ರಂಜಿಸಿದ ಕಂಬಳ ಕೋಣ ಸೌಂದರ್ಯ ಸ್ಪರ್ಧೆ


Team Udayavani, Dec 2, 2017, 8:51 AM IST

02-11.jpg

ವಿದ್ಯಾಗಿರಿ, ಮೂಡಬಿದಿರೆ: ಆಳ್ವಾಸ್‌ ನುಡಿಸಿರಿಯ ಕೃಷಿ ಸಿರಿಯ ಅಂಗವಾಗಿ ಶುಕ್ರ ವಾರ ಆಯೋಜಿಸಿದ್ದ ವಿನೂತನ ಪರಿಕಲ್ಪನೆ ಕಂಬಳ ಕೋಣಗಳ ಸೌಂದರ್ಯ ಸ್ಪರ್ಧೆಯಲ್ಲಿ ಕೊಳಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್‌ ಅವರ ಕಂಬಳದ ಕೋಣಗಳಾದ “ಕುಟ್ಟಿ -ಕುದ್ರಾಡಿ’ ಜೋಡಿ ಪ್ರಥಮ ಪ್ರಶಸ್ತಿ ಗಳಿಸಿ 50,000 ರೂ. ನಗದು ಪುರಸ್ಕಾರವನ್ನು ಪಡೆದುಕೊಂಡಿದೆ. ಹೊಸಬೆಟ್ಟು ಏರಿಮಾರು ಗೋಪಾಲಕೃಷ್ಣ ಭಟ್‌ ಅವರ ಕಂಬಳದ ಕೋಣ ಗಳಾದ “ಕುಂಞ-ಕಾಜ’ ದ್ವಿತೀಯ ಪ್ರಶಸ್ತಿ ಯೊಂದಿಗೆ 30,000 ರೂ. ನಗದು ಪುರಸ್ಕಾರಕ್ಕೆ ಪಾತ್ರವಾಯಿತು.

ಕೋಣಗಳ ದೇಹ ಸೌಂದರ್ಯ, ಅಲಂಕಾರ, ನಡಿಗೆಯ ಗತ್ತು ಮುಂತಾದ ಅಂಶಗಳನ್ನು ಪರಿಗಣಿಸಿ ಪ್ರಶಸ್ತಿಗಳನ್ನು ನೀಡಲಾಗಿದೆ. ಕೊಳಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್‌ ಅವರ ಕಂಬಳದ ಕೋಣಗಳಾದ ಕುಟ್ಟಿ – ಕುದ್ರಾಡಿ ಜೋಡಿಗೆ ಇದೀಗ ಆರು ವರ್ಷ ಪ್ರಾಯ. ಇದರಲ್ಲಿ ಕುದ್ರಾಡಿ ನೂರಕ್ಕೂ ಅಧಿಕ ಪ್ರಶಸ್ತಿಗಳನ್ನು ಗಳಿಸಿದೆ. ಕುಟ್ಟಿ ಸುಮಾರು 60 ಪ್ರಶಸ್ತಿಗಳನ್ನು ಜಯಿಸಿದೆ. ದ್ವಿತೀಯ ಪ್ರಶಸ್ತಿ ಪಡೆದ ಹೊಸಬೆಟ್ಟು ಏರಿಮಾರು ಗೋಪಾಲಕೃಷ್ಣ ಭಟ್‌ ಅವರ ಕಂಬಳದ ಕೋಣಗಳಾದ ಕುಂಞ-ಕಾಜ ಕೋಣಗಳಿಗೆ ಇದೀಗ ಆರು ವರ್ಷ. ಈ ಕೋಣಗಳು ಹಗ್ಗ ವಿಭಾಗದಲ್ಲಿ ಭಾಗವಹಿಸಿ ಸುಮಾರು 9 ಪ್ರಶಸ್ತಿಗಳನ್ನು ಗಳಿಸಿವೆ.

ಓಟಗಾರರ ಸೌಂದರ್ಯ ಸ್ಪರ್ಧೆ
ಓಟಗಾರರಿಗೆ ಆಯೋಜಿಸಿದ್ದ ಸೌಂದರ್ಯ ಸ್ಪರ್ಧೆಯಲ್ಲಿ ಕೊಳಕೆ ಇರ್ವತ್ತೂರು ಆನಂದ ಪ್ರಥಮ ಹಾಗೂ ಶಂಕರ ವಾಲ್ಪಾಡಿ ಅವರು ದ್ವಿತೀಯ ಪ್ರಶಸ್ತಿ ಗಳಿಸಿದರು. ವಿಜೇತರಿಗೆ ಕ್ರಮವಾಗಿ 10,000 ರೂ. ಹಾಗೂ 7,000 ರೂ. ನಗದು ಪುರಸ್ಕಾರ ನೀಡಲಾಯಿತು.

ವಿಶೇಷ ಪ್ರಶಸ್ತಿ
ಬೋಳಂತೂರು ಗುತ್ತು ದಿ| ಗಂಗಾಧರ ರೈಗಳ ಪ್ರಶಸ್ತಿ ವಿಜೇತ ಕಂಬಳದ ಕೋಣ “ಕಾಟಿಗೆ’ ವಿಶೇಷ ಪ್ರಶಸ್ತಿ ನೀಡಲಾಯಿತು. 
ಕಯ್ನಾರ ಕಿಂಞಣ್ಣ ರೈ ವೇದಿಕೆಯಲ್ಲಿ ಜರಗಿದ ತುಳು ಐಸಿರಿಯಲ್ಲಿ ಆಳ್ವಾಸ್‌ ನುಡಿ ಸಿರಿಯ ರೂವಾರಿ ಡಾ| ಮೋಹನ್‌ ಆಳ್ವ ಅವರು ಪ್ರಶಸ್ತಿಗಳನ್ನು ವಿತರಿಸಿದರು. ಶಾಸಕ ಅಭಯ ಚಂದ್ರ, ಹಂಪಿ ವಿವಿ ವಿಶ್ರಾಂತ ಕುಲಪತಿ ಡಾ| ಬಿ.ಎ.ವಿವೇಕ ರೈ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ, ಮಾಜಿ ಅಧ್ಯಕ್ಷರುಗಳಾದ ಡಾ| ವಾಮನ ನಂದಾವರ, ಸೀತಾರಾಮ ಕುಲಾಲ್‌, ಉಮಾನಾಥ ಕೋಟ್ಯಾನ್‌, ಉದ್ಯಮಿ ಐಕಳ ಹರೀಶ್‌ ಶೆಟ್ಟಿ, ಕಂಬಳ ಅಕಾಡೆಮಿ ಸಂಚಾಲಕ ಗುಣಪಾಲ ಕಡಂಬ ಉಪಸ್ಥಿತರಿದ್ದರು.

ವರ್ಣರಂಜಿತ ಮೆರವಣಿಗೆಯಲ್ಲಿ ಕೋಣಗಳ ಗತ್ತಿನ ಹೆಜ್ಜೆ 
ಕೃಷಿಸಿರಿ ಆವರಣದಿಂದ ತುಳು ಐಸಿರಿ ಆವರಣಕ್ಕೆ ಗಣ್ಯರ ಉಪಸ್ಥಿತಿಯೊಂದಿಗೆ ಕಂಬಳದ ಕೋಣಗಳ ವರ್ಣರಂಜಿತ ಮೆರವಣಿಗೆ ನಡೆಯಿತು. ವಾದ್ಯ, ಬ್ಯಾಂಡ್‌, ಕೊಂಬು ನಾದಕ್ಕೆ ಕಂಬಳದ ಕೋಣಗಳು ಗತ್ತಿನಿಂದ ಹೆಜ್ಜೆ ಹಾಕಿದವು. ಪಾವಡೆ ಹಾಕಿ, ನೊಗ, ನೆತ್ತಿಬಲ್‌ , ಕರಿಗೊಂಡೆ ಬಿಗಿದು ಅವುಗಳನ್ನು ಅಲಂಕರಿಸಲಾಗಿತ್ತು. ಡೊಳ್ಳುವಾದನ, ಆಟಿಕಳೆಂಜ ಮೆರವಣಿಗೆಗೆ ವಿಶೇಷ ಮೆರುಗು ನೀಡಿತು.

 ಕೃಷಿಸಿರಿಗೆ ಜನಸಾಗರ
ಆಳ್ವಾಸ್‌ ನುಡಿಸಿರಿಯಲ್ಲಿ ಕೃಷಿಸಿರಿ ಪ್ರಧಾನ ಆಕರ್ಷಣೆಯಾಗಿದ್ದು ಜನಸಾಗರ ಹರಿದು ಬಂತು. ತರಕಾರಿ, ಹೂವುಗಳ ನೈಜಕೃಷಿ, ವಿವಿಧ ಧಾನ್ಯ ಗಳು, ಔಷಧೀಯ ಸಸ್ಯಗಳು, ಹಲವಾರು ತಳಿಯ ಗಡ್ಡೆಗಳು, ಸುಮಾರು 44 ವಿಧದ ಬಿದಿರಿನ ತಳಿಗಳು, ತರಕಾರಿಯಿಂದ ರಚಿಸಿದ ಕಲಾಕೃತಿಗಳು, ಬೊನ್ಸಾಯಿ, ಪಕ್ಷಿಗಳ ಪ್ರದರ್ಶನ, ಜಾನುವಾರು ಪ್ರದರ್ಶನ, ಮೀನು ಹಾಗೂ ಚಿಪ್ಪುಗಳ ಪ್ರದರ್ಶನ ವನ್ನು ಆಪಾರ ಸಂಖ್ಯೆಯ ಜನರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಕೇಶವ ಕುಂದರ್‌

ಟಾಪ್ ನ್ಯೂಸ್

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.