ಅಮೆರಿಕ ಪ್ರಜೆ “ಕೈಲಿ’ಯ ತುಳಸಿ ಪೂಜೆ !


Team Udayavani, Nov 8, 2022, 3:35 PM IST

11

ಫಳ್ನೀರ್‌: ದೂರದ ಅಮೆರಿಕಕ್ಕೂ ತುಳುನಾಡಿನ ತುಳಸಿ ಪೂಜೆಗೂ ಎಲ್ಲಿಯ ಸಂಬಂಧ? ಎಂದು ಯಾರಾದರೂ ಪ್ರಶ್ನೆ ಕೇಳಿದರೆ, ಸಂಬಂಧವಿದೆ ಎಂದು ತೋರಿಸಿಕೊಟ್ಟಿದ್ದಾರೆ ಅಮೆರಿಕ ಪ್ರಜೆ ಕೈಲಿ ಸ್ಟೋಜ್‌!

ಆಯುರ್ವೇದಕ್ಕೆ ಸಂಬಂಧಿಸಿದ ಸಂಶೋಧನ ಉದ್ದೇಶದಿಂದ ಸುಮಾರು 8 ತಿಂಗಳುಗಳಿಂದ ಮಂಗಳೂರಿನಲ್ಲಿ ನೆಲೆಸಿರುವ ಕೈಲಿ ಅವರು ಈ ಬಾರಿಯ ತುಳಸಿ ಪೂಜೆಯನ್ನು ಸಂಭ್ರಮದಿಂದಲೇ ಆಚರಿಸಿದ್ದಾರೆ. ತಮ್ಮ ಸ್ನೇಹಿತೆ, ನಗರದ ಫಳ್ನೀರ್‌ ನಿವಾಸಿ, ಸುಲಕ್ಷಣಾ ಕಾರ್ಕಳ ಅವರ ಮನೆಯಲ್ಲಿ ಪೂಜೆಯ ಸಂಭ್ರಮದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ಮಾರುಕಟ್ಟೆಗೆ ಹೋಗಿ ಕಬ್ಬು, ಹೂ-ಹಣ್ಣು ತರುವುದರಿಂದ ಹಿಡಿದು, ತುಳಸಿಕಟ್ಟೆಗೆ ಪೈಂಟ್‌ ಮಾಡುವುದು, ಕಬ್ಬು ಹೂವಿನ ಅಲಂಕಾರ, ರಂಗೋಲಿ ಹಾಕುವುದು ಎಲ್ಲವನ್ನೂ ಅವರೇ ಸ್ವತಃ ಮಾಡಿದ್ದಾರೆ. ರಾತ್ರಿ ಪೂಜೆಯಲ್ಲೂ ಭಾಗಿಯಾಗಿದ್ದಾರೆ. ಆ ಮೂಲಕ ತುಳುನಾಡಿನ ಸಂಸ್ಕೃತಿಯನ್ನು ಅರಿಯುವ ಪ್ರಯತ್ನದಲ್ಲಿದ್ದಾರೆ.

ಅಮೆರಿಕದ ಫುಲ್‌ಬ್ರೈಟ್‌ ನೆಹರೂ ರಿಸರ್ಚ್‌ ಸ್ಕಾಲರ್‌ ಆಗಿರುವ ಕೈಲಿ ಸ್ಟೋಜ್‌ ಅವರು ಸಂತ ಅಲೋಶಿಯಸ್‌ ಕಾಲೇಜಿನಲ್ಲಿ ಡಾ| ಶಶಿಕಿರಣ್‌ ಅವರ ಮಾರ್ಗದರ್ಶನದಲ್ಲಿ ಅನ್ವಯಿಕ ಜೀವಶಾಸ್ತ್ರ ಪ್ರಯೋಗಾಲಯದಲ್ಲಿ “ಇನ್‌ ವೆಸ್ಟಿಗೇಟಿಂಗ್‌ ಏನ್ಶಿಯಂಟ್‌ ಅಯುರ್ವೇದಿಕ್‌ ಮೆಡಿಸಿನ್‌ ಫ್ರಮ್‌ ದಿ ಐರನ್‌ ಏಜ್‌’ ವಿಷಯದಲ್ಲಿ ಸಂಶೋಧನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ತಮ್ಮ ಈ ಅವಧಿಯಲ್ಲಿ ತುಳು ಸಂಸ್ಕೃತಿಯನ್ನು, ಇಲ್ಲಿನ ಆಹಾರ ಆಚರಣೆ, ಜೀವನ ಕ್ರಮವನ್ನೂ ಅರಿಯುವ ಪ್ರಯತ್ನ ಮಾಡಿದ್ದಾರೆ. ಕಂಬಳ, ದೈವಾರಾಧನ ಸ್ಥಳಗಳಿಗೆ ಭೇಟಿ ನೀಡಿದ್ದು, ಯಕ್ಷಗಾನ ಮತ್ತು ಯೋಗ ಕಲಿಯುತ್ತಿದ್ದಾರೆ. ವಿಭಾಗದ ಸಂಶೋಧಕರಾದ ಸುಲಕ್ಷಣಾ ಕಾರ್ಕಳ ಮತ್ತು ಸುಧೀಕ್ಷಾ ಕಿರಣ್‌ ಅವರು ಕೈಲಿ ಅವರಿಗೆ ತುಳು ಸಂಸ್ಕೃತಿಯ ಪರಿಚಯ ಮಾಡಿಸುತ್ತಿದ್ದಾರೆ. ಸದ್ಯ ಮಂಗಳೂರಿನ ವೆಲೆನ್ಸಿಯಾದಲ್ಲಿ ವಾಸವಾಗಿದ್ದಾರೆ.

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.