Hijab ಧರಿಸುವುದಾದರೆ ಕೇಸರಿ ಧರಿಸುವುದರಲ್ಲಿ ತಪ್ಪಿಲ್ಲ: ಡಾ.ಭರತ್ ಶೆಟ್ಟಿ ವೈ
ಶಾಲಾ ಕಾಲೇಜು ಕ್ಯಾಂಪಸ್ ಗಳಲ್ಲಿ ಯೂನಿಫಾರ್ಮ್ ವಸ್ತ್ರ ಸಂಹಿತೆಗೆ ಸರಕಾರವೇ ಅಡ್ಡಿ
Team Udayavani, Dec 23, 2023, 3:04 PM IST
ಮಂಗಳೂರು: ಶಾಲಾ-ಕಾಲೇಜುಗಳು ರೂಪಿಸಿಕೊಂಡಿರುವ ಶಿಸ್ತುಬದ್ಧ ವಸ್ತ ಸಂಹಿತೆಗೆ ಸರಕಾರವೇ ಅಡ್ಡಗಾಲು ಹಾಕುತ್ತಿರುವುದು ವಿಷಾದನೀಯ. ಹಿಜಾಬ್ ಧರಿಸಲು ಶಾಲಾ ಕೊಠಡಿ ಒಳಗೆ ಅನುಮತಿ ನೀಡುವುದಾದರೆ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಹೋಗುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ ತಿರುಗೇಟು ನೀಡಿದ್ದಾರೆ.
ಮುಂದಿನ ದಿನಗಳಲ್ಲಿ ಶಾಲಾ-ಕಾಲೇಜು ಕ್ಯಾಂಪಸ್ ಗಳಲ್ಲಿ ವಸ್ತ್ರ ಸಂಹಿತೆ ಕುರಿತಂತೆ ಸುಧೀರ್ಘ ಹೋರಾಟವೊಂದು ವಿವಿಧ ವಿದ್ಯಾರ್ಥಿ ಸಂಘಟನೆಗಳ ನಡುವೆ ರೂಪುಗೊಳ್ಳಬಹುದು ಎಂದಿರುವ ಶಾಸಕ ಡಾ.ಭರತ್ ಶೆಟ್ಟಿ ಅವರು, ಸರಕಾರ ಕೂಡಲೇ ಎಚ್ಚೆತ್ತುಕೊಂಡು ತನ್ನ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಹಿಜಾಬ್ ಧರಿಸಲು ಕ್ಯಾಂಪಸ್ ಹೊರಗಡೆ, ಕಾಲೇಜಿನ ಒಳಗೂ ಅನುಮತಿ ನೀಡುವುದಾದರೆ,ಕೇಸರಿ ಶಾಲು ಧರಿಸಲು ಹಿಂದೂಪರ ವಿದ್ಯಾರ್ಥಿಗಳಿಗೂ ಆಯ್ಕೆಯ ಸ್ವಾತಂತ್ರ್ಯವಿದೆ. ಜಾತಿಗೊಂದರಂತೆ ಬಟ್ಟೆ ಧರಿಸಲು ಕ್ಯಾಂಪಸ್ ನಲ್ಲಿ ಅನುಮತಿ ನೀಡುವ ಮೂಲಕ ಸರಕಾರ ಶಾಲಾ-ಕಾಲೇಜಿನ ಯೂನಿಫಾರ್ಮ್ ವ್ಯವಸ್ಥೆಗೆ ಬೆಲೆ ಇಲ್ಲದಂತೆ ಮಾಡಿದೆ ಎಂದು ಹೇಳಿದರು.
ಶಾಲಾ-ಕಾಲೇಜು ಕೊಠಡಿ ಒಳಗೆ ಎಲ್ಲರೂ ಸಮಾನರು ಎಂಬ ಭಾವನೆಗೆ ಸರಕಾರವೇ ಹಿಜಾಬ್ ಧರಿಸಲು ಅನುಮತಿ ನೀಡುವ ಮೂಲಕ ದಕ್ಕೆ ತಂದಂತಾಗಿದೆ. ಬಿಜೆಪಿ ಇದರ ವಿರುದ್ದ ಎಲ್ಲಾ ಹೋರಾಟ ಹಾದಿಯನ್ನು ಮುಕ್ತವಾಗಿ ಇರಿಸಿದೆ. ಸೂಕ್ತ ಸಮಾಲೋಚನೆಯ ಬಳಿಕ ಹೋರಾಟದ ಅಭಿಯಾನ ಆರಂಭವಾಗಲಿದೆ ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ