ಉಳ್ಳಾಲ ಸೇತುವೆ: ರಕ್ಷಣಾ ಬೇಲಿಗೆ ಟೆಂಡರ್‌

58 ಲಕ್ಷ ರೂ. ಮೊತ್ತ ; ಶೀಘ್ರ ಕಾಮಗಾರಿ ಆರಂಭಕ್ಕೆ ಸಿದ್ಧತೆ

Team Udayavani, May 6, 2020, 5:50 AM IST

ಉಳ್ಳಾಲ ಸೇತುವೆ: ರಕ್ಷಣಾ ಬೇಲಿಗೆ ಟೆಂಡರ್‌

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ಸೇತುವೆಯ ಮೇಲೆ ನಡೆಯುತ್ತಿರುವ ಅನಾಹುತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೇತುವೆಯ ಇಕ್ಕೆಲಗಳಲ್ಲಿ ರಕ್ಷಣಾ ಬೇಲಿ ಅಳವಡಿಸುವ ಕಾಮಗಾರಿಗೆ ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ವತಿಯಿಂದ ಟೆಂಡರ್‌ ಕರೆಯಲಾಗಿದೆ. ಹಾಗಾಗಿ ಶೀಘ್ರದಲ್ಲಿಯೇ ಕಾಮಗಾರಿ ಆರಂಭವಾಗುವ ನಿರೀಕ್ಷೆ ಇದೆ.

ಕಳೆದ ಎ. 15ರಂದು ರಾತ್ರಿ ಕೊಲ್ಯದ ವಿಕ್ರಂ ಗಟ್ಟಿ ಅವರು ಈ ಸೇತುವೆಯ ಬಳಿ ತನ್ನ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದು, ಎ. 17ರಂದು ಅವರ ಮೃತದೇಹ ಉಳ್ಳಾಲ ಹೊಯಿಗೆಯಲ್ಲಿ ನೇತ್ರಾವತಿ ನದಿಯ ತೀರದಲ್ಲಿ ಪತ್ತೆಯಾಗಿತ್ತು. ವಿಕ್ರಂ ಗಟ್ಟಿ ಉಳ್ಳಾಲ ಸೇತುವೆಯ ಮೇಲಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಈ ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡುವವರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೇತುವೆಯ ಎರಡೂ ಬದಿ ರಕ್ಷಣಾ ಬೇಲಿ ನಿರ್ಮಾಣ ಮಾಡಬೇಕೆಂಬ ಬೇಡಿಕೆ 2019ರ ಆಗಸ್ಟ್‌ನಿಂದಲೇ ಬಲವಾಗಿ ಕೇಳಿ ಬಂದಿತ್ತು.

ಭರವಸೆ ಈಡೇರಿಕೆ
ವಿಕ್ರಂ ಗಟ್ಟಿ ಈ ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾದ ಬಗ್ಗೆ ಎ. 16ರಂದು ಸುದ್ದಿಯಾಗಿದ್ದು, ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ಡಿ. ವೇದವ್ಯಾಸ ಕಾಮತ್‌ ಅವರು 10 ದಿನಗಳಲ್ಲಿ ಸೇತುವೆಯ ಇಕ್ಕೆಲಗಳಲ್ಲಿ ಮುಡಾ ವತಿಯಿಂದ ರಕ್ಷಣಾ ಬೇಲಿ ನಿರ್ಮಾಣ ಹಾಗೂ ಸಿಸಿ ಕೆಮರಾ ಅಳವಡಿಸುವ ಕುರಿತಂತೆ ಟೆಂಡರ್‌ ಕರೆಯುವುದಾಗಿ ಭರವಸೆ ನೀಡಿದ್ದರು. ಇದೀಗ ಟೆಂಡರ್‌ ಮುಡಾ ಕರೆಯುವ ಮೂಲಕ ಶಾಸಕರು ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ.

ಕಾಮಗಾರಿ ಶೀಘ್ರ
ಸೇತುವೆಯ ಇಕ್ಕೆಲ ಬೇಲಿ ನಿರ್ಮಾಣ ಮಾಡುವ ಬಗ್ಗೆ 58 ಲಕ್ಷ ರೂ. ಮೊತ್ತದ ಟೆಂಡರ್‌ ಆಹ್ವಾನಿಸಲಾಗಿದ್ದು, ಕನಿಷ್ಠ ಮೊತ್ತದ ಬಿಡ್‌ದಾರರಿಗೆ ಟೆಂಡರ್‌ ವಹಿಸಿ ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಶಾಸಕರು ತಿಳಿಸಿದ್ದಾರೆ.

ಸಿ.ಸಿ. ಕೆಮರಾ ಅಳವಡಿಕೆಗೂ ಟೆಂಡರ್‌
ಸೇತುವೆಯ ಎರಡೂ ದಿಕ್ಕುಗಳಲ್ಲಿ ಸಿ.ಸಿ. ಕೆಮರಾ ಅಳವಡಿಸುವ ಕಾಮಗಾರಿಗೆ 5 ಲಕ್ಷ ರೂ. ಮೊತ್ತದ ಟೆಂಡರ್‌ ಆಹ್ವಾನಿಸಲಾಗುವುದು. ಸಿ.ಸಿ. ಕೆಮರಾದ ಮಾನಿಟರಿಂಗ್‌ ಪೊಲೀಸರ ಕೈಯಲ್ಲಿ ಇರುವುದರಿಂದ ಇದಕ್ಕೆ ಪೊಲೀಸ್‌ ಇಲಾಖೆಯ ಪೂರ್ವಾನುಮತಿ ಬೇಕಾಗುತ್ತದೆ. ಅನುಮತಿಗಾಗಿ ಪೊಲೀಸ್‌ ಇಲಾಖೆಗೆ ಬರೆಯಲಾಗಿದ್ದು, ಒಂದೆರಡು ದಿನಗಳಲ್ಲಿ ಅನುಮತಿ ಲಭಿಸುವ ನಿರೀಕ್ಷೆ ಇದೆ. ಪೊಲೀಸ್‌ ಇಲಾಖೆಯ ಅನುಮತಿ ಲಭಿಸಿದ ಕೂಡಲೇ ಕಾಮಗಾರಿಗೆ ಟೆಂಡರ್‌ ಕರೆಯಲಾಗುವುದು ಎಂದು ಶಾಸಕ ವೇದವ್ಯಾಸ ಕಾಮತ್‌ ಅವರು ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಇಂದು ಟೆಂಡರ್‌ ಓಪನ್‌
58 ಲಕ್ಷ ರೂ. ಮೊತ್ತದ ಟೆಂಡರ್‌ ಕರೆಯಲಾಗಿದ್ದು, ಮೇ 6ರಂದು ಟೆಂಡರ್‌ ಓಪನ್‌ ಮಾಡಿ ಅತ್ಯಂತ ಕಡಿಮೆ ಮೊತ್ತದ ಬಿಡ್‌ ಸಲ್ಲಿಸಿದವರಿಗೆ ಟೆಂಡರ್‌ ವಹಿಸಿಕೊಡಲಾಗುವುದು. ಬಳಿಕ ಒಪ್ಪಂದವನ್ನು ಮಾಡಿಕೊಂಡು ಆದಷ್ಟು ಶೀಘ್ರದಲ್ಲಿ ಕಾಮಗಾರಿ ಆರಂಭಿಸಲಾಗುವುದು.
– ಡಿ. ವೇದವ್ಯಾಸ ಕಾಮತ್‌,
ಶಾಸಕರು, ಮಂಗಳೂರು ದಕ್ಷಿಣ

ಟಾಪ್ ನ್ಯೂಸ್

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.