ಏರುತ್ತಲೇ ಇದೆ ಕೋವಿಡ್ ಸೋಂಕು ; ಸಾರ್ವಜನಿಕರಿಗೆ ಇನ್ನೂ ಸಿಕ್ಕಿಲ್ಲ ಉಚಿತ “ಆಯುಷ್‌’ ಔಷಧ


Team Udayavani, Jun 6, 2020, 9:49 AM IST

ಏರುತ್ತಲೇ ಇದೆ ಕೋವಿಡ್ ಸೋಂಕು ; ಸಾರ್ವಜನಿಕರಿಗೆ ಇನ್ನೂ ಸಿಕ್ಕಿಲ್ಲ ಉಚಿತ “ಆಯುಷ್‌’ ಔಷಧ

ಸಾಂದರ್ಭಿಕ ಚಿತ್ರ

ಮಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ವತಿಯಿಂದ “ಆಯುಷ್‌’ ಇಲಾಖೆ ಮೂಲಕ ಸಾರ್ವಜನಿಕರಿಗೆ ರೋಗ ನಿರೋಧಕ ಶಕ್ತಿ
ವೃದ್ಧಿಸುವ ಔಷಧ ವಿತರಿಸುವುದಾಗಿ ಹೇಳಿದ್ದರೂ ದ.ಕ. ಸಹಿತ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಇನ್ನೂ ಲಭ್ಯವಾಗುತ್ತಿಲ್ಲ. ಜಿಲ್ಲೆಯಲ್ಲಿ ಪ್ರಸ್ತುತ “ಕೋವಿಡ್ ವಾರಿಯರ್’ಗಳಾಗಿರುವ ಆಶಾ ಕಾರ್ಯಕರ್ತೆಯರಿಗೆ ಮಾತ್ರ ಔಷಧ ವಿತರಿಸಲಾಗಿದೆ.

ಪೊಲೀಸರಿಗೆ ಶೀಘ್ರದಲ್ಲೇ ಈ ಔಷಧ ವಿತರಣೆ ಯಾಗಲಿದೆ. ಆದರೆ ಸಾರ್ವ ಜನಿಕರಿಗೆ ವಿತರಿಸಲು ಔಷಧದ ಕೊರತೆಯಿದೆ. ಸದ್ಯಕ್ಕೆ ಪೂರೈಕೆ ಯಾಗಿರುವ ಔಷಧವನ್ನು ಆಯುಷ್‌ ರಾಜ್ಯ ಕಚೇರಿಯಿಂದ ಜಿಲ್ಲಾವಾರು ಹಂಚಿಕೆ ಮಾಡಿ ರವಾನಿಸುತ್ತಿದ್ದು, ಜಿಲ್ಲೆಗೆ ಸದ್ಯಕ್ಕೆ 5,000 ಆಯುಷ್‌ ಕಿಟ್‌ಗಳು ಬರಲಿವೆ. ಜಿಲ್ಲೆಯ ಕೆಲವು ಖಾಸಗಿ ಆಯುರ್ವೇದ ಸಂಸ್ಥೆಗಳಿಂದಲೂ ಔಷಧ ಪಡೆದು ಕೊಳ್ಳಲು ಆಯುಷ್‌ ಇಲಾಖೆ ನಿರ್ಧರಿಸಿದೆ. ಜಿಲ್ಲೆಯಲ್ಲಿ ಕೋವಿಡ್ ವಾರಿಯರ್ ಗಳಾಗಿರುವವರೇ ಸುಮಾರು 25,000 ಮಂದಿಯಿದ್ದಾರೆ. ಜಿಲ್ಲೆಯ ಜನಸಂಖ್ಯೆ 20 ಲಕ್ಷಕ್ಕೂ ಅಧಿಕವಿದೆ. ಹಾಗಾಗಿ, ಮತ್ತಷ್ಟು ಔಷಧಕ್ಕಾಗಿ ಸರಕಾರಕ್ಕೆ ಬೇಡಿಕೆ ಸಲ್ಲಿಸಲಾಗಿದೆ.

2 ಗ್ರಾಮಗಳಲ್ಲಿ ವಿತರಣೆ
ಬಂಟ್ವಾಳ ತಾ|ನ ಬಾಳೆಪುಣಿ ಗ್ರಾ.ಪಂ.ನ ಬಾಳೆಪುಣಿ ಮತ್ತು ಕೈರಂಗಳ ಗ್ರಾಮಗಳ ಸುಮಾರು 10,000 ಮಂದಿ ಗ್ರಾಮಸ್ಥರಿಗೆ ಉಚಿತವಾಗಿ ಹೋಮಿಯೋಪತಿ ಔಷಧ ವಿತರಣಾ ಪ್ರಕ್ರಿಯೆ ಆರಂಭಗೊಂಡಿದೆ. ಇದು ಗ್ರಾ.ಪಂ., ಜನ ಶಿಕ್ಷಣ ಟ್ರಸ್ಟ್‌, ಆಯುಷ್‌ ಇಲಾಖೆ ಮತ್ತು ದೇರಳ ಕಟ್ಟೆಯ ಫಾದರ್‌ ಮುಲ್ಲರ್‌ ಹೋಮಿಯೋಪತಿ ಕಾಲೇಜಿನ ಸಹಯೋಗದಲ್ಲಿ ಆಶಾ ಕಾರ್ಯಕರ್ತೆಯರ ಮೂಲಕ ನಡೆಯುತ್ತಿದೆ. ಇತರ ಗ್ರಾಮಗಳಲ್ಲಿಯೂ ವಿವಿಧ
ಸಂಘ-ಸಂಸ್ಥೆ ಗಳು ಇದೇ ರೀತಿ ಔಷಧ ವಿತರಣೆ ಕಾರ್ಯದಲ್ಲಿ ಕೈ ಜೋಡಿಸಿದರೆ ಅನುಕೂಲವಾಗಬಹುದು ಎನ್ನುತ್ತಾರೆ ಜಿಲ್ಲೆ ಆಯುಷ್‌ ಅಧಿಕಾರಿಗಳು.

ದಾಸ್ತಾನು ಬಂದರೆ ಪೂರೈಕೆ
ಸದ್ಯಕ್ಕೆ ಹೋಮಿಯೋಪತಿ, ಆಯುಷ್‌, ಯುನಾನಿ ಔಷಧಗಳ ಪೂರೈಕೆಗೆ ತಕ್ಕಂತೆ ಆಯಾ ಜಿಲ್ಲೆಗಳಿಗೆ ಕಳುಹಿಸಿ ಕೊಡಲಾಗುತ್ತಿದೆ. ಹೆಚ್ಚಿನ ಜಿಲ್ಲೆ ಗಳಲ್ಲಿ ಮೊದಲ ಹಂತದಲ್ಲಿ ಆಶಾ ಕಾರ್ಯಕರ್ತೆಯರು ಸಹಿತ ಕೋವಿಡ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರಿಗೆ ವಿತರಿಸ ಲಾಗುತ್ತಿದೆ. ಮುಂದಿನ ಹಂತದಲ್ಲಿ ಸಾರ್ವಜನಿಕರಿಗೂ ಉಚಿತವಾಗಿ ವಿತರಣೆ ಯಾಗಲಿದೆ ಎನ್ನುತ್ತಾರೆ ಆಯುಷ್‌ ಇಲಾಖೆ ಬೆಂಗಳೂರಿನ ಆಯುಕ್ತರ ಕಚೇರಿ ಅಧಿಕಾರಿಗಳು.

ಆಯುಷ್‌ ಕಿಟ್‌ನಲ್ಲೇನಿದೆ?
ಕೋವಿಡ್ ಸಂದರ್ಭದಲ್ಲಿ ಇಲಾಖೆ ವತಿಯಿಂದ ನೀಡುವ ಆಯುಷ್‌ ಕಿಟ್‌ನಲ್ಲಿ ಆಯುರ್ವೇದ, ಹೋಮಿಯೋಪತಿ ಮತ್ತು ಯುನಾನಿ ಔಷಧಗಳಿರುತ್ತವೆ. ಅಂದರೆ, ಆಯುರ್ವೇದ ಮತ್ತು ಹೋಮಿಯೋಪತಿಯ ಮಾತ್ರೆಗಳು ಹಾಗೂ ಮೂಗಿಗೆ ಹಾಕುವ ಯುನಾನಿ ಡ್ರಾಪ್‌ ಒಳಗೊಂಡಿರುತ್ತದೆ.

ಸಾರ್ವಜನಿಕರಿಗೆ ಸದ್ಯಕ್ಕಿಲ್ಲ
ಕೇಂದ್ರ ಸರಕಾರದ ಸೂಚನೆಯಂತೆ ಜಿಲ್ಲೆಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಹೋಮಿಯೋಪತಿ, ಆಯುರ್ವೇದ ಮತ್ತು ಯುನಾನಿ ಔಷಧ ವಿತರಿಸಲು ಸಿದ್ಧತೆ ನಡೆಸಲಾಗಿದೆ. ಆದರೆ, ಔಷಧದ ಕೊರತೆಯಿಂದಾಗಿ ಸದ್ಯಕ್ಕೆ ಸಾರ್ವಜನಿಕರಿಗೆ ಉಚಿತವಾಗಿ ವಿತರಿಸುವುದು ಅಸಾಧ್ಯವಾಗಿದೆ. ಖಾಸಗಿ ಆಯುರ್ವೇದ ಸಂಸ್ಥೆಗಳ ಸಹಾಯದಿಂದ ಪೊಲೀಸರು ಹಾಗೂ ಇತರ ಕೋವಿಡ್ ವಾರಿಯರ್ಗಳಿಗೂ ವಿತರಿಸಲಾಗವುದು. ಆಯುಷ್‌ ಔಷಧವಲ್ಲದೆ ಸಾರ್ವಜನಿಕರು ಮನೆಗಳಲ್ಲಿಯೇ ಮಾಡಬಹುದಾದ ಹಲವು ಔಷಧಗಳಿವೆ. ಈ ಬಗ್ಗೆಯೂ ಆಯುಷ್‌ ಇಲಾಖೆಯ ವೆಬ್‌ಸೈಟ್‌ನಲ್ಲಿ ಲಭ್ಯವಿದ್ದು, ಹೆಚ್ಚಿನ ಮಾಹಿತಿಗೆ ಇಲಾಖೆ ಮಂಗಳೂರು ಕಚೇರಿಯನ್ನು ಸಂಪರ್ಕಿಸಬಹುದು.
 -ಡಾ| ಮಹಮ್ಮದ್‌ ಇಕ್ಬಾಲ್‌, ಜಿಲ್ಲಾ “ಆಯುಷ್‌’ ಅಧಿಕಾರಿ, ದ.ಕ. ಜಿಲ್ಲೆ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.