ಪಿಲಿಕುಳ ಜೈವಿಕ ಉದ್ಯಾನವನದ ಹುಲಿ ಮರಿ ಸಾವು
Team Udayavani, Nov 14, 2022, 12:34 PM IST
ಸಾಂದರ್ಭಿಕ ಚಿತ್ರ
ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಹುಲಿಗಳ ಮಧ್ಯೆ ನಡೆದ ಕಚ್ಚಾಟದಲ್ಲಿ ಸುಮಾರು 2 ವರ್ಷದ ಹುಲಿಮರಿಯೊಂದು ಕೆಲ ಸಮಯದ ಹಿಂದ ತೀವ್ರವಾಗಿ ಗಾಯಗೊಂಡಿದ್ದು, ಜೈವಿಕ ಉದ್ಯಾನವನದ ವೈದ್ಯಾಧಿಕಾರಿ ಡಾ. ವಿಷ್ಣು ದತ್, ಡಾ.ಮಧುಸೂದನ ಮತ್ತು ಡಾ.ಯಶಸ್ವಿ ಶಸ್ತ್ರ ಚಿಕಿತ್ಸೆ ನೀಡಿದ ಬಳಿಕ ಹುಲಿ ಚೇತರಿಸಿಕೊಂಡು ಸಹಜ ಸ್ಥಿತಿಗೆ ಮರಳಿತ್ತು.
ಆದರೆ ನ.11 ರಂದು ಮಧ್ಯಾಹ್ನ ಹುಲಿ ಮರಿಯ ಆರೋಗ್ಯ ಏರುಪೇರುಗೊಂಡಿದ್ದು, ವೈದ್ಯಾಧಿಕಾರಿಗಳು ಶುಶ್ರೂಷೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದೆ.
ಮೃತ ಹುಲಿ ಮರಿಯ ಮರಣೋತ್ತರ ಪರೀಕ್ಷೆ ನಡೆಸಿದ್ದು, ಕಿಡ್ನಿ ಮತ್ತು ಅಂಗಾಂಗಳ ವೈಫಲ್ಯ ಸಮಸ್ಯೆ ಕಂಡು ಬಂದಿದೆ ಎಂದು ಡಾ. ವಿಷ್ಣು ದತ್ ತಿಳಿಸಿದ್ದಾರೆ.
ಮೃತ ಹುಲಿಯ ಅಂಗಾಂಗಗಳ ಮಾದರಿಯನ್ನು ಪರೀಕ್ಷೆಗಾಗಿ ಉತ್ತರ ಪ್ರದೇಶದ ಐ.ವಿ.ಆರ್.ಐ., ಬರೇಲಿ ಮತ್ತು ಬೆಂಗಳೂರಿನ ಐ.ಎ.ಹೆಚ್.ಅಂಡ್ ವಿ.ಬಿ. ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ಮರಿಯು ಪಿಲಿಕುಳದಲ್ಲಿಯೇ ಜನಿಸಿದ್ದಾಗಿದೆ. ಪಿಲಿಕುಳದಲ್ಲಿ ಹುಲಿಗಳ ಸಂಖ್ಯೆ 11 ಕ್ಕೆ ಇಳಿದಿದೆ ಎಂದು ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನ ನಿರ್ದೇಶಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
ಬಸ್ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!