ಚೌತಿ ಹಬ್ಬಕ್ಕೆ “ಅರಶಿನ ಗಣಪ’; ಅರಶಿನ, ಸೆಗಣಿಯಿಂದ ಮೂರ್ತಿ ತಯಾರಿ

ಜನಜಾಗೃತಿ ಅಭಿಯಾನ; ರೋಗನಿರೋಧಕ ಶಕ್ತಿ ಹೆಚ್ಚಳ; ಉತ್ತಮ ಪ್ರತಿಕ್ರಿಯೆ

Team Udayavani, Aug 18, 2020, 6:00 AM IST

ಚೌತಿ ಹಬ್ಬಕ್ಕೆ “ಅರಶಿನ ಗಣಪ’; ಅರಶಿನ, ಸೆಗಣಿಯಿಂದ ಮೂರ್ತಿ ತಯಾರಿ

ಮಹಾನಗರ: ರೋಗನಿರೋಧಕ ಶಕ್ತಿ ಹೆಚ್ಚಳದಿಂದ ಕೊರೊನಾದಂತಹ ಕಾಯಿಲೆಗಳನ್ನು ದೂರವಿಡಬಹುದು. ಅದಕ್ಕಾಗಿಯೇ ರೋಗ ನಿರೋಧಕ ಶಕ್ತಿಯುಳ್ಳ ಅರಶಿನ, ಸೆಗಣಿಯನ್ನೇ ಬಳಸಿಕೊಂಡು ಗಣೇಶನ ಮೂರ್ತಿ ನಿರ್ಮಿಸುವಂತೆ ಜನಜಾಗೃತಿಗಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ “ಅರಶಿನ ಗಣಪ’ ಅಭಿಯಾನವನ್ನು ರೂಪಿಸಿದೆ.

ಪಿಒಪಿ ಹಾಗೂ ಬಣ್ಣದ ಮಣ್ಣಿನ ಗಣೇಶ ಮೂರ್ತಿಗಳ ಬಳಕೆಯಿಂದ ಪರಿಸರ ನಾಶವಾಗುತ್ತದೆ. ಅದಕ್ಕಾಗಿಯೇ ಪರಿಸರಸ್ನೇಹಿ ಗಣೇಶನ ಮೂರ್ತಿ ನಿರ್ಮಿಸಿ ಆರಾಧನೆಗೆ ಇತ್ತೀಚಿನ ದಿನಗಳಲ್ಲಿ ಒತ್ತು ನೀಡಲಾಗುತ್ತದೆ. ಈ ಬಾರಿ ಕೊರೊನಾ ಕಾರಣದಿಂದಾಗಿ ಸಾರ್ವಜನಿಕ ಗಣೇಶ ಚತುರ್ಥಿ ಆಚರಣೆಗೆ ನಿರ್ಬಂಧವಿದೆ. ಹೀಗಾಗಿ ಮನೆಮನೆಗಳಲ್ಲೇ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಗುಣವುಳ್ಳ ಅರಶಿನ, ಸೆಗಣಿಯನ್ನು ಬಳಸಿಕೊಂಡು ಗಣೇಶ ಮೂರ್ತಿ ತಯಾರಿಸಿ ಆರಾಧಿಸಲು ಜನ ಮುಂದಾಗಬೇಕು ಎಂಬುದು ಮಂಡಳಿಯ ಉದ್ದೇಶ. ಅದಕ್ಕಾಗಿ “ಅರಶಿನ ಗಣಪ’ ಆರಾಧನೆಗೆ ಮಂಡಳಿ ಕರೆ ಕೊಟ್ಟಿದೆ.

ದ.ಕ.: ಪ್ಯಾಕೆಟ್‌ನಲ್ಲಿ ಸ್ಟಿಕ್ಕರ್‌
“ಅರಶಿನ ಗಣಪ’ ಅಭಿಯಾನವನ್ನು ಮನೆಮನೆಗೆ ತಲುಪಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಹಾಲಿನ ಪ್ಯಾಕೆಟ್‌, ಎಣ್ಣೆ ಪ್ಯಾಕೆಟ್‌ಗಳಲ್ಲಿ “ಅರಶಿನ ಗಣಪ’ ಅಭಿಯಾನದ ಸ್ಟಿಕರ್‌ ಅಂಟಿಸಿ ಮನೆಮನೆಗಳಿಗೆ ತಲುಪಿಸುವ ಪ್ರಯತ್ನಗಳಾಗುತ್ತಿವೆ. ಇದರೊಂದಿಗೆ ವಿದ್ಯುತ್‌ ಬಿಲ್‌ನಲ್ಲಿಯೂ ಸಂದೇಶ ಬರೆ ಯಿಸಲು ಕೋರಿಕೊಳ್ಳಲಾಗಿದೆ ಎಂದು ಪರಿಸರಾಧಿಕಾರಿಗಳು ತಿಳಿಸಿದ್ದಾರೆ.

ಉತ್ತಮ ಸ್ಪಂದನೆ
ಸಾಮಾಜಿಕ ಜಾಲತಾಣಗಳ ಮುಖಾಂ ತರ ಈಗಾಗಲೇ ಮಂಡಳಿಯು ಈ ಅಭಿಯಾನಕ್ಕೆ ಜನಸಾಮಾನ್ಯರಿಂದ ಪ್ರತಿಕ್ರಿ ಯೆಗಳನ್ನು ಆಹ್ವಾನಿಸುತ್ತಿದ್ದು, ಹಲ ವರು ತಮ್ಮ ಮನೆಯಲ್ಲಿ ತಯಾರಿಸಿದ ಅರಶಿನ ಗಣಪನ ಮೂರ್ತಿಗಳ ಫೋಟೋಗಳನ್ನು ಕಳುಹಿಸಿಕೊಟ್ಟಿದ್ದಾರೆ. ಅವುಗಳನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮನೆಗಳಲ್ಲಿ ತಯಾರಿಸಿದ ಮೂರ್ತಿಗಳನ್ನು ಮಂಡಳಿಯ ಫೇಸುºಕ್‌ ಪೇಜ್‌ನಲ್ಲಿ ಅಪ್ಲೋಡ್‌ ಮಾಡಲು ಜನರಿಗೆ ಅವಕಾಶ ಕಲ್ಪಿಸಲಾಗಿದೆ.

ಅರಶಿನ ಗಣಪ ತಯಾರಿಕೆ ಹೇಗೆ?
ಅರಶಿನ ಪುಡಿಗೆ ಮೈದಾ, ಅಕ್ಕಿ ಅಥವಾ ರಾಗಿಹಿಟ್ಟನ್ನು ಸಮಾನವಾಗಿ ಮಿಶ್ರಣ ಮಾಡಿಕೊಳ್ಳಬೇಕು. 7-8 ಚಮಚ ಸಕ್ಕರೆ ಸೇರಿಸಬೇಕು. ಮಿಶ್ರಣ ಹದ ಮಾಡಿಕೊಳ್ಳಲು ಬೇಕಾದಷ್ಟು ನೀರನ್ನು ಬಳಸಿಕೊಳ್ಳಬೇಕು. ಬಳಿಕ ಮೂರ್ತಿ ತಯಾರಿಸಬೇಕು. ಮೂರ್ತಿಯ ಕಣ್ಣಿನ ಭಾಗದಲ್ಲಿ ಮೆಣಸಿನ ಕಾಳುಗಳನ್ನು ಅಳವಡಿಸಿ ಕೊಳ್ಳಬಹುದು. ವಿಗ್ರಹ ತಯಾರಾದ ಬಳಿಕ ಹೂವಿನಿಂದ ಅಲಂಕಾರ ಮಾಡಿ ಕೊಳ್ಳುವುದು. ಸೆಗಣಿಯಲ್ಲಿಯೂ ಇದೇ ರೀತಿಯಾಗಿ ಮೂರ್ತಿ ಗಟ್ಟಿಯಾಗಿ ನಿಲ್ಲುವಂತೆ ತಯಾರಿಸಿಕೊಳ್ಳಬಹುದು. ಆರಾಧನೆ ಮುಗಿದ ಬಳಿಕ ಮನೆಯಲ್ಲೇ ಮೂರ್ತಿಯನ್ನು ವಿಸರ್ಜನೆ ಮಾಡಬಹುದು ಎನ್ನುತ್ತಾರೆ ಪರಿಸರಾಧಿಕಾರಿಗಳು.

ಮನೆಮನೆಗೆ ಮಾಹಿತಿ
ಈ ಬಾರಿ ಸಾರ್ವಜನಿಕ ಗಣೇಶ ಚತುರ್ಥಿ ಆಚರಣೆಗೆ ನಿರ್ಬಂಧ ಇರುವುದರಿಂದ ಜನರು ಮನೆಮನೆಗಳಲ್ಲೇ ಅರಶಿನ ಗಣಪನ ಮೂರ್ತಿ ತಯಾರಿಸಿ ಆರಾಧಿಸಬಹುದು. ಇದು ಪರಿಸರಕ್ಕೂ ಪೂರಕ, ರೋಗ ನಿರೋಧಕ ಶಕ್ತಿಯೂ ಹೆಚ್ಚಿರುತ್ತದೆ. ಜಿಲ್ಲೆಯಲ್ಲಿ ಈ ಅಭಿಯಾನವನ್ನು ಮನೆಮನೆಗೆ ತಲುಪಿಸಲು ಕ್ರಮಕೈಗೊಳ್ಳಲಾಗಿದೆ.
– ಕೀರ್ತಿಕುಮಾರ್‌, ಪರಿಸರಾಧಿಕಾರಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ,

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.