ತುಂಬಿದ ತುಂಬೆ ಅಣೆಕಟ್ಟು: ಮಂಗಳೂರು ನಗರಕ್ಕೆ ನಿರಂತರ ನೀರು
Team Udayavani, Jun 22, 2019, 11:17 AM IST
ಮಂಗಳೂರು: ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಿದ್ದು, ತುಂಬೆ ಅಣೆಕಟ್ಟಿಗೆ ಸಾಕಷ್ಟು ನೀರು ಹರಿದು ಬರುತ್ತಿದೆ. ಮಂಗಳೂರು ನಗರಕ್ಕೆ ತಿಂಗಳಿಗೂ ಅಧಿಕ ಕಾಲದಿಂದ ಕಾಡುತ್ತಿದ್ದ ನೀರಿನ ಸಮಸ್ಯೆ ನೀಗಿದ್ದು, ನೀರಿನ ಸರಬರಾಜು ನಿರಂತರವಾಗಿ ನಡೆಯುತ್ತಿದೆ.
ಒಳಹರಿವು ಸಾಕಷ್ಟು ಇರುವುದರಿಂದ ತುಂಬೆ ಅಣೆಕಟ್ಟಿನಲ್ಲಿ ಈಗ 5 ಮೀ. ನೀರಿನ ಮಟ್ಟವನ್ನು ಕಾಯ್ದುಕೊಳ್ಳಲಾಗುತ್ತಿದೆ. ಒಂದು ಗೇಟನ್ನು ತೆರೆದು ಹೆಚ್ಚುವರಿ ನೀರನ್ನು ಹೊರಬಿಡಲಾಗುತ್ತಿದೆ.
ಬಜೆಯಲ್ಲಿ ಹೊರ ಹರಿವು ಪ್ರಾರಂಭ: ನಾಳೆಯಿಂದ ಸತತ ನೀರು
ಉಡುಪಿ: ನಗರಕ್ಕೆ ನೀರು ಪೂರೈಕೆ ಮಾಡುವ ಬಜೆ ಅಣೆಕಟ್ಟಿನಲ್ಲಿ ನೀರಿನ ಹೊರಹರಿವು ಪ್ರಾರಂಭವಾಗಿದೆ. ಶುಕ್ರವಾರ ಸಂಜೆ ನೀರಿನ ಮಟ್ಟ 6.6 ಮೀಟರ್ಗೆ ಏರಿಕೆಯಾಗಿದ್ದು, ಹೆಚ್ಚುವರಿ ನೀರನ್ನು ಹೊರಬಿಡಲಾಗಿದೆ.
ನಗರದಲ್ಲಿ ಜೂ. 10ರ ಬಳಿಕ ಮಳೆಯಾಗುತ್ತಿರುವ ಪರಿಣಾಮ ಸ್ವರ್ಣ ನದಿಯಲ್ಲಿ ನೀರು ಹರಿದು ಬರುತ್ತಿದೆ. ಕಾರ್ಕಳದ ಮುಂಡ್ಲಿ ಅಣೆಕಟ್ಟಿಗೆ ಹಾಕಲಾದ ಗೇಟು ತೆರೆಯಲಾಗಿದೆ. ಇದರ ಪರಿಣಾಮ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿದು ಬಂದಿದೆ. ಮೇ 5ರಂದು ಬಜೆಗೆ ಬರುವ ನೀರು ಸ್ಥಗಿತಗೊಂಡ ಪರಿಣಾಮ ನಗರದಲ್ಲಿ ನೀರಿನ ಸಮಸ್ಯೆ ಎದುರಾಗಿತ್ತು. ಕಳೆದೊಂದು ತಿಂಗಳಿನಿಂದ ನಗರಸಭೆ 35 ವಾರ್ಡ್ ಗಳನ್ನು 6 ವಿಭಾಗಗಳಾಗಿ ವಿಂಗಡಿಸಿ ಆರು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲಾಗಿತ್ತು.
ಜೂ. 23ರಿಂದ ನಿರಂತರ ನೀರು ಸರಬರಾಜು ಮಾಡಲಾಗುವುದು ಎಂದು ಪೌರಾಯುಕ್ತರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ