ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಕಾರು ಅಪಘಾತವಾಗಿ ಮದುವೆ ನಿಶ್ಚಯವಾಗಿದ್ದ ಯುವಕ ಸಾವು
Team Udayavani, Jul 11, 2020, 3:26 PM IST
ಉಳ್ಳಾಲ: ಇಲ್ಲಿನ ನೇತ್ರಾವತಿ ನದಿ ಸೇತುವೆಯ ಮೇಲೆ ಸ್ಕೂಟರ್ ಸವಾರನೊಬ್ಬನಿಗೆ ಕಾರು ಢಿಕ್ಕಿ ಹೊಡೆದು, ರಸ್ತೆಗುರುಳಿದವನ ಮೇಲೆ ಲಾರಿ ಹರಿದ ಕಾರಣ ಸ್ಕೂಟರ್ ಸವಾರ ಸಾವನ್ನಪ್ಪಿದ ಶನಿವಾರ ಮಧ್ಯಾಹ್ನ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಉಳ್ಳಾಲ ನಿವಾಸಿ ಸುಬೈದ್ (28) ಎಂದು ಗುರುತಿಸಲಾಗಿದೆ. ಈತನಿಗೆ ಇದೇ ತಿಂಗಳ 23ರಂದು ಮದುವೆ ನಿಶ್ಚಯಿಸಲಾಗಿತ್ತು. ಸಹಸವಾರ ಚೆಂಬುಗುಡ್ಡೆ ಮಹಮ್ಮದ್ ಶಾಕೀರ್ (18) ಗಂಭೀರವಾಗಿ ಗಾಯಗೊಂಡಿದ್ದಾರೆ.
ಸುಬೈದ್ ತನ್ನ ಸ್ಕೂಟರ್ ನಲ್ಲಿ ತೊಕ್ಕಟ್ಟು ಕಡೆಯಿಂದ ಬರುತ್ತಿದ್ದ. ನೇತ್ರಾವತಿ ಸೇತುವೆ ಮೇಲೆ ಹಿಂದಿನಿಂದ ಬಂದ ಕಾರು ಸುಬೈದ್ ಗೆ ಢಿಕ್ಕಿ ಹೊಡೆದು ಪರಾರಿಯಾಗಿದೆ. ಢಿಕ್ಕಿಯ ರಭಸಕ್ಕೆ ಸುಬೈದ್ ರಸ್ತೆಗೆ ಉರುಳಿ ಬಿದ್ದಿದ್ದು, ಆಗ ಹಿಂದಿನಿಂದ ಬಂದ ಲಾರಿಯೊಂದು ಆತನ ಮೇಲಿನಿಂದ ಹೋಗಿದೆ. ಪರಿಣಾಮ ಸುಬೈದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಕೂಟರ್ ಗೆ ಢಿಕ್ಕಿಯಾಗಿ ಪರಾರಿಯಾಗಿದ್ದ ಕಾರನ್ನು ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ತಡೆದು ವಶಕ್ಕೆ ಪಡೆದಿದ್ದಾರೆ. ಚಾಲಕನ ವಿರುದ್ಧ ಹಿಟ್ ಆಂಡ್ ರನ್ ಕೇಸು ದಾಖಲಿಸಿದ್ದಾರೆ. ಕಾರು ಸವಾರ ಕೃಷ್ಣ ಹಾಗೂ ಲಾರಿ ಸವಾರ ಕಾರ್ಕಳದ ಸುರೇಂದ್ರ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ
ನಾಗುರಿ ಸಂಚಾರಿ ಠಾಣಾ ಪೊಲೀಸರಿಂದ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!