ನಿಯಮ ಉಲ್ಲಂಘಿಸುವ ಬಸ್‌ಗಳ ವಿರುದ್ಧ ಕಾರ್ಯಾಚರಣೆಗೆ ಚಿಂತನೆ

ಸಿಟಿ ಬಸ್‌ಗಳಲ್ಲಿ ಹಿರಿಯ ನಾಗರಿಕರಿಗೆ ಲಭಿಸದ ಮೀಸಲು ಆಸನ

Team Udayavani, Jul 24, 2019, 5:00 AM IST

x-28

ಮಹಾನಗರ: ಸಿಟಿ ಬಸ್‌ಗಳಲ್ಲಿ ಹಿರಿಯ ನಾಗರಿಕರಿಗೆಂದೇ ಮೀಸ ಲಿರುವ ಆಸನ ಅವರಿಗೆ ದೊರಕುತ್ತಿಲ್ಲ ಎಂಬ ದೂರು ಕೇಳಿಬರುತ್ತಿವೆ. ಸಾರಿಗೆ ಇಲಾಖೆ ಇದೀಗ ಈ ದೂರನ್ನು ಗಂಭೀರ ವಾಗಿ ಪರಿಗಣಿಸಿದ್ದು, ಸದ್ಯದಲ್ಲಿಯೇ ನಿಯಮ ಉಲ್ಲಂಘಿಸುವ ಬಸ್‌ಗಳ ವಿರುದ್ಧ ಕಾರ್ಯಾಚರಣೆ ನಡೆಸಲು ಮುಂದಾಗಿದೆ.

ನಗರದಲ್ಲಿ ದಿನಂಪ್ರತಿ ಸುಮಾರು 300ಕ್ಕೂ ಹೆಚ್ಚು ಸಿಟಿ ಬಸ್‌ಗಳು ನಾನಾ ಕಡೆಗಳಿಗೆ ಸಂಚರಿಸುತ್ತವೆ. ಆದರೆ ಇವುಗಳಲ್ಲಿ ಹಿರಿಯ ನಾಗರಿಕರು ಪಡುವ ಕಷ್ಟ ಅಷ್ಟಿಷ್ಟಲ್ಲ. ಸರಕಾರಿ ಬಸ್‌ಗಳಲ್ಲಿ ಹಿರಿಯ ನಾಗರಿಕರಿಗೆ ಟಿಕೆಟ್‌ ದರದಲ್ಲಾದರೂ ಕಡಿತವಿದ್ದು, ಈ ವ್ಯವಸ್ಥೆ ಖಾಸಗಿ ಸಿಟಿ ಬಸ್‌ಗಳಲ್ಲಿ ಲಭ್ಯವಿಲ್ಲ.

ಪಾಲನೆಯಾಗದ ನಿಯಮ
ಬೆಳಗ್ಗೆ ಮತ್ತು ಸಂಜೆ ವೇಳೆಯಲ್ಲಿ ಸಿಟಿ ಬಸ್‌ಗಳಲ್ಲಿ ಕಿಕ್ಕಿರಿದು ಪ್ರಯಾಣಿಕರಿರುವುದರಿಂದ ಹಿರಿಯ ನಾಗರಿಕರು ಬಸ್‌ಗಳಲ್ಲಿ ನಿಂತೇ ಪ್ರಯಾಣಿಸಬೇಕಾದ ಪರಿಸ್ಥಿತಿಯಿದೆ. ಹಿರಿಯ ನಾಗರಿಕರಿಗೆಂದು ಬಸ್‌ಗಳಲ್ಲಿ ಸೀಟು ಮೀಸಲಿಡಲಾಗಿದೆ. ಆದರೆ ಬಹುತೇಕ ಬಸ್‌ಗಳಲ್ಲಿ ಇದರ ಪಾಲನೆಯಾಗುತ್ತಿಲ್ಲ. ಹಿರಿಯ ನಾಗರಿಕರು ನಿಂತಿದ್ದರೂ ಈ ಸೀಟುಗಳಲ್ಲಿ ಬೇರೊಬ್ಬರು ಕುಳಿತಿರುತ್ತಾರೆ. ಈ ಬಗ್ಗೆ ನಿರ್ವಾಹಕರು ಕೂಡ ಮಾತನಾಡುವುದಿಲ್ಲ. ಕೆಲವೊಂದು ಬಾರಿ ತನ್ನ ಸ್ವಾಭಿಮಾನ ಬಿಟ್ಟು ಹಿರಿಯ ನಾಗರಿಕರು ಸೀಟು ಕೇಳಿದರೂ, ಯುವಕ-ಯುವತಿಯರು ಮಾತ್ರ ಸೀಟು ಬಿಟ್ಟುಕೊಡಲು ಒಪ್ಪುತ್ತಿಲ್ಲ.

ಬಸ್‌ ನಿಲ್ದಾಣದಲ್ಲೂ ಕುಳಿತುಕೊಳ್ಳ ವ್ಯವಸ್ಥೆಯಿಲ್ಲ
ಚಿಲಿಂಬಿಯ ಶ್ರೀನಿವಾಸ ಅವರು “ಉದಯವಾಣಿ ಸುದಿನ’ಕ್ಕೆ ಪ್ರತಿಕ್ರಿಯಿಸಿ “ಸ್ಟೇಟ್‌ಬ್ಯಾಂಕ್‌ ಸಿಟಿ ಬಸ್‌ ನಿಲ್ದಾಣದಲ್ಲಿ ಹಿರಿಯ ನಾಗರಿಕರಿಗೆ ಕುಳಿತುಕೊಳ್ಳಲು ಸಮರ್ಪಕ ವ್ಯವಸ್ಥೆ ಇಲ್ಲ. ಅಲ್ಲದೆ, ಬಸ್‌ಗಳಲ್ಲಿಯೂ ಹಿರಿಯ ನಾಗರಿಕರಿಗೆ ಮೀಸಲಿಟ್ಟ ಸೀಟುಗಳಲ್ಲಿ ಯುವಕರು -ಯುವತಿಯರು ಕುಳಿತುಕೊಳ್ಳುತ್ತಾರೆ’ ಎನ್ನುತ್ತಾರೆ.

ಎತ್ತರದ ಫುಟ್‌ಬೋರ್ಡ್‌
ನಗರದಲ್ಲಿ ಸಂಚರಿಸುವ ಸಿಟಿ ಬಸ್‌ಗಳಲ್ಲಿನ ಫುಟ್‌ಬೋರ್ಡ್‌ ಕನಿಷ್ಠ 52 ಸೆಂ.ಮೀ.
ಎತ್ತರವಿರಬೇಕು ಎಂಬ ಕಾನೂನು ಇದೆ. ಆದರೆ ಕೆಲವು ಸಿಟಿ ಬಸ್‌ಗಳು ಇದರ ಪಾಲನೆಯಾಗುತ್ತಿಲ್ಲ. ಇದೇ ಕಾರಣಕ್ಕೆ ಬಸ್‌ಗಳ ಮೆಟ್ಟಿಲುಗಳನ್ನೇರಲು ಕೂಡ ಹಿರಿಯರು ಕಷ್ಟಪಡುತ್ತಿದ್ದಾರೆ.

ಟೇಪ್‌ರೆಕಾರ್ಡರ್‌ಕಿರಿ ಕಿರಿ
ಬಸ್‌ಗಳಲ್ಲಿ ಧ್ವನಿವರ್ಧಕ ಬಳಕೆ ಮಾಡಬಾರದು ಎಂಬ ನಿಯಮ ಇದೆ. ಒಂದು ವೇಳೆ ಈ ನಿಯಮ ಪಾಲನೆ ಮಾಡದಿದ್ದರೆ ಬಸ್‌ಗಳಿಗೆ ಫಿಟ್‌ನೆಸ್‌ ಪ್ರಮಾಣಪತ್ರ ಲಭಿಸುವುದಿಲ್ಲ ನಗರದಲ್ಲಿ ಓಡಾಡುವ ಅನೇಕ ಬಸ್‌ಗಳಲ್ಲಿ ಅನಧಿಕೃತವಾಗಿ ಟೇಪ್‌ರೆಕಾರ್ಡರ್‌ ಅಳವಡಿಸಲಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರು ಈಗಾಗಲೇ ಸಾರಿಗೆ ಇಲಾಖೆಗೆ ದೂರು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಲು ಸಾರಿಗೆ ಇಲಾಖೆ ತೀರ್ಮಾನಿಸಿದೆ.

 ಬೆಂಬಲವಿಲ್ಲ
ಹಿರಿಯ ನಾಗರಿಕರ ಆಸನಗಳು ಅವರಿಗೇ ಮೀಸಲಿರಬೇಕು. ಈ ಬಗ್ಗೆ ನಿರ್ವಾಹಕರು ನೋಡಿಕೊಳ್ಳಬೇಕು. ಈ ವಿಚಾರ ಅವರ ಗಮನಕ್ಕೆ ತರಲಾಗುವುದು. ಬಸ್‌ಗಳಲ್ಲಿ ಟೇಪ್‌ರೆಕಾರ್ಡ್‌ ಅಳವಡಿಸುವ ವಿಷಯ ಗಮನಕ್ಕೆ ಬಂದಿದೆ. ಇದಕ್ಕೆ ನಮ್ಮ ಬೆಂಬಲವಿಲ್ಲ.
 - ದಿಲ್‌ರಾಜ್‌ ಆಳ್ವ, ಸಿಟಿ ಬಸ್‌ ಮಾಲಕರ ಸಂಘದ ಅಧ್ಯಕ್ಷ

 ದಂಡ ವಿಧಿಸುತ್ತೇವೆ
ಹಿರಿಯ ನಾಗರಿಕರಿಗೆಂದು ಮೀಸಲಿಟ್ಟ ಆಸನಗಳನ್ನು ಅವರಿಗೇ ನಿಗದಿಪಡಿಸಬೇಕು. ಇದನ್ನು ನೋಡಿಕೊಳ್ಳುವುದು ಬಸ್‌ ನಿರ್ವಾಹಕನ ಜವಾಬ್ದಾರಿ. ಆದರೆ ಈ ನಿಯಮ ಪಾಲನೆಯಾಗುತ್ತಿಲ್ಲ ಎಂಬ ದೂರು ಬಂದಿದೆ. ಬಸ್‌ ಮಾಲಕರು ಬಸ್‌ ಫಿಟ್‌ನೆಸ್‌ ಪರೀಕ್ಷೆಯ ವೇಳೆ ಟೇಪ್‌ರೆಕಾರ್ಡ್‌ ತೆಗೆದು, ಬಾಕಿ ವೇಳೆ ಉಪಯೋಗಿಸುತ್ತಿರುವ ಬಗ್ಗೆಯೂ ದೂರು ಇದೆ. ಈ ಬಗ್ಗೆ ಸದ್ಯದಲ್ಲಿಯೇ ಕಾರ್ಯಾಚರಣೆ ನಡೆಸಿ ದಂಡ ವಿಧಿಸುತ್ತೇವೆ.
 - ಚಂದ್ರ ಉಪ್ಪಾರ, ಆರ್‌ಟಿಒ ಮಂಗಳೂರು

-  ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.