ದ.ಕ., ಉಡುಪಿ ಜಿಲ್ಲೆಯ ವಿವಿಧೆಡೆ ಸಿಡಿಲು ಸಹಿತ ಉತ್ತಮ ಮಳೆ


Team Udayavani, May 3, 2020, 9:05 AM IST

ದ.ಕ., ಉಡುಪಿ ಜಿಲ್ಲೆಯ ವಿವಿಧೆಡೆ ಸಿಡಿಲು ಸಹಿತ ಉತ್ತಮ ಮಳೆ

ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಶನಿವಾರ ಸಂಜೆ ಗುಡುಗು ಉತ್ತಮ ಮಳೆ ಸುರಿಯಿತು.

ಮಂಗಳೂರು/ಬೆಳ್ತಂಗಡಿ/ಮೂಡುಬಿದಿರೆ/ಉಡುಪಿ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಶನಿವಾರ ಸಂಜೆ ಮಳೆ ಸುರಿದ ಬಗ್ಗೆ ವರದಿಯಾಗಿದೆ. ಸುಳ್ಯ, ಬಂಟ್ವಾಳ, ಪುತ್ತೂರು, ಉಪ್ಪಿನಂಗಡಿ, ಮೂಲ್ಕಿ, ಬಜಪೆ, ಪಣಂಬೂರಿನ ಸುತ್ತಮುತ್ತಲಿನ ಭಾಗಗಳಲ್ಲಿ ಗುಡುಗು, ಸಿಡಿಲು, ಮಿಂಚು ಸಹಿತ ಉತ್ತಮ ಮಳೆಯಾಗಿದೆ. ಮಂಗಳೂರು ನಗರದಲ್ಲಿ ರಾತ್ರಿ ವೇಳೆ ಗುಡುಗು, ಮಿಂಚು ಸಹಿತ ಸಾಧಾರಣ ಮಳೆ ಸುರಿದಿದೆ.

ಮೂಡುಬಿದಿರೆ ಪರಿಸರದಲ್ಲಿ ಶನಿವಾರ ರಾತ್ರಿ 7.15ರ ಸುಮಾರಿಗೆ ಗುಡುಗು, ಮಿಂಚು ಸಹಿತ ಸುಮಾರು ಅರ್ಧ ತಾಸು ಮಳೆ ಸುರಿಯಿತು. ಬಳಿಕ ತುಂತುರು ಮಳೆಯೊಂದಿಗೆ ಗುಡುಗು, ಮಿಂಚು ಮುಂದುವರಿದಿದ್ದು, ಸುಮಾರು ಒಂದೂವರೆ ತಾಸು ವಿದ್ಯುತ್‌ ಸಂಪರ್ಕ ಕಡಿತಗೊಂಡಿತ್ತು. ಬೆಳ್ತಂಗಡಿ: ಸತತ ಉತ್ತಮ ಮಳೆ ಬೆಳ್ತಂಗಡಿ ತಾಲೂಕಿನಾದ್ಯಂತ ಸಂಜೆ ವೇಳೆ ಒಂದು ಗಂಟೆಗೂ ಅಧಿಕ ಕಾಲ ಮಳೆಯಾಗಿದೆ. ತಾಲೂಕಿನೆ ಲ್ಲೆಡೆ ಮೂರು ದಿನಗಳಿಂದ ನಿರಂತರ ಸಂಜೆ ಮಳೆಯಾಗುತ್ತಿದ್ದು, ಬೇಸಗೆಯಿಂದ ತತ್ತರಿಸಿ ಹೋಗಿದ್ದ ಕೃಷಿಕರು ಕೊಂಚ ನಿರಾಳರಾಗಿದ್ದಾರೆ. ಹತ್ತು ದಿನಗಳ ಅವಧಿಯಲ್ಲಿ ಐದಾರು ಬಾರಿ ಗರಿಷ್ಠ ಮಳೆಯಾಗಿದ್ದು, ಶನಿವಾರ ಸಂಜೆ ಬೆಳ್ತಂಗಡಿ, ಉಜಿರೆ, ಧರ್ಮಸ್ಥಳ, ಕರಾಯ, ಕಲ್ಲೇರಿ, ಪಿಂಡಿವನ, ಗೇರುಕಟ್ಟೆ, ಮುಂಡಾಜೆ, ನಾವೂರು, ಕಾನರ್ಪ, ಕನ್ಯಾಡಿ, ನಾರಾವಿ, ಶಿರ್ಲಾಲು, ಚಾರ್ಮಾಡಿ, ದಿಡುಪೆ ಅಣಿಯೂರು, ಕಲ್ಮಂಜ, ಕಡಿರುದ್ಯಾವರ, ಗುರಿಪ್ಪಳ್ಳ, ಚಿಬಿದ್ರೆ, ಕೊಕ್ಕಡ, ಶಿಶಿಲ, ಶಿಬಾಜೆ, ಅರಸಿನಮಕ್ಕಿ ಸಹಿತ ವೇಣೂರು ಭಾಗದಲ್ಲಿ ಅಳದಂಗಡಿ, ಸೂಳಬೆಟ್ಟು, ನಾಲ್ಕೂರು ಫಂಡಿಜೆ, ಪಿಲ್ಯ, ಸುಲ್ಕೇರಿಯಲ್ಲಿ ಒಂದು ತಾಸಿಗೂ ಅಧಿಕ ಸಮಯ ಭಾರೀ ಮಳೆಯಾಗಿದೆ.

ಉಡುಪಿ: ವಿವಿಧೆಡೆ ಗುಡುಗು ಮಿಂಚಿನ ಅಬ್ಬರ
ಉಡುಪಿ ಜಿಲ್ಲೆಯ ವಿವಿಧೆಡೆ ಶನಿವಾರ ಸಂಜೆ ವೇಳೆಗೆ ಗುಡುಗು- ಮಿಂಚು ಸಹಿತ ಗಾಳಿ ಮಳೆಯಾಗಿದೆ. ಮಣಿಪಾಲ ಪರಿಸರದಲ್ಲಿ ಮೋಡದ ವಾತಾವರಣವಿದ್ದು , ರಾತ್ರಿ 7 ಗಂಟೆಗೆ ಗುಡುಗು, ಮಿಂಚು ಜೋರಾಗಿತ್ತು. ಜತೆಗೆ ಉತ್ತಮ ಮಳೆ ಸುರಿದಿದೆ. ಉಡುಪಿ ನಗರ ಸುತ್ತಮುತ್ತ ಕೂಡ ಮಧ್ಯಾಹ್ನದಿಂದಲೇ ಮೋಡದ ವಾತಾವರಣವಿತ್ತು. ಸಂಜೆ ವೇಳೆಗೆ ದಿಢೀರನೆ ಗಾಳಿ- ಮಿಂಚು ಸಹಿತ ಮಳೆ ಸುರಿಯಿತು. ಗುಡುಗು, ಮಿಂಚು ಆರ್ಭಟ ಜೋರಾಗಿತ್ತು. ಕಾರ್ಕಳ ಪರಿಸರದಲ್ಲಿ ಕೂಡ ಗುಡುಗು, ಮಿಂಚು, ಗಾಳಿ ಸಹಿತ ಮಳೆಯಾಗಿದೆ. ಇನ್ನು ಜಿಲ್ಲೆಯ ಹಲವೆಡೆಗಳಲ್ಲಿ ಸಾಧಾರಣ ಮಳೆ ಸುರಿದಿದೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಪಣಂಬೂರಿನಲ್ಲಿ 35.6 ಡಿ.ಸೆ. ಗರಿಷ್ಠ ತಾಪಮಾನ ಮತ್ತು 27.6 ಡಿ.ಸೆ. ಕನಿಷ್ಠ ಉಷ್ಣಾಂಶ ದಾಖಲಾಗಿತ್ತು. ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಕೈಕೊಟ್ಟ ವಿದ್ಯುತ್‌: ಚೆಕ್‌ಪೋಸ್ಟ್‌ ಸಿಬಂದಿ ಪರದಾಟ
ಬೆಳ್ಮಣ್: ಶನಿವಾರ ಸಂಜೆ ಗಾಳಿ, ಸಿಡಿಲು ಸಹಿತ ಸುರಿದ ಭಾರೀ ಮಳೆಯ ಪರಿಣಾಮ ವಿದ್ಯುತ್‌ ಕೈ ಕೊಟ್ಟಿದ್ದು, ಬೆಳ್ಮಣ್‌, ಸಂಕಲಕರಿಯ, ಸಚ್ಚೇರಿಪೇಟೆಯಲ್ಲಿ ಚೆಕ್‌ಪೋಸ್ಟ್‌ನ ಸಿಬಂದಿ ಪರದಾಡುವಂತಾಗಿದೆ. ಇದರಿಂದ ಕೋವಿಡ್ ವಾರಿಯರ್ಸ್‌ಗೆ ಒಂದಿಷ್ಟು ಹಿನ್ನಡೆ ಉಂಟಾಗಿದೆ. ಸ್ಥಳೀಯರು ಚಾರ್ಜ್‌ಲೈಟ್‌ಗಳನ್ನು ನೀಡಿದ್ದರಿಂದ ರಾತ್ರಿ ಬೆಳಗಾಗುವಂತಾಗಿದೆ.

ಬದ್ಧತೆ ಮೆರೆದ ಸಿಬಂದಿ
ಜೋರು ಗಾಳಿ, ಸಿಡಿಲು, ಮಳೆಯ ನಡುವೆಯೂ ಎಲ್ಲ ಚೆಕ್‌ಪೋಸ್ಟ್‌ಗಳ ಸಿಬಂದಿ ಪ್ರತಿಯೊಂದು ವಾಹನವನ್ನು ಕೂಲಂಕಷವಾಗಿ ತನಿಖೆ ಮಾಡಿ ಬದ್ಧತೆ ಮರೆದಿದ್ದಾರೆ. ಆದ್ದರಿಂದ ಈ ಚೆಕ್‌ಪೋಸ್ಟ್‌ ಅನಿವಾರ್ಯ ಇನ್ನೂ ಇದ್ದು ಮುಂದಿನ ದಿನಗಳಲ್ಲಿ ಇನ್ನೂ ಮಳೆ, ಗಾಳಿ ಜೋರಾಗಿ ಬರುವ ಸಾಧ್ಯತೆಯಿದೆ, ಹಾಗಾಗಿ ಚೆಕ್‌ಪೋಸ್ಟ್‌ಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.