ಮಂಗಳೂರು:ಒಳ ಉಡುಪಿನಲ್ಲಿ ಚಿನ್ನ ಸಾಗಾಣಿಕೆ: ವ್ಯಕ್ತಿ ಬಂಧನ
Team Udayavani, Mar 26, 2021, 4:23 PM IST
ಮಂಗಳೂರು: ತನ್ನ ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳ ಕೈಗೆ ಸಿಕ್ಕಿಹಾಕಿಕೊಂಡಿದ್ದು, ಈತನಿಂದ ಬರೋಬ್ಬರಿ 57,14,940/- ಮೌಲ್ಯದ 1.23 ಕಿ.ಗ್ರಾಂ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿತ ವ್ಯಕ್ತಿಯನ್ನು ಇಸ್ಮಾಯಿಲ್ ಅಹಮದ್ ಕಲ್ಲಾರ್ ಎಂದು ಗುರುತಿಸಲಾಗಿದ್ದು, ಇವನು ಕಾಸರಗೋಡು ಮೂಲದನೆಂದು ತಿಳಿದುಬಂದಿದೆ.
ಈತ ಶುಕ್ರವಾರ (ಮಾ.26)ರಂದು ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಪರಿಶೀಲನಾ ಹಂತದಲ್ಲಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ.
ಇದನ್ನೂ ಓದಿ:ಕಷ್ಟಗಳನ್ನು ಎದುರಿಸೋಣ; “ಓಡಬೇಡಿ ತಿರುಗಿ ನಿಂತು ಎದುರಿಸಿರಿ’ ಎಂಬುದು ಜೀವನೋತ್ಸಾಹದ ಮಂತ್ರ
ಈ ಕಾರ್ಯಾಚರಣೆಯು ಡಾ. ಕಪಿಲ್ ಗಾಡೆ IRS, ಡೆಪ್ಯುಟಿ ಕಮಿಷನರ್ ಮಾರ್ಗದರ್ಶನಲ್ಲಿ ನಡೆದಿದ್ದು, ಇವರ ಜೊತೆಗೆ ಅಧಿಕಾರಿಗಳಾದ ಶ್ರೀಕಾಂತ್ ಕೆ., ನಾಗೇಶ್ ಕುಮಾರ್ , ನವೀನ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ