ತುಂಬೆ ಅಣೆಕಟ್ಟಿನಲ್ಲಿ 4.88 ಮೀ. ನೀರು
Team Udayavani, Apr 9, 2020, 12:06 PM IST
ಬಂಟ್ವಾಳ: ಮಂಗಳೂರು ನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ಅಣೆಕಟ್ಟಿನಲ್ಲಿ ಬುಧವಾರ ನೀರಿನ ಮಟ್ಟ 4.88 ಮೀ. ಇದ್ದು, ಒಂದು ವೇಳೆ 4.50 ಮೀ.ಗೆ ಇಳಿದರೆ ಶಂಭೂರು ಎಎಂಆರ್ ಅಣೆಕಟ್ಟಿನಿಂದ ತುಂಬೆಗೆ ನೀರು ಹರಿಸಬೇಕಾಗುತ್ತದೆ.
ಕಳೆದ ವರ್ಷ ಈ ಸಮಯದಲ್ಲಿ ಎಎಂಆರ್ ಅಣೆಕಟ್ಟಿನಿಂದ ಒಂದು ಬಾರಿ ನೀರು ಹರಿಸಿದ್ದರಿಂದ ತುಂಬೆಯಲ್ಲಿ 5.11 ಮೀ. ನೀರು ಇತ್ತು. ಪ್ರಸ್ತುತ ನದಿಯಲ್ಲಿ ನೀರಿನ ಒಳಹರಿವು ನಿಂತಿದ್ದರೂ ಕಳೆದ ವರ್ಷಕ್ಕೆ ಹೋಲಿಸಿದರೆ ನೀರಿನ ಒಳಹರಿವು ಹೆಚ್ಚು ದಿನಗಳವರೆಗೆ ಕಂಡುಬಂದ ಹಿನ್ನೆಲೆಯಲ್ಲಿ ಈ ಬಾರಿ ನೀರಿನ ಸಮಸ್ಯೆ ಬಾರದು ಎಂದು ಅಧಿಕಾರಿಗಳು ಹೇಳುತ್ತಾರೆ.
ಈ ಬಾರಿ ನೀರಿನ ಒಳಹರಿವು ಹೆಚ್ಚಾಗಿದ್ದ ಕಾರಣ ಹಲವು ಬಾರಿ 6 ಮೀ.ಗಿಂತ ಹೆಚ್ಚಿನ ನೀರನ್ನು ಹೊರಗೆ ಬಿಡಲಾಗಿತ್ತು. ತುಂಬೆಯಲ್ಲಿ ಈಗ ಇರುವುದು 4.88 ಮೀ. ಆದರೂ ಎಎಂಆರ್ ಅಣೆಕಟ್ಟಿನಲ್ಲಿ ಹೇರಳವಾದ ಜಲಸಂಗ್ರಹವಿದೆ. ತುಂಬೆಯಲ್ಲಿ 4.50 ಮೀ.ಗೆ ನೀರು ಇಳಿದರೆ ಮಾತ್ರ ಎಎಂಆರ್ನಿಂದ ಹರಿಸಲಾಗುವುದು ಎಂದು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ನರೇಶ್ ಶೆಣೈ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ