ಮೂಡಾದಿಂದ ನಗರದ ಎಂಟು ಕೆರೆಗಳ ಪುನರುಜ್ಜೀವನ

2 ಕೆರೆಗಳ ಅಭಿವೃದ್ಧಿ ಕಾಮಗಾರಿ ಬಹುತೇಕ ಪೂರ್ಣ ; 6 ಕೆರೆಗಳ ಕಾಮಗಾರಿ ಪ್ರಗತಿಯಲ್ಲಿ

Team Udayavani, Jun 11, 2020, 5:59 AM IST

ಮೂಡಾದಿಂದ ನಗರದ ಎಂಟು ಕೆರೆಗಳ ಪುನರುಜ್ಜೀವನ

ಮಹಾನಗರ: ಕೆರೆಗಳ ಪುನರುಜ್ಜೀವನ ಗೊಳಿಸಿ ಸಂರಕ್ಷಣೆ ಹಾಗೂ ಅಂತರ್ಜಲ ವೃದ್ಧಿಯ ನಿಟ್ಟಿನಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯೋನ್ಮುಖವಾಗಿದ್ದು, ಈಗಾಗಲೇ 8 ಕೆರೆಗಳ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಗೊಂಡಿದೆ. ಆ ಪೈಕಿ 2 ಕೆರೆಗಳ ಅಭಿವೃದ್ಧಿ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.

ಹಾಗೆಯೇ ಬಾಕಿ ಉಳಿದ 6 ಕೆರೆಗಳ ಕಾಮ ಗಾರಿಗಳು ಪ್ರಗತಿಯಲ್ಲಿವೆ. 10ಕ್ಕೂ ಹೆಚ್ಚು ಕೆರೆಗಳನ್ನು ಅಭಿವೃದ್ಧಿಗೊಳಿಸುವ ಸಾಧ್ಯತೆಗಳ ಬಗ್ಗೆ ಸಮೀಕ್ಷೆ ಕಾರ್ಯ ನಡೆಯುತ್ತಿದೆ. ಪ್ರಾಧಿಕಾರದ ಕೆರೆಗಳ ಅಭಿವೃದ್ಧಿ ಮೊತ್ತವನ್ನು ಬಳಸಿಕೊಂಡು ಪುನರುಜ್ಜೀವನ ಕಾಮಗಾರಿಗಳನ್ನು ನಡೆಸಲಾಗುತ್ತಿದೆ.

ನಗರದ ಪಡೀಲ್‌ನಲ್ಲಿರುವ ಬೈರಾಡಿ ಕೆರೆಯನ್ನು ಅಭಿವೃದ್ಧಿಗೊಳಿಸಿ ಸಂರಕ್ಷಿಸುವ ಕಾರ್ಯವನ್ನು ಪ್ರಾಧಿಕಾರದಿಂದ ಈಗಾಗಲೇ ನಡೆಸಲಾಗಿದ್ದು, ಸುಮಾರು 1.17 ಕೋ. ರೂ. ವಿನಿಯೋಗಿಸಲಾಗಿದೆ. ಮುಂದುವರಿದ ಕಾಮಗಾರಿಗೆ ಸುಮಾರು 1 ಕೋ. ರೂ. ಮಂಜೂರಾಗಿದ್ದು, ಇದರಲ್ಲಿ ತಡೆಗೋಡೆ, ಇಂಟರ್‌ಲಾಕ್‌ ಅಳವಡಿಕೆ ಸಹಿ ತ ಬಾಕಿ ಕಾಮಗಾರಿ ಕೈಗೆತ್ತಿಕೊಳ್ಳುವ ಕಾರ್ಯ ನಡೆಯುತ್ತಿದೆ. ಕಾಟಿಪಳ್ಳ ಕೆರೆ ಪುನರುಜ್ಜೀವನ ಕಾರ್ಯವನ್ನು ಪ್ರಾಧಿಕಾರದ ವತಿಯಿಂದ ಮಾಡಲಾಗಿದ್ದು, 85 ಲಕ್ಷ ರೂ. ವಿನಿಯೋಗಿಸಲಾಗಿದೆ.

ಪ್ರಾಧಿಕಾರ ವ್ಯಾಪ್ತಿಯ ಇನ್ನೂ ಆರು ಕೆರೆಗಳನ್ನು ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ. ಕೊಣಾಜೆ ಸಮೀಪದ ದಡಸ ಕೆರೆಯನ್ನು 1 ಕೋ. ರೂ., 62ನೇ ತೋಕೂರು ಬಳಿಯ ಜಳಕದ ಕೆರೆಯನ್ನು 1.5 ಕೋ. ರೂ., ಪಡುಪಣಂಬೂರು ಕೆರೆಯನ್ನು 25 ಲಕ್ಷ ರೂ., ಜೆಪ್ಪಿನಮೊಗರು ಗ್ರಾಮದ ಕುಂರ್ಬಿಸ್ಥಾನ ಕೆರೆಯನ್ನು 25 ಲಕ್ಷ ರೂ., ಬಜಾಲ್‌ ಗ್ರಾಮದ ಕುಂದೋಡಿ ಕೆರೆಯನ್ನು 25 ಲಕ್ಷ ರೂ., ಕಸ್ಬಾ ಬಜಾರ್‌ ಗ್ರಾಮದ ನಡುಪಳ್ಳಿ ಕೆರೆಯನ್ನು 20 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ.

ಸುಮಾರು 10 ಕೆರೆಗಳನ್ನು ಗುರುತಿಸಿ ಅವುಗಳ ಅಭಿವೃದ್ಧಿ ಸಾಧ್ಯತೆ ಗುರುತಿಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಪ್ರಾಧಿಕಾರದಿಂದ ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದೆ. ಬೋಳೂರು ವಾರ್ಡ್‌ನ ಕುಟ್ಟಿನಾಡ್‌ ಕೆರೆ, ಅಳಪೆಯ ಕಂರ್ಭಿಮಾರ್‌ ಕೆರೆ, ಮಂಗಳೂರಿನ ಮಹಾಮ್ಮಾಯ ಕೆರೆ, ಟ್ಯಾಂಕ್‌ ಕಾಲನಿ ಕೆರೆ, ಹರೇಕಳ ಗ್ರಾಮದ ರಾಜಗುಡ್ಡೆಯ ತಾವರಕೆರೆ, ಕೊಣಾಜೆಯ ಪುಲಿಂಡಿ ಕೆರೆ, ಅಂಬ್ಲಿಮೊಗರು ವಾಡ ಕೆರೆ, ಉಳ್ಳಾಲ ನಗರಸಭೆಯ 9 ಕೆರೆ ಬಳಿಯ ಸಾರ್ವಜನಿಕ ಕೆರೆ, ಬೆಳ್ಮ ಗ್ರಾಮದ ಬೆಳ್ಮದೋಟ ಸಾರ್ವಜನಿಕ ಕೆರೆಗಳು ಸೇರಿವೆ.

ಮಂಗಳೂರಿನಲ್ಲಿ ಇತಿಹಾಸ ಪ್ರಸಿದ್ಧ ಗುಜ್ಜರಕೆರೆ ಹಾಗೂ ಕಾವೂರು ಕೆರೆಯನ್ನು ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ.

ರಾಜ್ಯ ಸರಕಾರದ ವಿವಿಧ ಅನುದಾನಗಳಿಂದ ಗುಜ್ಜರಕೆರೆ ಅಭಿವೃದ್ಧಿ ಕಾರ್ಯ ಕಳೆದ ಹಲವು ವರ್ಷ ಗಳಿಂದ ನಡೆಯುತ್ತಾ ಬಂದಿದೆ. ಇದೀಗ ಸ್ಮಾರ್ಟ್‌ ಸಿಟಿ ಯೋಜನೆಯಡಿ 4 ಕೋ. ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಕಾವೂರು ಕೆರೆಯನ್ನು ಅಭಿವೃದ್ಧಿಗೊಳಿಸುವ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ಜಪ್ಪಿನಮೊಗರು ಬಳಿ ಈಗಾಗಲೇ ಎರಡು ಕೆರೆಗಳನ್ನು ಪುನರುಜ್ಜೀವನಗೊಳಿಸಲಾಗಿದೆ.

 ಸರ್ವೆ ಕಾರ್ಯ
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ಕೆರೆಗಳು ಅಭಿವೃದ್ಧಿ ಹೊಂದಲು ಇರುವ ಅವಕಾಶಗಳನ್ನು ಅಧ್ಯಯನ ನಡೆಸಿ ಆದ್ಯತೆಯ ಮೇರೆಗೆ ಪುನರುಜ್ಜೀವನ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈಗಾಲೇ 2 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದ್ದು , 6 ಕೆರೆಗಳ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಇನ್ನೂ 10 ಕೆರೆಗಳನ್ನು ಗುರುತಿಸಲಾಗಿದ್ದು, ಸರ್ವೆ ಕಾರ್ಯ ನಡೆಯುತ್ತಿದೆ.
 - ದಿನೇಶ್‌ ಕುಮಾರ್‌,
ಆಯುಕ್ತರು, ಮೂಡಾ

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.