೇಳೆಗೆ ಉಡುಪಿ, ಕುಂದಾಪುರ, ಬ್ರಹ್ಮಾವರ, ಹೆಬ್ರಿ, ಕಾಪು ಸಹಿತ ಹಲವು ಭಾಗಗಳಲ್ಲಿ ಕೆಲವು ಹೊತ್ತು ಮಳೆ ಸುರಿದಿದೆ. ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಕಾಸರಗೋಡು ಜಿಲ್ಲೆಯಲ್ಲಿ ಮಳೆ
ಕಾಸರಗೋಡು: ಜಿಲ್ಲೆಯ ಬಹುತೇಕ ಕಡೆ ಬುಧವಾರ ಗಾಳಿ-ಮಳೆಯಾಗಿದೆ. ಕಾಸರ ಗೋಡು ಹೈಯರ್ ಸೆಕೆಂಡರಿ ಶಾಲೆ ಮೇಲೆ ಮರ ಬಿದ್ದು ವಾಟರ್ ಟ್ಯಾಂಕ್ ನಾಶಗೊಂಡಿದೆ. ಕಟ್ಟಡಕ್ಕೂ ಹಾನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ