ತೊಕ್ಕೊಟ್ಟು: ಅಪಘಾತದಲ್ಲಿ ನವದಂಪತಿ ಸಾವು ಪ್ರಕರಣ;ಸ್ಥಳಕ್ಕೆ ಮಂಗಳೂರು ಪೊಲೀಸ್ ಆಯುಕ್ತರ ಭೇಟಿ
Team Udayavani, Oct 28, 2020, 11:46 AM IST
ಮಂಗಳೂರು: ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನವದಂಪತಿ ದಾರುಣವಾಗಿ ಸಾವನ್ನಪ್ಪಿದ ಸ್ಥಳಕ್ಕೆ, ಮಂಗಳೂರು ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಜಾಲ್ ನಿವಾಸಿ ರಯಾನ್ ಫೆರ್ನಾಂಡಿಸ್ (30) ಮತ್ತು ಪ್ರಿಯಾ ಫೆರ್ನಾಂಡಿಸ್ (32) ಇಬ್ಬರು ಕೂಡ ಕರ್ತವ್ಯ ಮುಗಿಸಿ ಉಳ್ಳಾಲ ಬಂಗೇರ ಲೇನ್ ನಲ್ಲಿರುವ ಬಾಡಿಗೆ ಮನೆಗೆ ತೆರಳುವ ಸಂದರ್ಭದಲ್ಲಿ ಅಪಘಾತ ಸಂಭವಿಸಿತ್ತು.
ಇದೀಗ ಸ್ಥಳಕ್ಕೆ ಮಂಗಳೂರು ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಅವರು ಭೇಟಿ ನೀಡಿ ನವಯುಗ ಸಂಸ್ಥೆ ಅಧಿಕಾರಿಗಳ ಜತೆಗೆ ಚರ್ಚಿಸಿದ್ದಾರೆ. ಮಾತ್ರವಲ್ಲದೆ ತಕ್ಷಣ ಸುರಕ್ಷತಾ ಕ್ರಮ ಜಾರಿಗೆ ಅದೇಶ ನೀಡಿದರು. ಜೊತೆಗೆ ಸರ್ವಿಸ್ ರಸ್ತೆಗಳ ಬಳಸಿ ಸುರಕ್ಷತಾ ಕ್ರಮ ಅನುಸರಿಸುವ ನಿಟ್ಟಿನಲ್ಲಿ, ಸಂಚಾರಿ ಠಾಣಾ ಡಿಸಿಪಿ ಜತೆಗೆ ಚರ್ಚಿಸಿ, ತಕ್ಷಣಕ್ಕೆ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
ಘಟನೆ ವಿವರ: ಮಂಗಳೂರಿನಿಂದ ಕೆಲಸ ಮುಗಿಸಿ ತೊಕ್ಕೊಟ್ಟು ಮಾರ್ಗವಾಗಿ ಓವರ್ ಬ್ರಿಡ್ಜ್ ಬಳಿ, ಉಳ್ಳಾಲ ಕಡೆ ಬೈಕ್ ತಿರುಗಿಸುತ್ತಿದ್ದಾಗ, ಪ್ಲೈಓವರ್ ಮೇಲಿಂದ ಕೆಳ ಮುಖವಾಗಿ ಸಂಚರಿಸುತ್ತಿದ್ದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಮೇಲಿದ್ದ ಇಬ್ಬರ ಮೇಲೂ ಲಾರಿ ಚಲಿಸಿ ಕೆಲ ಮೀಟರ್ ದೂರಕ್ಕೆ ಎಳೆದುಕೊಂಡು ಹೋಗಿ ನಿಂತಿದೆ. ಘಟನೆಯಿಂದ ಪ್ರಿಯಾ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ರಯಾನ್ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ