ಉಳ್ಳಾಲ: ಪುತ್ರಿಯ ವಿವಾಹದ ದಿನದಂದೇ ಹೃದಯಾಘಾತದಿಂದ ತಂದೆ ಸಾವು
Team Udayavani, May 16, 2023, 6:40 AM IST
ಉಳ್ಳಾಲ: ಬೋಳಿಯಾರ್ನ ಕುಚುಗುಡ್ಡೆಯಲ್ಲಿ ಮಗಳ ಮದುವೆಯ ದಿನದಂದೇ ತಂದೆ ಹೃದಯಘಾತಗೊಂಡು ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ಸಂಭವಿಸಿದೆ.
ಬೋಳಿಯಾರ್ ಕುಕ್ಕೋಟ್ಟು ಕುಚುಗುಡ್ಡೆಯ ಹಸನಬ್ಬ (60) ಮೃತರು. ಅವರ ಮಗಳಿಗೆ ಕಾಸರಗೋಡುವಿನ ಯುವಕನೊಂದಿಗೆ ಸೋಮವಾರ ಹೊಸಂಗಡಿಯ ಸಭಾಂಗಣವೊಂದರಲ್ಲಿ ಮದುವೆ ನಿಗದಿಯಾಗಿತ್ತು. ಮದುವೆಯ ಸಿದ್ಧತೆಯಲ್ಲಿ ಹಸನಬ್ಬ ಅವರಿಗೆ ಸೋಮವಾರ ಮುಂಜಾನೆ 4 ಗಂಟೆಯ ವೇಳೆಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವ ಪಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗದೆ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ.
ಅವರು ಕುಕ್ಕೋಟ್ಟು ಜುಮ್ಮಾ ಮಸೀದಿಯ ಕೋಶಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದು, ಪತ್ನಿ, ಇಬ್ಬರು ಪುತ್ರರು, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಹಸನಬ್ಬ ಮೃತಪಟ್ಟ ಹಿನ್ನಲೆಯಲ್ಲಿ ಸಭಾಂಗಣದಲ್ಲಿ ಮದುವೆ ಕಾರ್ಯಕ್ರಮ ರದ್ದುಗೊಳಿಸಲಾಗಿತ್ತು ಹಾಗೂ ಎರಡು ಕುಟುಂಬದ ಹಿರಿಯರೊಂದಿಗೆ ಚರ್ಚಿಸಿ ಸಂಜೆಯ ವೇಳೆಗೆ ವರನ ಮನೆಯಲ್ಲಿ ಸರಳವಾಗಿ ನಿಖಾ ನೆರವೇರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ