ರಾಜ್ಯ ಹೆದ್ದಾರಿಗೆ ಮರ ಬಿದ್ದು ಸಂಚಾರಕ್ಕೆ ತೊಡಕು
Team Udayavani, May 21, 2022, 1:08 AM IST
ಕಿನ್ನಿಗೋಳಿ: ಮೂಲ್ಕಿ – ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಅಂಗರಗುಡ್ಡೆಯ ಬಳಿ ರಸ್ತೆ ಬದಿಯ ಅಕೇಶಿಯಾ ಮರ ಶುಕ್ರವಾರ ರಾತ್ರಿ ರಸ್ತೆಗೆ ಅಡ್ಡವಾಗಿ ಬಿದ್ದು ಸಂಚಾರಕ್ಕೆ ತೊಡಕುಂಟಾಯಿತು.
ವಿದ್ಯುತ್ ತಂತಿಯ ಮೇಲೆ ಮರದ ಗೆಲ್ಲುಗಳು ಬಿದ್ದಿರುವುದರಿಂದ ಕಿನ್ನಿಗೋಳಿ ಹಾಗೂ ಕಟೀಲು ಭಾಗಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಕೆಲವು ವಾಹನಗಳು ಕೆರೆಕಾಡು ರಸ್ತೆ ಬಳಸಿ ಸಂಚರಿಸಿದವು.
ಘಟನೆ ನಡೆದ ಸ್ಥಳಕ್ಕೆ ಕಿನ್ನಿಗೋಳಿ ಮೆಸ್ಕಾಂ ಅಧಿಕಾರಿ ಸುಕುಮಾರ್ ಹಾಗೂ ಸಿಬಂದಿ ಭೇಟಿ ನೀಡಿದರು. ಅಂಗರಗುಡ್ಡೆ ದಾವೂದ್ ಹಕೀಂ ಅವರು ಮರ ಕಡಿಯುವ ಯಂತ್ರದ ಮೂಲಕ ಮರ ಕಡಿದು ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ವಿಟ್ಲ: ಮಳೆ ಅಬ್ಬರ- ಹಲವು ಮನೆಗಳು ಜಲಾವೃತ-ಜನ ಜೀವನ ಅಸ್ತವ್ಯಸ್ತ
ಹರ್ಷ ಹತ್ಯೆ ಪ್ರಕರಣ: ಶಿವಮೊಗ್ಗದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಎನ್ ಐಎ ತಂಡ
ಕುಣಿಗಲ್: ಕೆಂಪೇಗೌಡರಿಗೆ ಅಪಮಾನವಾದ ಸ್ಥಳದಲ್ಲಿ ಪ್ರತಿಮೆ ನಿರ್ಮಾಣ: ಕೆಂಪೇಗೌಡ ಸೇನೆ ತಿರ್ಮಾನ
ಉದಯಪುರ ಮತ್ತೆ ಉದ್ವಿಗ್ನ: ಶಿರಚ್ಛೇದನ ಘಟನೆ ಖಂಡಿಸಿ ಬೃಹತ್ ಪ್ರತಿಭಟನೆ, ಕಲ್ಲುತೂರಾಟ
400 ಥಿಯೇಟರ್ ಗಳಲ್ಲಿ ಬಿಡುಗಡೆಯಾಗಲಿದೆ ‘ಬೈರಾಗಿ’