ಅಪಘಾತ ವಲಯವಾದ ಕುಂಟಿಕಾನ: ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ ಕಾರಣ?

ವಾಹನ ಚಾಲಕರಿಗೆ ಗೊಂದಲ; ಪಾದಚಾರಿಗಳಿಗೂ ಅಪಾಯ

Team Udayavani, May 10, 2022, 11:33 AM IST

kuntikana

ಕುಂಟಿಕಾನ: ರಾಷ್ಟ್ರೀಯ ಹೆದ್ದಾರಿ 66ರ ಕುಂಟಿಕಾನ ಪರಿಸರದಲ್ಲಿ ಪ್ರತಿನಿತ್ಯವೆಂಬಂತೆ ಅಪಘಾತಗಳು ಸಂಭವಿಸುತ್ತಿದ್ದು, ಆತಂಕ ಮೂಡಿಸಿದೆ.

ಮುಖ್ಯವಾಗಿ ಕುಂಟಿಕಾನದ ಕದ್ರಿ ಅಗ್ನಿಶಾಮಕ ಠಾಣೆಯ ಎದು ರಿನಲ್ಲಿ ಹಾದು ಹೋಗುವ ಹೆದ್ದಾರಿಯ ಭಾಗ ಅಪಘಾತ ವಲಯವಾಗಿ ಗುರುತಿಸಿಕೊಳ್ಳುತ್ತಿದೆ. ಇಲ್ಲಿ ಹೆದ್ದಾರಿ ತಗ್ಗಿನಿಂದ ಕೂಡಿರುವುದೇ ಅಪಘಾತಕ್ಕೆ ಪ್ರಮುಖ ಕಾರಣ ಎಂಬುದು ಕಂಡು ಬರುತ್ತಿದೆ. ಕೆಪಿಟಿ ಮತ್ತು ಕೊಟ್ಟಾರಚೌಕಿ ಕಡೆಯಿಂದ ಬರುವ ವಾಹನಗಳು ಎತ್ತರದಿಂದ ತಗ್ಗಾದ ಕಡೆಗೆ ಅತ್ಯಂತ ವೇಗವಾಗಿ ಧಾವಿಸುತ್ತವೆ. ಆಗ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗುತ್ತವೆ.

ಈ ಭಾಗದ ಹೆದ್ದಾರಿಯ ಇಕ್ಕೆಲಗಳಲ್ಲಿ ಸರ್ವಿಸ್‌ ರಸ್ತೆ ಇದೆ. ಆದರೆ ಸರ್ವಿಸ್‌ ರಸ್ತೆ ಆರಂಭ/ ಕೊನೆಗೊಳ್ಳುವ ಸ್ಥಳದಲ್ಲಿ ಯಾವುದೇ ಸೂಚನ ಫ‌ಲಕಗಳು ಇಲ್ಲ. ಹಾಗಾಗಿ ವಾಹನಗಳ ಚಾಲಕರು ಗೊಂದಲಕ್ಕೀಡಾಗಿ ಏಕಾಏಕಿ ಬ್ರೇಕ್‌ ಹಾಕುತ್ತಾರೆ. ಇದರಿಂದಾಗಿಯೂ ಅಪಘಾತಗಳು ಸಂಭವಿಸುತ್ತಿವೆ. ಪಾದಚಾರಿಗಳು ರಸ್ತೆ ದಾಟುವುದು ಕೂಡ ಇಲ್ಲಿ ತುಂಬಾ ಅಪಾಯಕಾರಿಯಾಗಿದೆ. ಈ ಹಿಂದೆ ಇಲ್ಲಿ ಡೈವರ್ಷನ್‌ ಇತ್ತು. ಆಗ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದವು. ಡೈವರ್ಷನ್‌ನ್ನು ಮುಚ್ಚಿರುವುದರಿಂದ ಅಪಘಾತಗಳ ಸಂಖ್ಯೆ ಈ ಹಿಂದಿಗಿಂತ ಸ್ವಲ್ಪ ಕಡಿಮೆಯಾಗಿದೆಯಾದರೂ ಆಗಾಗ್ಗೆ ಅಪಘಾತಗಳು ನಡೆಯುತ್ತಲೇ ಇವೆ. ಈ ಸ್ಥಳ ಅಪಾಯಕಾರಿ ಎಂದು ಸೂಚಿಸುವ ರೆಡ್‌ ಸಿಗ್ನಲ್‌ ಲೈಟ್‌ ಅನ್ನು ಇಲ್ಲಿ ಅಳವಡಿಸಲಾಗಿದೆ. ಆದರೆ ವಾಹನ ಸವಾರರು, ಚಾಲಕರು ಇದನ್ನು ಗಮನಿಸಿ ವಾಹನದ ವೇಗ ತಗ್ಗಿಸುವುದಿಲ್ಲ ಎನ್ನುತ್ತಾರೆ ಸ್ಥಳೀಯರು.

ಅಗ್ನಿಶಾಮಕ ಠಾಣೆಯ ಎದುರೇ ಈ ‘ಆ್ಯಕ್ಸಿಡೆಂಟ್‌ ಸ್ಪಾಟ್‌’ ಇದೆ. ಅಪಘಾತ ನಡೆದರೆ ಅಗ್ನಿಶಾಮಕ ಸಿಬಂದಿ ಹಗಲು ರಾತ್ರಿಯೆನ್ನದೆ ಜೀವ ಉಳಿಸಲು ಮುಂದಾಗುತ್ತಿದ್ದಾರೆ. ಇತ್ತೀಚೆಗೆ ನಡೆದ ಅಪಘಾತದಲ್ಲಿ ಅಗ್ನಿಶಾಮಕ ದಳ ಓರ್ವ ಸಿಬಂದಿಯೇ ಮೃತಪಟ್ಟಿದ್ದರು.

ಪರಿಹಾರವೇನು?

ಹೆದ್ದಾರಿ ನಿರ್ಮಾಣ ಅಸಮರ್ಪಕವಾಗಿರುವುದರಿಂದಲೇ ಅಪಘಾತಗಳು ಇಲ್ಲಿ ಹೆಚ್ಚಾಗಿ ಸಂಭವಿಸುತ್ತಿವೆ ಎಂಬುದು ಸ್ಥಳೀಯರ ಅಭಿಪ್ರಾಯ. ವಾಹನಗಳ ವೇಗದ ಮಿತಿಯನ್ನು ಕಡಿಮೆ ಮಾಡಿಸುವುದು ಸದ್ಯಕ್ಕೆ ಇರುವ ಪರಿಹಾರ. ಅದಕ್ಕಾಗಿ ಬ್ಯಾರಿಕೇಡ್‌ಗಳನ್ನು ಅಳವಡಿಸಬಹುದು ಅಥವಾ ವೈಜ್ಞಾನಿಕ ರೀತಿಯ ಹಂಪ್ಸ್‌ ಹಾಕಬಹುದು. ವಾಹನ ಸವಾರರು, ಚಾಲಕರ ಗಮನ ಸೆಳೆಯುವಂತಹ ರೀತಿಯಲ್ಲಿ ಮುನ್ನೆಚ್ಚರಿಕೆ ಫ‌ಲಕಗಳನ್ನು ಅಳವಡಿಸ ಬಹುದು ಎಂದು ಸ್ಥಳೀಯ ವಾಹನ ಚಾಲಕರು ಸಲಹೆ ನೀಡಿದ್ದಾರೆ.

-ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.