ಸ್ಮಾರ್ಟ್‌ ಸಿಟಿಯ ಸ್ಮಾರ್ಟ್‌ನೆಸ್‌ ಹೆಚ್ಚಿಸಲು ಭೂಗತ ವಿದ್ಯುತ್‌ ಕೇಬಲ್‌

ಮೆಸ್ಕಾಂ ಮೇಲುಸ್ತುವಾರಿಯಲ್ಲಿ ನಗರದ ವಿವಿಧೆಡೆ ಕಾಮಗಾರಿ ಪ್ರಗತಿಯಲ್ಲಿ

Team Udayavani, Jan 24, 2022, 7:09 PM IST

ಸ್ಮಾರ್ಟ್‌ ಸಿಟಿಯ ಸ್ಮಾರ್ಟ್‌ನೆಸ್‌ ಹೆಚ್ಚಿಸಲು ಭೂಗತ ವಿದ್ಯುತ್‌ ಕೇಬಲ್‌

ಮಹಾನಗರ: ಸ್ಮಾರ್ಟ್‌ ಸಿಟಿಯಾಗಿ ಪರಿವರ್ತನೆಯಾಗುತ್ತಿರುವ ಮಂಗಳೂರು ನಗರದಲ್ಲಿ ಸ್ಮಾರ್ಟ್‌ ರೋಡ್‌ ನಿರ್ಮಾಣಕ್ಕೆ ಪೂರಕವಾಗಿ ಓವರ್‌ ಹೆಡ್‌ ವಿದ್ಯುತ್‌ ಲೈನ್‌ಗಳನ್ನು ಭೂಗತ ವಿದ್ಯುತ್‌ ಕೇಬಲ್‌ಗೆ
ಬದಲಾಯಿಸುವ ಕಾಮಗಾರಿ ನಡೆಯುತ್ತಿದೆ.

ಕಾರ್‌ಸ್ಟ್ರೀಟ್‌ ಪ್ರದೇಶದಲ್ಲಿ ಈಗಾಗಲೇ ಭೂಗತ ವಿದ್ಯುತ್‌ ಕೇಬಲ್‌ ಅಳವಡಿಸುವ ಕಾಮಗಾರಿ ಪೂರ್ಣ
ಗೊಂಡಿದ್ದು, ಇದೀಗ ಮಂಗಳಾದೇವಿ ರಸ್ತೆ, ಮಾರ್ನಮಿಕಟ್ಟೆ, ಮೋರ್ಗನ್ಸ್‌ಗೆàಟ್‌, ರಾಮಕೃಷ್ಣ ಮಠ ರಸ್ತೆ, ನ್ಯೂ ಪಾಂಡೇಶ್ವರ ರೋಡ್‌ ಪರಿಸರದಲ್ಲಿ ಭೂಗತ ಕೇಬಲ್‌ ಹಾಕುವ ಕೆಲಸ ಪ್ರಗತಿಯಲ್ಲಿದೆ. ಮಂಗಳಾದೇವಿ ಸುತ್ತ ಮುತ್ತಲ ಪ್ರದೇಶದಲ್ಲಿ ಸುಮಾರು 4 ಕಿ.ಮೀ. ಭೂಗತ ಕೇಬಲ್‌ ಅಳವಡಿಸಲಾಗುತ್ತಿದೆ. ಮೆಸ್ಕಾಂ ಮೇಲುಸ್ತುವಾರಿಯಲ್ಲಿ ಈ ಕಾಮಗಾರಿ ನಡೆಯುತ್ತಿದೆ.

ಮಂಗಳೂರು ನಗರದಲ್ಲಿ ಓವರ್‌ ಹೆಡ್‌ ವಿದ್ಯುತ್‌ ತಂತಿಗಳನ್ನು ಭೂಗತ ಕೇಬಲ್‌ಗೆ ಬದಲಾಯಿಸುವ ಕಾಮಗಾರಿ ಮೆಸ್ಕಾಂ ವತಿಯಿಂದ 2017 ರಲ್ಲಿ ಆರಂಭ ವಾಗಿತ್ತು. ಪ್ರಥಮ ಕಾಮಗಾರಿ ಬೆಂದೂರ್‌ವೆಲ್‌ ಜಂಕ್ಷನ್‌ನಿಂದ ಹಂಪನಕಟ್ಟೆ ಮತ್ತು ಎ.ಬಿ. ಶೆಟ್ಟಿ ವೃತ್ತದ ತನಕ ನಡೆದಿತ್ತು. 33 ಕೆ.ವಿ. ಲೈನ್‌ಗೆ ಸಂಬಂಧಿಸಿ ಒಟ್ಟು 32 ಕಿ.ಮೀ. ಭೂಗತ ಕೇಬಲ್‌ ಅನ್ನು ಈಗಾಗಲೇ ಅಳವಡಿಸಲಾಗಿದೆ. ಇದೀಗ ಕುಲಶೇಖರ ಉಪ ಕೇಂದ್ರದಿಂದ ಎಲ್ಲ ಕೇಂದ್ರ ಗಳಿಗೆ ಅಂತರ್‌ ಸಂಪರ್ಕ ಕಲ್ಪಿಸಲಾಗಿದೆ. 11 ಕೆ.ವಿ. ಲೈನ್‌ಗೆ ಸಂಬಂಧಿಸಿ ಕಾರ್‌ಸ್ಟ್ರೀಟ್‌, ಹಂಪನಕಟ್ಟೆ, ಕೆ.ಎಸ್‌. ರಾವ್‌ ರಸ್ತೆ, ನೆಹರೂ ಮೈದಾನ, ಪಾಂಡೇಶ್ವರ, ಬಂದರ್‌ ಪರಿಸರದಲ್ಲಿ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿ ಕೆಲವು ಕಡೆ ನಡೆದಿದೆ ಹಾಗೂ ಇನ್ನೂ ಕೆಲವು ಕಡೆ ಪ್ರಗತಿಯಲ್ಲಿದೆ. ಮಂಗಳಾದೇವಿ ಭಾಗದಲ್ಲಿಯೂ ಕಾಮಗಾರಿ ನಡೆಯುತ್ತಿದೆ.

ಪ್ರಯೋಜನ ಏನು ?
ಭೂಗತ ಕೇಬಲ್‌ ಹಾಕುವುದರಿಂದ ರಸ್ತೆಯ ಬದಿ ಮೇಲ್ಭಾಗದಲ್ಲಿ ವಿದ್ಯುತ್‌ ತಂತಿಗಳು ಜೋತು ಬೀಳುವುದು, ಮಳೆ ಗಾಳಿಗೆ ಮರಗಳು ಬಿದ್ದು, ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವುದು ತಪ್ಪುತ್ತದೆ. ವಿದ್ಯುತ್‌ ಸಂಬಂಧಿತ ಅವಘ‌ಡಗಳೂ ಕಡಿಮೆಯಾಗುತ್ತವೆ. ರಸ್ತೆ ಬದಿ ಅಲ್ಲಲ್ಲಿ ವಿದ್ಯುತ್‌ ಕಂಬಗಳು ಹಾಗೂ ಮೇಲ್ಭಾಗದಲ್ಲಿ ತಂತಿಗಳು ಇಲ್ಲದಾಗುವುದರಿಂದ ರಸ್ತೆಗಳ ಸೌಂದರ್ಯ ಕೂಡ ಹೆಚ್ಚುತ್ತದೆ. ನಗರದ ಸ್ಮಾರ್ಟ್‌ನೆಸ್‌ ವರ್ಧನೆ ಆಗು ತ್ತದೆ. ವಿದ್ಯುತ್‌ ವಿತರಣೆ ಪ್ರಕ್ರಿಯೆಯಲ್ಲಿ ಆಗುತ್ತಿರುವ ನಷ್ಟದ ಪ್ರಮಾಣವನ್ನು ಕಡಿಮೆ ಮಾಡುವಲ್ಲಿಯೂ ಇದು ಪೂರಕವಾಗಿ ಪರಿಣಮಿಸಲಿದೆ.

ಸ್ಮಾರ್ಟ್‌ ಸಿಟಿ ಯೋಜನೆಯಡಿ ಭೂಗತ ಕೇಬಲ್‌ ಅಳವಡಿಸಿದ ರಸ್ತೆಗಳಲ್ಲಿ ಬೀದಿ ದೀಪಗಳಿಗಾಗಿ ಮಾತ್ರ ಕಂಬ ಗಳನ್ನು ಹಾಕಲಾಗುತ್ತಿದೆ. ರಸ್ತೆಗೆ 9 ಮೀ. ಎತ್ತರದಲ್ಲಿ ಹಾಗೂ ಫುಟ್‌ಪಾತ್‌ಗಳಿಗೆ 5 ಮೀ. ಎತ್ತರದಲ್ಲಿ ಬೀದಿ ದೀಪ ಇರುತ್ತದೆ.

ಫೆಬ್ರವರಿ 15ರೊಳಗೆ ಕಾಮಗಾರಿ ಪೂರ್ಣ
ಭೂಗತ ವಿದ್ಯುತ್‌ ಕೇಬಲ್‌ ಅಳವಡಿಸುವ ಪ್ರದೇಶಗಳಲ್ಲಿ ಓವರ್‌ ಹೆಡ್‌ ವಿದ್ಯುತ್‌ ತಂತಿಗಳು ಇರುವುದಿಲ್ಲ. ಇದರಿಂದಾಗಿ ರಸ್ತೆಗಳು ಸ್ಮಾರ್ಟ್‌ ಆಗಿ ಕಾಣಿಸುತ್ತವೆ. ಮಂಗಳಾದೇವಿ ಪ್ರದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಭೂಗತ ಕೇಬಲ್‌ ಹಾಕುವ ಕಾಮಗಾರಿ ಮುಂದಿನ ಫೆಬ್ರವರಿ 15ರೊಳಗೆ ಪೂರ್ತಿಗೊಳ್ಳಲಿದೆ.
– ಅರುಣ್‌ ಪ್ರಭ ಕೆ.ಎಸ್‌.,
ಜನರಲ್‌ ಮ್ಯಾನೇಜರ್‌, ಮಂಗಳೂರು ಸ್ಮಾರ್ಟ್‌ ಸಿಟಿ ಲಿ.

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.