ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ವರ್ಗಾವಣೆ ; ಹಾಲಿ-ಮಾಜಿ ಉಸ್ತುವಾರಿ ಸಚಿವರ ಟ್ವೀಟ್ ಸಮರ !
Team Udayavani, Jul 30, 2020, 9:37 AM IST
ಮಂಗಳೂರು: ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರ ವರ್ಗಾವಣೆ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಮಾಜಿ ಸಚಿವ ಯು.ಟಿ.ಖಾದರ್ ಟ್ವೀಟ್ ಮೂಲಕ ವಾಕ್ಸಮರ ನಡೆಸಿದ್ದಾರೆ. ಖಾದರ್ ಆರೋಪಕ್ಕೆ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು ನೀಡಿದ್ದು, ಯಾವುದೇ ಆರೋಪಿ ಯನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ ಎಂದಿದ್ದಾರೆ.
“ಕಾನೂನು ಕೈಗೆತ್ತಿಕೊಂಡರೆ, ನೈತಿಕ ಪೊಲೀಸ್ಗಿರಿ ಮಾಡಿದರೆ ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಕ್ಕೆ ದುಷ್ಕರ್ಮಿಗಳು ದ.ಕ. ಡಿಸಿ ಸಿಂಧೂ ಬಿ.ರೂಪೇಶ್ ಅವರಿಗೆ ಕೊಲೆ ಬೆದರಿಕೆ ಹಾಕಿದರು. ಸರಕಾರ ಕೊಲೆ ಬೆದರಿಕೆ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗಳಿಗೆ ಶಿಕ್ಷೆ ನೀಡಿದೆ’ ಎಂದು ಖಾದರ್ ಅವರು ಟ್ವೀಟ್ ಮೂಲಕ ಆರೋಪಿಸಿದ್ದರು.
ಇದಕ್ಕೆ ಬುಧವಾರ ಬೆಳಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಕೋಟ ಅವರು, “ಆಡಳಿತಾತ್ಮಕ ದೃಷ್ಟಿಯಿಂದ ಮಾಡಿದ ವರ್ಗಾವಣೆ ಯನ್ನು ಖಾದರ್ ಅವರು ರಾಜಕೀಯಗೊಳಿಸಿದ್ದು, ದುರದೃಷ್ಟಕರ. ಖಾದರ್ ತಮ್ಮ ಮಾತನ್ನು ಹಿಂಪಡೆಯಬೇಕು. ಅವರಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾದವರವರ ಮೇಲೆ
ಗೃಹ ಇಲಾಖೆ ಸ್ವಯಂ ಪ್ರೇರಿತವಾದ ಪ್ರಕರಣ ದಾಖಲಿಸಿದೆ. ಜಿಲ್ಲೆಯಲ್ಲಿ ಖಾದರ್ರವರ ಕಾಲದಲ್ಲಿ ಪೊಲೀಸರಿಗೆ ಬೆದರಿಕೆ, ಹಲ್ಲೆ ಮಾಡುವಂತಹ, ಗೂಂಡಾಗಿರಿ ನಡೆಯುತ್ತಿತ್ತು. ಇವತ್ತು ಖಾದರ್ ಕಾಲ ಅಲ್ಲ ಎನ್ನುವುದನ್ನು ಅವರು ನೆನಪಿಸಿಕೊಳ್ಳಬೇಕು’ ಎಂದು ಕೋಟ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ