Ullal; ಯುವಮೋರ್ಚ ಮಂಡಲ ಅಧ್ಯಕ್ಷನ ಎಳೆದಾಡಿದ ಠಾಣಾಧಿಕಾರಿ: ಕಾರ್ಯಕರ್ತರ ಆಕ್ರೋಶ

ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಘಟನೆ

Team Udayavani, Jun 20, 2024, 5:57 PM IST

1-ml

ಉಳ್ಳಾಲ: ರಾಜ್ಯ ಕಾಂಗ್ರೆಸ್ ಸರಕಾರ ವಿರುದ್ದ ಮಂಗಳೂರು ಮಂಡಲ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ಪೊಲೀಸ್ ಹಾಗೂ ಕಾರ್ಯಕರ್ತರ ನಡುವಿನ ಮಾತಿನಚಕಮಕಿಯಿಂದ ಕೊನೆಗೊಂಡಿದೆ.

ರಾಷ್ಟ್ರೀಯ ಹೆದ್ದಾರಿ ತಡೆಗೆ ಮುಂದಾದ ಬಿಜೆಪಿ ಮಂಗಳೂರು ಮಂಡಲದ ಯುವಮೋರ್ಚ ಅಧ್ಯಕ್ಷ ಮುರಳಿ ಕೊಣಾಜೆ ಅವರನ್ನು ಉಳ್ಳಾಲ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ ಹಿಡಿದು ಎಳೆದಾಡಿದ ಪರಿಣಾಮ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಕೆಲ ಕಾಲ ಮಾತಿನ ಚಕಮಕಿ ನಡೆದಿದೆ.

ರಾಜ್ಯ ಕಾಂಗ್ರೆಸ್ ಸರಕಾರದ ಪೆಟ್ರೋಲ್ ,ಡೀಸೆಲ್ ತೈಲ ಬೆಲೆ ಏರಿಕೆ ನೀತಿಯ ವಿರುದ್ಧ ಬಿಜೆಪಿ ಮಂಗಳೂರು ಮಂಡಲದ ವತಿಯಿಂದ ತೊಕ್ಕೊಟ್ಟು ಜಂಕ್ಷನ್ ಫ್ಲೈಓವರ್ ನಡಿ ಗುರುವಾರ ರಸ್ತೆ ತಡೆ ನಡೆಸಲಾಗಿತ್ತು. ಸಭೆಯಲ್ಲಿ ಬಿಜೆಪಿ ಮುಖಂಡರುಗಳಾದ ಮಾಜಿ ಶಾಸಕ ಜಯರಾಮ ಶೆಟ್ಟಿ, ಸಂತೋಷ್ ರೈ ಬೋಳಿಯಾರ್,ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ದಿನೇಶ್ ಅಮ್ಟೂರು, ಮಹೇಶ್ ಜೋಗಿ , ಮಂಡಲ ಪ್ರಭಾರ ಅಧ್ಯಕ್ಷ ಹೇಮಂತ್ ಶೆಟ್ಟಿ ದೇರಳಕಟ್ಟೆ, ಧನಲಕ್ಷ್ಮೀ ಗಟ್ಟಿ ಸೇರಿದಂತೆ ಮಂಗಳೂರು ಮಂಡಲದ ಮುಖಂಡರು ರಾಜ್ಯ ಸರಕಾರದ ಬೆಲೆಯೇರಿಕೆ ನೀತಿಯ ವಿರುದ್ಧ ಖಂಡನಾ ಭಾಷಣ ಮಾಡಿದ್ದರು.

ಬಳಿಕ ಸೇರಿದ್ದ ಬಿಜೆಪಿ ಕಾರ್ಯಕರ್ತರು ಸಾಂಕೇತಿಕವಾಗಿ ರಾಷ್ಟ್ರೀಯ ಹೆದ್ದಾರಿ ತಡೆಯಲು ಮುಂದಾದಾಗ ಸ್ಥಳದಲ್ಲಿ ಬಂದೋಬಸ್ತ್ ನಲ್ಲಿದ್ದ ಇನ್ಸ್ ಪೆಕ್ಟರ್ ಬಾಲಕೃಷ್ಣ ಅವರು ತಡೆಹಿಡಿದಿದ್ದಾರೆ. ಮೇಲಾಧಿಕಾರಿಗಳ ಆದೇಶ ಇದ್ದು, ಹೆದ್ದಾರಿ ತಡೆದಲ್ಲಿ ಕಾನೂನು ಕ್ರಮಕೈಗೊಳ್ಳಲು ಆದೇಶವಿರುವುದಾಗಿ ಹೇಳಿದ್ದಾರೆ. ಈ ನಡುವೆ ಮಂಡಲದ ಬಿಜೆಪಿ ಯುವ ಮೋರ್ಚದ ಅಧ್ಯಕ್ಷ ಮುರಳಿ ಕೊಣಾಜೆ ರಾ.ಹೆ ತಡೆಯಲು ರಸ್ತೆಗೆ ಬಂದ ಸಂದರ್ಭದಲ್ಲೇ ಶರ್ಟ್ ನ ಕೋಲಾರ್ ಪಟ್ಟಿಯನ್ನು ಹಿಡಿದ ಠಾಣಾಧಿಕಾರಿ ಬಾಲಕೃಷ್ಣ ಹೆಚ್.ಎನ್ ಹೆದ್ದಾರಿಯಿಂದ ಬದಿಗೆ ಕರೆತಂದರು.

ಇದು ಯುವಮೋರ್ಚಾ ಕಾರ್ಯಕರ್ತರ ಹಾಗೂ ಠಾಣಾಧಿಕಾರಿ ವಿರುದ್ಧ ವಾಗ್ವಾದಕ್ಕೆ ಕಾರಣವಾಯಿತು. ಮುರಳೀ ಠಾಣಾಧಿಕಾರಿ ಅವರನ್ನು ಪ್ರಶ್ನಿಸುತ್ತಿದ್ದಂತೆ ಕಾರ್ಯಕರ್ತರ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.

ಮಧ್ಯ ಪ್ರವೇಶಿಸಿದ ಮಂಗಳೂರು ದಕ್ಷಿಣ ಉಪವಿಭಾಗದ ಪ್ರಬಾರ ಎಸಿಪಿ ರವೀಶ್ ನಾಯ್ಕ್ ಅವರು ಬಿಜೆಪಿ ಪ್ರಮುಖರಲ್ಲಿ ಮಾತುಕತೆ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಯುವಮೋರ್ಚಾ ಮುಖಂಡನ ಗತಿ ಹೀಗಾದರೆ , ಇನ್ನು ಕಾರ್ಯಕರ್ತರ ಪಾಡೇನು ಎಂಬುದನ್ನು ಕಾರ್ಯಕರ್ತರು ಮುಖಂಡರನ್ನು ಪ್ರಶ್ನಿಸಿದ್ದಾರೆ.

Ad

ಟಾಪ್ ನ್ಯೂಸ್

Mumbai: ಮನೆಗೆ ಊಟಕ್ಕೆ ಬರುವುದಾಗಿ ಹೇಳಿ ಸೇತುವೆಯಿಂದ ಜಿಗಿದು ವೈದ್ಯ ಆತ್ಮಹತ್ಯೆಗೆ ಶರಣು!

Mumbai: ಮನೆಗೆ ಊಟಕ್ಕೆ ಬರುವುದಾಗಿ ಹೇಳಿ ಸೇತುವೆಯಿಂದ ಜಿಗಿದು ವೈದ್ಯ ಆತ್ಮಹತ್ಯೆಗೆ ಶರಣು!

Rajasthan: ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ; ಪೈಲಟ್ ಸೇರಿ ಇಬ್ಬರು ಸಾವು

Rajasthan: ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ; ಪೈಲಟ್ ಸೇರಿ ಇಬ್ಬರು ಸಾವು

ಚಿಕ್ಕಮ್ಮನ ಜತೆ ಸಂಬಂಧ: 24ರ ಯುವಕನನ್ನು ಅಪಹರಣ ಮಾಡಿ ಹಿಗ್ಗಾಮುಗ್ಗಾ ಥಳಿಸಿದ ಸಂಬಂಧಿಕರು

ಚಿಕ್ಕಮ್ಮನ ಜತೆ ಸಂಬಂಧ: 24ರ ಯುವಕನನ್ನು ಅಪಹರಣ ಮಾಡಿ ಹಿಗ್ಗಾಮುಗ್ಗಾ ಥಳಿಸಿದ ಸಂಬಂಧಿಕರು

11-belagavi

Belagavi: ಒಂದೇ ಕುಟುಂಬದ ಮೂವರು ಆತ್ಮಹ*ತ್ಯೆ: ಓರ್ವ ಮಹಿಳೆಯ ಸ್ಥಿತಿ ಚಿಂತಾಜನಕ

Gujarat Bridge Collapse: ಸೇತುವೆ ಕುಸಿದು ನದಿಗೆ ಉರುಳಿದ ವಾಹನಗಳು– ಕನಿಷ್ಠ 9 ಮಂದಿ ಸಾವು

Gujarat Bridge Collapse: ಸೇತುವೆ ಕುಸಿದು ನದಿಗೆ ಉರುಳಿದ ವಾಹನಗಳು– ಕನಿಷ್ಠ 9 ಮಂದಿ ಸಾವು

ʼManjummel Boysʼ ಹಣಕಾಸು ವಿವಾದ: ಖ್ಯಾತ ನಟ ಸೌಬಿನ್ ಶಾಹಿರ್ ಸೇರಿ ಮೂವರ ಬಂಧನ – ಬಿಡುಗಡೆ

ʼManjummel Boysʼ ಹಣಕಾಸು ವಿವಾದ: ಖ್ಯಾತ ನಟ ಸೌಬಿನ್ ಶಾಹಿರ್ ಸೇರಿ ಮೂವರ ಬಂಧನ – ಬಿಡುಗಡೆ

8-ckm

ವಿದ್ಯಾರ್ಥಿನಿಯರ ಆತ್ಮಹ*ತ್ಯೆ ಪ್ರಕರಣ; ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸಲು ಆದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Mangaluru: ನಗರದಲ್ಲಿ ಆಟೋ ನಿಲ್ದಾಣಗಳ ಕೊರತೆ

3

Mangaluru: ಹೆದ್ದಾರಿಯನ್ನು ಕಾಡುತ್ತಿದೆ ಕೆತ್ತಿಕಲ್‌ ಆತಂಕ!

Mangaluru ಹೃದಯಾಘಾತ ಭಯ: ಮನೋವೈದ್ಯರ ಅಭಯ

Mangaluru ಹೃದಯಾಘಾತ ಭಯ: ಮನೋವೈದ್ಯರ ಅಭಯ

ಮಂಗಳೂರಿಗೆ ಬರಲಿದೆ ಟಿ-55 ಯುದ್ಧ ಟ್ಯಾಂಕ್‌

ಮಂಗಳೂರಿಗೆ ಬರಲಿದೆ ಟಿ-55 ಯುದ್ಧ ಟ್ಯಾಂಕ್‌

Mangaluru; ಮೀನು ಅಲಭ್ಯತೆ; ಮೊಟ್ಟೆ ದರ ಏರಿಕೆ!

Mangaluru; ಮೀನು ಅಲಭ್ಯತೆ; ಮೊಟ್ಟೆ ದರ ಏರಿಕೆ!

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

14

Malpe ಬೀಚ್‌ ರಸ್ತೆಯಲ್ಲಿ 2 ತಿಂಗಳುಗಳಿಂದ ಕತ್ತಲ ಹಾದಿ!

Crime: 8 ಕೋಟಿ ಮೌಲ್ಯದ ಚಿನ್ನದ ಗಟ್ಟಿ ದೋಚಿದ್ದ ಅಕ್ಕಸಾಲಿಗ ಸೆರೆ

Crime: 8 ಕೋಟಿ ಮೌಲ್ಯದ ಚಿನ್ನದ ಗಟ್ಟಿ ದೋಚಿದ್ದ ಅಕ್ಕಸಾಲಿಗ ಸೆರೆ

13-kollegala

Kollegala: ಬೈಕ್- ಕಾರು ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾ*ವು

12-gundlupete

Gundlupete: ಪಾಠ ಕೇಳುತಿದ್ದ ವೇಳೆ ಹೃದಯಾಘಾತವಾಗಿ ವಿದ್ಯಾರ್ಥಿ ಸಾ*ವು

Mumbai: ಮನೆಗೆ ಊಟಕ್ಕೆ ಬರುವುದಾಗಿ ಹೇಳಿ ಸೇತುವೆಯಿಂದ ಜಿಗಿದು ವೈದ್ಯ ಆತ್ಮಹತ್ಯೆಗೆ ಶರಣು!

Mumbai: ಮನೆಗೆ ಊಟಕ್ಕೆ ಬರುವುದಾಗಿ ಹೇಳಿ ಸೇತುವೆಯಿಂದ ಜಿಗಿದು ವೈದ್ಯ ಆತ್ಮಹತ್ಯೆಗೆ ಶರಣು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.