ಹರೇಕಳ: ಆಕಸ್ಮಿಕ ಬೆಂಕಿ ಅವಘಡ, ಸುಟ್ಟು ಕರಕಲಾದ ಮನೆ
Team Udayavani, Apr 2, 2023, 11:27 PM IST
ಉಳ್ಳಾಲ: ಹರೇಕಳ ಗ್ರಾಮದ ದೇರಿಕಟ್ಟೆ ನಿವಾಸಿ ನೇಬಿಸ ಅವರ ಮನೆಯಲ್ಲಿ ರವಿವಾರ ರಾತ್ರಿ ಅಡುಗೆ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಮನೆ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ರಂಝಾನ್ ಉಪವಾಸದ ಪ್ರಯುಕ್ತ ಇಫ್ತಾರ್’ನಲ್ಲಿ ನಿರತವಾಗಿದ್ದ ಸಂದರ್ಭದಲ್ಲಿ ಘಟನೆ ಸಂಭವಿಸಿದ್ದು, ಬೆಂಕಿ ಹಬ್ಬುತ್ತಿದ್ದಂತೆ ಮನೆಯವರ ಸಮಯ ಪ್ರಜ್ಞೆಯಿಂದ ಯಾರಿಗೂ ಪ್ರಾಣ ಹಾನಿಯಾಗಿಲ್ಲ. ಮನೆಯು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಮನೆಯ ಪೀಠೋಪಕರಣಗಳು, ಪಾತ್ರೆಗಳು, ವಿದ್ಯುತ್ ಉಪಕರಣಗಳು, ಗೃಹ ಉಪಯೋಗಿ ಪರಿಕರಗಳು, ಮಕ್ಕಳ ಶಾಲಾ ಪಠ್ಯ ಪುಸ್ತಕ ಇನ್ನಿತರ ವಸ್ತುಗಳು ಸಂಪೂರ್ಣ ಭಸ್ಮಗೊಂಡಿದೆ.
ಘಟನಾ ಸ್ಥಳದ ಮಾಹಿತಿ ಪಡೆದ ಶಾಸಕ ಯು ಟಿ ಖಾದರ್ ಭೇಟಿ ನೀಡಿದ್ದು, ಅದೇ ರೀತಿ ಸ್ಥಳೀಯ ಪಂಚಾಯತ್ ಸದಸ್ಯರಾದ ರೆಹನ ನಝೀರ್, ಅನೀಸ್, ಹನೀಫ್, ರೆಹನ ಮುಹಮ್ಮದ್, ಅಬ್ದುಲ್ ಬಶೀರ್ ಮತ್ತಿತರು ಸ್ಥಳಕ್ಕೆ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಭೇಟಿ ನೀಡಿ , ಸ್ಥಳೀಯರೊಂದಿಗೆ ಸೇರಿಕೊಂಡು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದೆ.
ಇದನ್ನೂ ಓದಿ: ಕ್ರೀಡಾಂಗಣದಲ್ಲೇ ಆರ್ ಸಿಬಿ-ಮುಂಬೈ ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯ