ಪ್ರಾಣಿಗಳ ಶವ ಸಂಸ್ಕಾರಕ್ಕೆ ಶ್ಮಶಾನವೇ ಇಲ್ಲ ! ; ಪ್ರಧಾನಿ ಕಚೇರಿಗೆ ಮನವಿ ಮಾಡಿದರೂ ಫಲವಿಲ್ಲ


Team Udayavani, Nov 10, 2022, 11:05 AM IST

5

ಮಹಾನಗರ: ಪ್ರೀತಿಯಿಂದ ಸಾಕಿದ ಪ್ರಾಣಿಗಳು ಕೊನೆಯುಸಿರೆಳೆದರೆ ಅವುಗಳ ಶವ ಸಂಸ್ಕಾರಕ್ಕೆ ನಗರದಲ್ಲಿ ಸೂಕ್ತ ವ್ಯವಸ್ಥೆ ಇಲ್ಲ. ವಿಶಾಲ ಜಾಗ ಉಳ್ಳವರು ತಮ್ಮ ಮನೆ ವಠಾರದಲ್ಲೇ ಅಂತ್ಯಕ್ರಿಯೆ ನೆರವೇರಿಸಿದರೆ, ಮಂಗಳೂರಿನ ಹೆಚ್ಚಿನ ಮನೆಯವರಿಗೆ ಜಾಗವಿಲ್ಲ. ಸ್ಮಾರ್ಟ್‌ಸಿಟಿಯಾಗಿ ಅಭಿವೃದ್ಧಿ ಹೊಂದುತ್ತಿರುವ ನಗರದಲ್ಲಿ ಪ್ರಾಣಿಗಳಿಗೆ ಶ್ಮಶಾ ನ ನಿರ್ಮಿಸುವಂತೆ ಪ್ರಧಾನಿ ಕಚೇರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ!

ಪ್ರಾಣಿಗಳಿಗೆ ನಗರದಲ್ಲಿ ಶ್ಮಶಾನ ನಿರ್ಮಾಣ ಮಾಡುವ ಕುರಿತು ಕೆಲವು ತಿಂಗಳ ಹಿಂದೆ ಪಾಲಿಕೆ ಸಾಮಾನ್ಯ ಸಭೆಗೆ ಪ್ರಸ್ತಾವ ಬಂದಿತ್ತು. ಆದರೆ ಆ ಕಾರ್ಯಸೂಚಿಗೆ ಪಾಲಿಕೆ ಸದಸ್ಯರ ಬೆಂಬಲ ಸಿಗದ ಪರಿಣಾಮ ಈ ಯೋಜನೆ ಅಷ್ಟೊಂದು ಮಹತ್ವ ಪಡೆದಿಲ್ಲ. ಶಕ್ತಿನಗರ ಬಳಿಯ ಹಿಂದೂ ರುದ್ರಭೂಮಿ ಅಥವಾ ಇತರ ಪ್ರದೇಶದಲ್ಲಿ ಸ್ಮಾರ್ಟ್‌ ಸಿಟಿಯಿಂದ ಪ್ರಾಣಿಗಳ ಶ್ಮಶಾನ ನಿರ್ಮಾಣ ಮಾಡಬೇಕು ಎಂದು ಪ್ರಾಣಿಪ್ರಿಯರು ಆಗ್ರಹಿಸಿದ್ದರು. ಆದರೆ ಸ್ಥಳೀಯಾಡಳಿತ ಈ ಕುರಿತು ಅಷ್ಟೊಂದು ಗಮನ ನೀಡಲಿಲ್ಲ.

ಸತ್ತ ಪ್ರಾಣಿಯನ್ನು ಪ್ಲಾಸ್ಟಿಕ್‌ನಲ್ಲಿ ನೀಡಬೇಕೆ?

“ನಾಯಿ, ಬೆಕ್ಕುಗಳನ್ನು ನಾವು ಬಹಳ ಪ್ರೀತಿಯಿಂದ ಸಾಕಿರುತ್ತೇವೆ. ಅವುಗಳು ಮರಣ ಹೊಂದಿದಾಗ ನ್ಯಾಯಯುತವಾಗಿ ಅಂತ್ಯಕ್ರಿಯೆ ನಡೆಸಬೇಕು. ಆದರೆ ನಗರದಲ್ಲಿ ಪ್ರಾಣಿಗಳ ಶ್ಮಶಾನ ಇಲ್ಲ. ಇದೇ ಕಾರಣಕ್ಕೆ ಮರಣ ಹೊಂದಿದ ಪ್ರಾಣಿಗಳನ್ನು ಕೆಲವು ಮಂದಿ ಪ್ಲಾಸ್ಟಿಕ್‌ ತೊಟ್ಟೆಯಲ್ಲಿ ನೀಡುತ್ತಿದ್ದಾರೆ. ಕಸ ವಿಲೇವಾರಿ ಮಾಡಲು ಮನೆಗೆ ಬರುವ ಹೆಚ್ಚಿನ ಮಂದಿ ಸತ್ತ ಪ್ರಾಣಿಗಳನ್ನು ತೆಗೆದುಕೊಂಡು ಹೋಗುವುದಿಲ್ಲ. ಈ ನಿಟ್ಟಿನಲ್ಲಿ ಸ್ಮಾರ್ಟ್‌ಸಿಟಿ ಅಥವಾ ಮಂಗಳೂರು ಪಾಲಿಕೆ ಮುಂದಾಗಬೇಕಿದೆ’ ಎನ್ನುತ್ತಾರೆ ಎನಿಮಲ್‌ ಕೇರ್‌ನ ಸುಮಾ ನಾಯಕ್‌.

ಬೆಂಗಳೂರಿನಲ್ಲಿದೆ ಪ್ರಾಣಿಗಳ ಶ್ಮಶಾನ

ಮರಣ ಹೊಂದಿದ ಪ್ರಾಣಿಗಳನ್ನು ಸುಡಲು ಅಥವಾ ಹೂಳಲು ಬೆಂಗಳೂರು ನಗರದಲ್ಲಿ ಕೆಲವೊಂದು ಶ್ಮಶಾನಗಳಿವೆ. ಕೆಲವೊಂದು ಖಾಸಗಿ ಸಂಸ್ಥೆಗಳು ರಾಜ್ಯ ಅರಣ್ಯ ಇಲಾಖೆಯ ಸಹಯೋಗದೊಂದಿಗೂ ಶ್ಮಶಾನಗಳನ್ನು ನಿರ್ಮಿಸಿವೆ. ಸಾಕಿದ ಪ್ರಾಣಿಗಳು ತೀರಿ ಹೋದಾಗ ಅವುಗಳನ್ನು ಅಲ್ಲಿಗೆ ತಂದು ಸಮಾಧಿ ಮಾಡಲಾಗುತ್ತದೆ. ಪ್ರತಿವರ್ಷ ಆ ದಿನ ಅಲ್ಲಿಗೆ ಬಂದು ಆ ಸಮಾಧಿ ಮೇಲೆ ಹೂವು ಹಾಕಿ ಸ್ಮರಿಸುತ್ತಾರೆ.

ಶ್ಮಶಾನ ಅಗತ್ಯ: ಪ್ರಾಣಿಗಳು ಮರಣ ಹೊಂದಿದರೆ ಅವುಗಳ ಅಂತ್ಯಕ್ರಿಯೆಗೆ ನಗರದಲ್ಲಿ ಶ್ಮಶಾನ ಇಲ್ಲ. ಈ ಹಿನ್ನೆಲೆಯಲ್ಲಿ ಶ್ಮಶಾನ ಅಗತ್ಯವಿದೆ ಎಂದು ಪ್ರಧಾನಿಗಳಿಗೆ ಮನವಿ ಮಾಡಿದ್ದೇನೆ. ಅಲ್ಲಿಂದ ಸೂಕ್ತ ಉತ್ತರ ಬಂದಿದ್ದು, ಸ್ಥಳೀಯಾಡಳಿತ ಗಮನಹರಿಸುವುದಾಗಿ ತಿಳಿಸಲಾಗಿದೆ. ಪಾಲಿಕೆ, ಜನಪ್ರತಿನಿಧಿಗಳಿಗೂ ಮನವಿ ನೀಡಿ ದರೂ ಬೇಡಿಕೆ ಈಡೇರಲಿಲ್ಲ. – ಗಣೇಶ್‌ ನಾಯಕ್‌ ಸುಜೀರ್‌ ಬೆಂದೂರ್‌ವೆಲ್‌, ಪ್ರಾಣಿ ಪ್ರೇಮಿ

 ಸೂಕ್ತ ಕ್ರಮ: ಸಾವನ್ನಪ್ಪಿದ ಪ್ರಾಣಿಗಳನ್ನು ಸುಡಲು ನಗರದೊಳಗೆ ಶ್ಮಶಾ ನ ಬೇಕು ಎಂದು ಸಂಘ-ಸಂಸ್ಥೆಗಳಿಂದ ಈಗಾಗಲೇ ಮನವಿಗಳು ಬಂದಿವೆ. ನಗರದೊಳಗೆ ಸೂಕ್ತ ಜಾಗದ ಕೊರತೆ ಇದೆ. ಆದರೂ ಪರಿಶೀಲಿಸಿ ಪ್ರಾಣಿಗಳಿಗೆ ಶ್ಮಶಾ ನ ನಿರ್ಮಾಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. – ವೇದವ್ಯಾಸ ಕಾಮತ್‌, ಶಾಸಕರು

-ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.