ಸೆಂಟ್ರಲ್ ರೈಲು ನಿಲ್ದಾಣದಲ್ಲಿ ದುರ್ನಾತ
Team Udayavani, Aug 5, 2019, 5:24 AM IST
ಮಹಾನಗರ: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಒಳಚರಂಡಿ ಕಾಮಗಾರಿಯ ಅವ್ಯವಸ್ಥೆಯಿಂದಾಗಿ ನಿಲ್ದಾಣ ದುರ್ನಾತ ಬೀರುತ್ತಿದೆ.
ರೈಲು ನಿಲ್ದಾಣ ಒಳಚರಂಡಿ ಕಾಮಗಾರಿ ಆರಂಭಿಸಲು ಇಲಾಖೆ ನಿಲ್ದಾಣದ ಮುಂಭಾಗದಲ್ಲಿ ಅಗೆದು ಹಾಕಿತ್ತು. ಆದಾಗಲೇ ಭಾರೀ ಮಳೆ ಸುರಿದ ಪರಿಣಾಮ ರೈಲು ನಿಲ್ದಾಣದ ಆವರಣವೆಲ್ಲ ಮಳೆ ನೀರು ತುಂಬಿ ಅಸ್ತವ್ಯಸ್ತವಾಗಿತ್ತು. ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರೆಲ್ಲ ಇದರಿಂದ ತೊಂದರೆ ಅನುಭವಿಸುವಂತಾಗಿತ್ತು. ಇದರಿಂದ ಎಚ್ಚೆತ್ತ ರೈಲ್ವೇ ಇಲಾಖೆ ಅಗೆದ ಒಳಚರಂಡಿ ಸಂಪರ್ಕವನ್ನು ಹಾಗೇ ಮುಚ್ಚಿ ಬಿಟ್ಟಿತ್ತು. ಇದೀಗ ಹಳೆಯ ಡ್ರೈನೇಜ್ ವ್ಯವಸ್ಥೆಯಲ್ಲಿ ಉಂಟಾದ ಸಮಸ್ಯೆಯಿಂದಾಗಿ ಕೊಳಚೆ ನೀರು ನಿಲ್ದಾಣದ ಮುಂಭಾಗವೇ ಹರಿಯುತ್ತಿದೆ.
ಒಳಚರಂಡಿ ಕೊಳಚೆ ನಿಲ್ದಾಣದ ಮುಂಭಾಗದಲ್ಲೇ ಹರಿಯುತ್ತಿರುವುದರಿಂದ ದುರ್ನಾತ ಬೀರುತ್ತಿದ್ದು, ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರು ಮೂಗು ಮುಚ್ಚಿಕೊಂಡೇ ನಡೆಯಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಇದರೊಂದಿಗೆ ಆ ಭಾಗದಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುವ ಭೀತಿ ಎದುರಾಗಿದ್ದು, ಸಿಬಂದಿ, ವಾಹನ ಚಾಲಕರು ಆತಂಕಗೊಂಡಿದ್ದಾರೆ. ದಿನಂಪ್ರತಿ ಸಾವಿರಾರು ಪ್ರಯಾಣಿಕರು ಆಗಮಿಸುವ ರೈಲು ನಿಲ್ದಾಣದ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ