” ಕೋವಿಡ್ 19 ಸೋಂಕಿತ ವ್ಯಕ್ತಿಯ ಶವ ಸಂಸ್ಕಾರದಿಂದ ಯಾವುದೇ ತೊಂದರೆ ಇಲ್ಲ’
Team Udayavani, Apr 27, 2020, 5:04 AM IST
ಮಂಗಳೂರು: ಕೋವಿಡ್ 19 ಸೋಂಕಿತ ವ್ಯಕ್ತಿಗಳ ಶವ ಸಂಸ್ಕಾರದ ವಿಚಾರವಾಗಿ ನಾಗರಿಕರೊಂದಿಗೆ ಚರ್ಚಿಸಲು ಎರಡನೇ ಬಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ಸ್ಥಳಿಯ ಪಾಲಿಕೆ ಸದಸ್ಯ ಜಗದೀಶ್ ಶೆಟ್ಟಿ ಬೋಳೂರು ಅವರ ಉಪಸ್ಥಿತಿಯಲ್ಲಿ ಬೋಳೂರಿಗೆ ಭೇಟಿ ನೀಡಲಾಯಿತು.
ಈ ಸಂದರ್ಭ ಮಾತನಾಡಿ, ಕೋವಿಡ್ 19 ಸೋಂಕಿತ ವ್ಯಕ್ತಿಯ ಶವ ಸಂಸ್ಕಾರದಿಂದ ಸ್ಮಶಾನ ಪರಿಸರದ ನಿವಾಸಿಗಳಿಗೆ ಯಾವುದೇ ತೊಂದರೆ ಇಲ್ಲ. ಈ ಬಗ್ಗೆ ಪರಿಸರದ ಸುಮಾರು 50 ಮನೆಗಳಿಗೆ ಕೂಡ ವೈಜ್ಞಾನಿಕ ಮಾಹಿತಿ ನೀಡಿ, ತಪ್ಪು ತಿಳುವಳಿಕೆ ದೂರ ಮಾಡಲಾಗಿದೆ ಎಂದು ಅವರು ಹೇಳಿದರು.
ಮುಂದಿನ ದಿನಗಳಲ್ಲಿ ದುರದೃಷ್ಟವಶಾತ್ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತ ವ್ಯಕ್ತಿ ಮರಣ ಹೊಂದಿದಲ್ಲಿ ಶವ ಸಂಸ್ಕಾರವನ್ನು ವೆನ್ಲಾಕ್ ಆಸ್ಪತ್ರೆಯ ಹತ್ತಿರದ ಶ್ಮಶಾನವಾದ ಬೋಳೂರಿನ ವಿದ್ಯುತ್ ಚಿತಾಗಾರದಲ್ಲೇ ನಡೆಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದರು.
ಮಾಸ್ಕ್, ಗ್ಲೌಸ್, ಹಾಗೂ ದಿನಸಿ ಸಾಮಗ್ರಿ ಕಿಟ್ ವಿತರಣೆ ಮಾಡಲಾಯಿತು. ರಾಹುಲ್ ಶೆಟ್ಟಿ, ಸಂದೀಪ್, ಉಮಾಶಂಕರ್, ದಿನೇಶ್, ರತೊ°àಜಿ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ