ಇಂದಿನಿಂದ ವಿವಿಧ ಇಲಾಖೆಗಳು ಕಾರ್ಯಾರಂಭ
ಲಾಕ್ಡೌನ್ ಸಡಿಲಿಕೆ: ಚಲಿಸಲಿರುವ ಆಡಳಿತ ಯಂತ್ರ
Team Udayavani, Apr 20, 2020, 5:45 AM IST
ಮಂಗಳೂರು: ದೀರ್ಘ ಕಾಲದ ಲಾಕ್ಡೌನ್ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಡಳಿತ ಯಂತ್ರದ ಚಕ್ರಗಳು ಸೋಮವಾರದಿಂದ ಮೆಲ್ಲ ಮೆಲ್ಲನೆ ಚಲಿಸಲಿವೆ.
ಅತ್ಯಗತ್ಯ ಸೇವೆಗಳನ್ನು ಒದಗಿಸುತ್ತಿರುವ ಸರಕಾರದ ಎಲ್ಲ ಇಲಾಖೆಗಳು ಮಂಗಳ ವಾರದಿಂದ ಕಾರ್ಯಾಚರಿಸಲಿದ್ದು, ಗ್ರೂಪ್ ಎ ಮತ್ತು ಬಿ ವರ್ಗ ಎಲ್ಲ ಅಧಿಕಾರಿಗಳು ಹಾಗೂ ಗ್ರೂಪ್ ಸಿ ಮತ್ತು ಡಿ ಶೇ.33ರಷ್ಟು ಸಿಬಂದಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.
ರಾಜ್ಯದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ಎ. 18ರಂದು ಬಗ್ಗೆ ಸುತ್ತೋಲೆ ಹೊರಡಿಸಿದ್ದು, ಮೇ 3ರ ವರೆಗೆ ಈ ನಿಯಮ ಜಾರಿಯಲ್ಲಿರುತ್ತದೆ.
ಕೋವಿಡ್ 19 ಲಾಕ್ಡೌನ್ ಆರಂಭವಾದ ಸಂದರ್ಭದಲ್ಲಿ ವಿವಿಧ ಸರಕಾರಿ ಇಲಾಖೆಗಳ 11ರಷ್ಟು ಅತ್ಯಗತ್ಯ ಸೇವೆಗಳ ಅಧಿಕಾರಿಗಳು, ಸಿಬಂದಿ ಮಾತ್ರ ಕರ್ತ ವ್ಯಕ್ಕೆ ಹಾಜರಾಗುತ್ತಿದ್ದರು. ಬಳಿಕ ಒಂದೊಂದೇ ಇಲಾಖೆಗಳು ಆರಂಭವಾಗಿ ಇಲ್ಲಿಯ ವರೆಗೆ 18 ಇಲಾಖೆಗಳು ಕಾರ್ಯಾಚರಿಸುತ್ತಿದ್ದವು.
ಸರಕಾರಿ ಇಲಾಖೆಗಳು ಕಾರ್ಯಾ ಚರಿಸುತ್ತಿದ್ದರೂ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಸಾಮಾನ್ಯ ಜನರು ಸೇವೆ ಪಡೆಯಲು ಆಗಿರಲಿಲ್ಲ. ಪ್ರಸ್ತುತ ಎ. 20ರಿಂದ ಕೆಲವು ವಿನಾಯಿತಿಗಳನ್ನು ಪ್ರಕಟಿಸಲಾಗಿದೆ. ಆದರೆ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇರುವುದಿಲ್ಲ.
ದಕ್ಷಿಣ ಕನ್ನಡ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ,ಮುಡಾ,ಲೋಕೋಪಯೋಗಿ ಇಲಾಖೆ,ಮಿನಿ ವಿಧಾನಸೌಧ ಸಹಿತ ಎಲ್ಲ ಇಲಾಖೆಗಳು, ನಿಗಮ, ಮಂಡಳಿ, ಪ್ರಾಧಿಕಾರಗಳ ಅಧಿಕಾರಿ ಮತ್ತು ಸಿಬಂದಿ ಸೋಮವಾರದಿಂದ ಆಂಶಿಕ ಪ್ರಮಾಣದಲ್ಲಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.
18 ಇಲಾಖೆಗಳಿಗೆ
ರಜೆಯೇ ಇಲ್ಲ!
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ, ಒಳಾಡಳಿತ, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆ, ನಗರಾಭಿವೃದ್ಧಿ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಸಾರಿಗೆ, ಇಂಧನ, ಸಿಬಂದಿ ಮತ್ತು ಆಡಳಿತ ಸುಧಾರಣೆ (ಇ ಆಡಳಿತ), ಆರ್ಥಿಕ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ, ಕೃಷಿ ಉತ್ಪನ್ನ ಮಾರುಕಟ್ಟೆ, ಕೃಷಿ, ಕಾರ್ಮಿಕ ಇಲಾಖೆ ಮತ್ತು ತೋಟಗಾರಿಕಾ ಇಲಾಖೆಯ ಅಧಿಕಾರಿ, ಸಿಬಂದಿ ಲಾಕ್ಡೌನ್ ಸಂದರ್ಭದಲ್ಲಿಯೂ ಕರ್ತವ್ಯದಲ್ಲಿದ್ದರು.
ಕರ್ತವ್ಯಕ್ಕೆ ಹಾಜರಾಗಲು ನಿರ್ದೇಶನ
ಕೋವಿಡ್ 19 ಸೇವೆಯಲ್ಲಿರುವ 18 ಇಲಾಖೆಗಳನ್ನು ಹೊರತುಪಡಿಸಿ, ಉಳಿದ ಇಲಾಖೆಗಳ ಸರಕಾರಿ ನಿಗಮ, ಮಂಡಳಿ, ಪ್ರಾಧಿಕಾರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೂಪ್ ಎ, ಬಿಯ ಎಲ್ಲ ಅಧಿಕಾರಿಗಳು, ಗ್ರೂಪ್ ಸಿ ಮತ್ತು ಡಿಯ ಶೇ.33ರಷ್ಟು ಸಿಬಂದಿ ಎ. 20ರಿಂದ ಕರ್ತವ್ಯಕ್ಕೆ ಹಾಜರಾಗುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ನಿರ್ದೇಶಿಸಿದ್ದಾರೆ.
- ಖಾದರ್ ಶಾ, ಜಿಲ್ಲಾ ವಾರ್ತಾಧಿಕಾರಿ, ದ.ಕ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ