ಉಳ್ಳಾಲ: ಮಹಿಳೆಯ ಸರ ಎಳೆದು ಪರಾರಿ; ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು
Team Udayavani, Mar 2, 2021, 10:15 AM IST
ಉಳ್ಳಾಲ: ಮನೆ ಸಮೀಪದ ತೋಟದಿಂದ ಸೋಗೆ ತರುತ್ತಿದ್ದ ಮಹಿಳೆಯ ಸರ ಎಳೆದು ಪರಾರಿಯಾದ ಕಳ್ಳನನ್ನು ಕೊಣಾಜೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಪಾನೇಲ ನಿವಾಸಿ ಇರ್ಷಾದ್ (23) ಬಂಧಿತ ಆರೋಪಿಯಾಗಿದ್ದು. ಬೋಳಿಯಾರ್ ನಿವಾಸಿ ಶಾಂಭವಿ ಅವರು ತಮ್ಮಮನೆ ಸಮೀಪದ ತೋಟದಿಂದ ಸೋಗೆ ತರುವಾಗ ಹಿಂದಿನಿಂದ ಬಂದಿದ್ದ ಆರೋಪಿ ಮಹಿಳೆಯ ಸರ ಎಳೆದು ಪರಾರಿಯಾಗಿದ್ದಾನೆ. ಖಚಿತ ಮಾಹಿತಿ ಮೇರೆಗೆ ಆರೋಪಿಯನ್ಬು ವಶಕ್ಕೆ ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ: ಮಂಜನಾಡಿ: ವಿಷ್ಣುಮೂರ್ತಿ ಜನಾರ್ಧನ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿದ್ದ ನಗದು ದೋಚಿದ ಕಳ್ಳರು
ಅತ್ಯಾಚಾರ ಯತ್ನ ಪ್ರಕರಣದ ಆರೋಪಿ: ಸರ ಎಳೆದ ಪ್ರಕರಣದಲ್ಲಿ ವಶಕ್ಕೆ ತೆಗೆದುಕೊಂಡಿರುವ ಇರ್ಷಾದ್ ಜನವರಿ ತಿಂಗಳಲ್ಲಿ ಪೆಟ್ರೋಲ್ ಪಂಪ್ ನಲ್ಲಿ ಕೆಲಸಕ್ಜಿದ್ದ ಯುವತಿಯ ಅತ್ಯಾಚಾರ ಯತ್ನಿಸಿ ಬಂಧಿತನಾಗಿದ್ದ. ಸಂಜೆ ಮನೆಗೆ ತೆರಳುತ್ತಿದ್ದ ಯುವತಿಯ ಮಾನಭಂಗಕ್ಕೆ ಯತ್ನಿಸಿ ಜೈಲು ಸೇರಿದ್ದ ಈತ ವಾರದ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ.
ಇದನ್ನೂ ಓದಿ: ಎರಡನೇ ಹಂತದ ಕೋವಿಡ್ ಲಸಿಕೆ : ಕರ್ನಾಟಕದಲ್ಲಿ ಮೊದಲ ದಿನ 2,643 ಮಂದಿಗೆ ಚುಚ್ಚುಮದ್ದು