ಧೂಮಪಾನಿ ತನಗೊಬ್ಬನಿಗಲ್ಲ , ಸಮಾಜಕ್ಕೆ ಅಪಾಯಕಾರಿ


Team Udayavani, Mar 13, 2019, 5:55 AM IST

14-march-4.jpg

ಹಲವು ಆರೋಗ್ಯ ಸಮಸ್ಯೆಗೆ ಕಾರಣವಾಗಿರುವ ಧೂಮಪಾನದಿಂದ ಪ್ರತಿ ವರ್ಷ ಸಾವಿರಾರು ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಧೂಮಪಾನದಿಂದ ವ್ಯಸನಿ ಜತೆಗೆ ಅಕ್ಕ ಪಕ್ಕದವರೂ ಕಾಯಿಲೆಗೆ ತುತ್ತಾಗುವುದರಿಂದ ಇದೊಂದು ವೈಯಕ್ತಿಕ ಆಯ್ಕೆ ಎಂದು ಸುಲಭದಲ್ಲಿ ತಳ್ಳಿ ಹಾಕುವಂತಿಲ್ಲ. ಆದ್ದರಿಂದಲೇ ಸರಕಾರ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿ ಆದೇಶ ಹೊರಡಿಸಿದೆ. ಜತೆಗೆ ಸಿಗರೇಟ್‌, ಬೀಡಿ ಮುಂತಾದ ಉತ್ಪನ್ನಗಳು, ಸಿನೆಮಾ ಥಿಯೇಟರ್‌ ಮುಂತಾದೆಡೆ ಧೂಮಪಾನದಿಂದ ಸಂಭವಿಸುವ ಆರೋಗ್ಯ ಸಮಸ್ಯೆಯ ಬಗ್ಗೆ ಎಚ್ಚರಿಕೆ ನೀಡಲು ಕ್ರಮ ಕೈಗೊಂಡಿದೆ. ಪ್ರಸ್ತುತ ಧೂಮಪಾನದ ಚಟ ಬಿಡಿಸುವಂತಹ ಅನೇಕ ಉತ್ಪನ್ನಗಳು ಮಾರುಕಟ್ಟೆಯಲ್ಲಿದ್ದು, ವ್ಯಸನಿಗಳಿಗೆ ಹೊಸ ಸಾಧ್ಯತೆಯ ಬಾಗಿಲು ತೆರೆದಿದೆ.

ಧೂಮಪಾನದಿಂದ ಹೊಗೆ ರೂಪದ ವಿಷ ನಮ್ಮ ದೇಹ ಸೇರುತ್ತದೆ. ಇನ್ನೊಂದು ಆತಂಕಕಾರಿ ಅಂಶ ಎಂದರೆ ಧೂಮಪಾನಿ ಮಾತ್ರವಲ್ಲ ಸುತ್ತಮುತ್ತಲಿನವರೂ ಇದರ ದುಷ್ಪರಿಣಾಮ ಎದುರಿಸಬೇಕಾಗುತ್ತದೆ. ಇದು ವ್ಯಸನಿಯೊಬ್ಬನ ಸಮಸ್ಯೆಯಲ್ಲ. ಬದಲಾಗಿ ಇಡೀ ಸಮಾಜಕ್ಕೇ ಅಪಾಯಕಾರಿ. ಹೀಗಾಗಿ ಪ್ರತಿವರ್ಷ ಮಾರ್ಚ್‌ ಎರಡನೇ ಬುಧವಾರವನ್ನು ನೋ ಸ್ಮೋಕಿಂಗ್‌ ಡೇ ಆಗಿ ಆಚರಿಸಲಾಗುತ್ತದೆ.

ಏನಿದು ನೋ ಸ್ಮೋಕಿಂಗ್‌ ಡೇ?
ಧೂಮಪಾನ ತ್ಯಜಿಸಬೇಕು ಎನ್ನುವ ಮನೋಭಾವ ಹೊಂದಿದ ವ್ಯಸನಿಗಳನ್ನು ಉತ್ತೇಜಿಸುವ ಉದ್ದೇಶದಿಂದ ನೋ ಸ್ಮೋಕಿಂಗ್‌ ಡೇ ಆಚರಿಸಲಾಗುತ್ತದೆ. 1984ರಲ್ಲಿ ಮೊದಲ ಬಾರಿ ಈ ದಿನವನ್ನು ಆಚರಿಸಲಾಯಿತು. ಧೂಮಪಾನದಿಂದಾಗುವ ದುಷ್ಪರಿಣಾಮ, ಅದರಿಂದ ಹೊರ ಬರುವ ರೀತಿ ಇತ್ಯಾದಿಗಳ ಕುರಿತು ಆ ದಿನ ಅರಿವು ಮೂಡಿಸಲಾಗುತ್ತದೆ. ಪ್ರತಿ ವರ್ಷ ಒಂದೊಂದು ಥೀಮ್‌ ಇಟ್ಟುಕೊಂಡು ದಿನಾಚರಣೆ ನಡೆಸಲಾಗುತ್ತದೆ.

ಇತ್ತೀಚೆಗೆ ಧೂಮಪಾನ ಎನ್ನುವುದು ಸರ್ವ ಸಾಮಾನ್ಯವಾಗಿದೆ. ಹಳ್ಳಿ, ನಗರ ಎನ್ನುವ ಪ್ರಾದೇಶಿಕ ಗಡಿ, ಹೆಣ್ಣು, ಗಂಡೆಂಬ ಭೇದವನ್ನೂ ಮೀರಿ ಈ ವ್ಯಸನ ವ್ಯಾಪಿಸಿದೆ. ಧೂಮಪಾನ ಬಾಯಿ, ಶ್ವಾಸಕೋಶದ ಕ್ಯಾನ್ಸರ್‌ ಗೆ ಕಾರಣವಾಗುತ್ತದೆ. ಧೂಮಪಾನ ವ್ಯಕ್ತಿಯೊಬ್ಬನ ವೈಯಕ್ತಿಕ ಆಯ್ಕೆಯಾದರೂ ಅದರಿಂದ ಅವನಷ್ಟೇ ಅಲ್ಲ ಅವನೊಂದಿಗಿರುವ ಇತರ ವ್ಯಕ್ತಿಗಳೂ ತೊಂದರೆ ಅನುಭವಿಸುತ್ತಾರೆ. ಪರೋಕ್ಷ ಧೂಮಪಾನವೂ ಹಲವು ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ. ಹೀಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಲು ಕ್ರಮ ಕೈಗೊಳ್ಳಲಾಗಿದೆ. 

ಭಾರತದಲ್ಲಿ ಧೂಮಪಾನಿಗಳು
ಅಧ್ಯಯನದ ಪ್ರಕಾರ ಭಾರತದಲ್ಲಿ ಸುಮಾರು 120 ಮಿಲಿಯನ್‌ ಧೂಮಪಾನಿಗಳಿದ್ದಾರೆ. ಅದರಲ್ಲಿ ಮಹಿಳೆಯರ ಪ್ರಮಾಣ ಸುಮಾರು 12.1 ಮಿಲಿಯನ್‌. ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ಜಗತ್ತಿನ ಧೂಮಪಾನಿಗಳ ಪೈಕಿ ಭಾರತದಲ್ಲಿ ಶೇ. 11.2 ಮಂದಿ ಇದ್ದಾರೆ. ಭಾರತದಲ್ಲಿ ಪುರುಷ ಧೂಮಪಾನಿಗಳ ಸಂಖ್ಯೆ 1998ರಿಂದ 2015ರಲ್ಲಿ ಶೇ.36ರಷ್ಟು ಹೆಚ್ಚಳವಾಗಿದೆ.

15 ಬಿಲಿಯನ್‌ ಪ್ರಪಂಚದಲ್ಲಿ ಪ್ರತಿ ದಿನ ಮಾರಾಟವಾಗುವ ಸಿಗರೇಟ್‌

10 ಮಿಲಿಯನ್‌ ಪ್ರಪಂಚದಲ್ಲಿ ಪ್ರತಿ 10 ನಿಮಿಷಕ್ಕೆ ಮಾರಾಟವಾಗುವ ಸಿಗರೇಟ್‌.

1 ಮಿಲಿಯನ್‌: ಪ್ರತಿ ವರ್ಷ ಭಾರತದಲ್ಲಿ ಮೃತಪಡುತ್ತಿರುವ ಧೂಮಪಾನಿಗಳು.

100 ಮಿಲಿಯನ್‌: ಭಾರತದ ವಯಸ್ಕ ಧೂಮಪಾನಿಗಳ ಸಂಖ್ಯೆ

ಶೇ.70 ಭಾರತದಲ್ಲಿ ಮರಣ ಹೊಂದುತ್ತಿರುವ 30- 69 ವಯಸ್ಸಿನ ಧೂಮಪಾನಿಗಳು

ದುಷ್ಪರಿಣಾಮಗಳು
1.  ಪ್ರತಿ ದಿನ 5ಕ್ಕಿಂತ ಹೆಚ್ಚು ಸಿಗರೇಟ್‌ ಸೇದುವವರಲ್ಲಿ ಹೃದಯ ರಕ್ತನಾಳದ ಕಾಯಿಲೆ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು.
2. ಹೃದಯ ಬಡಿತ ಜತೆಗೆ ರಕ್ತದೊತ್ತಡ ಹೆಚ್ಚಿಸುತ್ತದೆ.
3. ರಕ್ತದ ಪರಿಚಲನೆ ನಿಧಾನವಾಗಿ ಶ್ವಾಸಕೋಶ ಮತ್ತು ಚರ್ಮದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. 
4. ಶ್ವಾಸಕೋಶದ ಕ್ಯಾನ್ಸರ್‌ಗೆ ಕಾರ ಣ.
5. ಅಸ್ತಮಾ ರೋಗಿಗಳ ಮೇಲೆ ಬೀರುವ ಪರಿಣಾಮ ಭೀಕರವಾಗಿರುತ್ತದೆ.
6. ಎಲುಬು, ಹಲ್ಲುಗಳ ಆರೋಗ್ಯದ ಮೇಲೂ ಕೆಟ್ಟ ಪರಿಣಾಮ.
7. ಮಧುಮೇಹ ಉಲ್ಬಣ.
8. ರೋಗ ನಿರೋಧಕ ಶಕ್ತಿ ಕುಂದಿಸುತ್ತದೆ.

ರಮೇಶ್‌ ಬಳ್ಳಮೂಲೆ 

ಟಾಪ್ ನ್ಯೂಸ್

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.