ತೊಕ್ಕೊಟ್ಟು: ಭೀಕರ ಅಪಘಾತ; ನವದಂಪತಿ ದಾರುಣ ಸಾವು
Team Udayavani, Oct 27, 2020, 7:26 PM IST
ಉಳ್ಳಾಲ: ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನವದಂಪತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.
ಬಜಾಲ್ ನಿವಾಸಿ ರಯಾನ್ ಫೆರ್ನಾಂಡಿಸ್ (30) ಮತ್ತು ಪ್ರಿಯಾ ಫೆರ್ನಾಂಡಿಸ್ (32) ಮೃತರು. ಕಂಕನಾಡಿ ಫಾದರ್ ಮುಲ್ಲಸ್೯ ಆಸ್ಪತ್ರೆಯಲ್ಲಿ ಸಿಬ್ಬಂದಿಯಾಗಿರುವ ಇಬ್ಬರು ಕರ್ತವ್ಯ ಮುಗಿಸಿ ಉಳ್ಳಾಲ ಬಂಗೇರ ಲೇನ್ ನಲ್ಲಿರುವ ಬಾಡಿಗೆ ಮನೆಗೆ ತೆರಳುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.
ಘಟನೆ ವಿವರ : ಮಂಗಳೂರಿನಿಂದ ಕೆಲಸ ಮುಗಿಸಿ ತೊಕ್ಕೊಟ್ಟು ಮಾರ್ಗವಾಗಿ ಓವರ್ ಬ್ರಿಡ್ಜ್ ಬಳಿ ಬಳಿ ಉಳ್ಳಾಲ ಕಡೆ ಬೈಕ್ ತಿರುಗಿಸುತ್ತಿದ್ದಾಗ
ಪ್ಲೈಓವರ್ ಮೇಲಿಂದ ಕೆಳ ಮುಖವಾಗಿ ಸಂಚರಿಸುತ್ತಿದ್ದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಮೇಲಿದ್ದ ಇಬ್ಬರ ಮೇಲೂ ಚಲಿಸಿ ಕೆಲ ಮೀಟರ್ ದೂರಕ್ಕೆ ಎಳೆದುಕೊಂಡು ಹೋಗಿ ನಿಂತಿದೆ. ಘಟನೆಯಿಂದ ಪ್ರಿಯಾ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ರಯಾನ್ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಸಾವನ್ನಪ್ಪಿದ್ದಾರೆ.
ದಕ್ಷಿಣ ವಲಯ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಘಟನೆಯ ನಂತರ ಸುಮಾರು ಎರಡು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಗಿದ್ದು ಪೊಲೀಸರು ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು