ವಿವಿಧೆಡೆ ಮಳೆಕೊಯ್ಲು ಅಳವಡಿಕೆ ಮಾಹಿತಿ ಕಾರ್ಯಾಗಾರ

'ಮನೆ ಮನೆಗೆ ಮಳೆಕೊಯ್ಲು' ಉದಯವಾಣಿ ಅಭಿಯಾನದ ಯಶಸ್ಸು

Team Udayavani, Aug 5, 2019, 5:00 AM IST

c24

ಮಹಾನಗರ: ಕುಳಾಯಿ ಸ್ಪಂದನ ಫ್ರೆಂಡ್ಸ್‌ ಸರ್ಕಲ್ ಸಹಯೋಗದಲ್ಲಿ ಮಳೆ ನೀರುಕೊಯ್ಲು ಬಗ್ಗೆ ಮಾಹಿತಿ ಕಾರ್ಯಾಗಾರ ರವಿವಾರ ಕುಳಾಯಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು.

ನಿರ್ಮಿತಿ ಕೇಂದ್ರದ ಯೋಜನ ನಿರ್ದೇಶಕ ರಾಜೇಂದ್ರ ಕಲ್ಬಾವಿ ಅವರು ಮಳೆ ನೀರು ಕೊಯ್ಲು ವಿಷಯದ ಕುರಿತಾಗಿ ಮಾಹಿತಿ ನೀಡಿದರು. ಸಂಸ್ಥೆಯ ಪದಾಧಿಕಾರಿಗಳು ಹಾಗೂ ಊರ ನಾಗರಿಕರು ಉಪಸ್ಥಿತರಿದ್ದು, ಮಳೆಕೊಯ್ಲು ಬಗ್ಗೆ ಮಾಹಿತಿ ಪಡೆದುಕೊಂಡರು.

ದೈವಸ್ಥಾನದ ಬಾವಿಗೆ ಮಳೆಕೊಯ್ಲು

‘ಉದಯವಾಣಿ’ ಮಳೆಕೊಯ್ಲು ಅಭಿಯಾನದಿಂದ ಪ್ರೇರಿತವಾದ ಸುರತ್ಕಲ್ ಕುಚ್ಚಿಗುಡ್ಡೆ ಕೋಡ್ದಬ್ಬು ದೈವಸ್ಥಾನ ಆಡಳಿತ ಸಮಿತಿಯು ದೈವಸ್ಥಾನದ ಬಾವಿಗೆ ಮಳೆಕೊಯ್ಲು ಅಳವಡಿಕೆ ಮಾಡಿದ್ದಾರೆ. ಭವಿಷ್ಯದ ನೀರಿನ ಅಗತ್ಯತೆಯನ್ನು ಗಮನದಲ್ಲಿಟ್ಟುಕೊಂಡು 25,000 ರೂ.ಗಳ ವೆಚ್ಚದಲ್ಲಿ ಈ ವ್ಯವಸ್ಥೆಯನ್ನು ಮಾಡಲಾಗಿದೆ.

ಕುಚ್ಚಿಗುಡ್ಡೆ ಕೋಡ್ದಬ್ಬು ದೈವಸ್ಥಾನ ಪುರಾತನ ದೈವಸ್ಥಾನ. ಇಲ್ಲಿ ಬಾವಿ ಇದ್ದು, ದೇವಸ್ಥಾನದ ದೈವ ಕಾರ್ಯಗಳಿಗೆ ಮಾತ್ರ ಬಾವಿ ನೀರಿನ ಬಳಕೆ ಮಾಡಲಾಗುತ್ತದೆ. ಅಲ್ಲದೆ, ನೀರಿನ ಸಮಸ್ಯೆ ಇಲ್ಲಿ ಕಂಡು ಬಂದಿಲ್ಲ. ಆದರೆ, ‘ಉದಯವಾಣಿ’ ಮಳೆಕೊಯ್ಲು ಅಭಿಯಾನ ನೋಡಿ ಪ್ರೇರಿತರಾದ ಆಡಳಿತ ಮಂಡಳಿಯ ಸದಸ್ಯರು ಮಳೆಕೊಯ್ಲು ವ್ಯವಸ್ಥೆ ಮೂಲಕ ನೀರಿಂಗಿಸಿ ಅಂತರ್ಜಲ ಮಟ್ಟ ಏರಿಸಲು ಸಹಕರಿಸಿದ್ದಾರೆ. ನೀರು ಶುದ್ಧೀಕರಣಕ್ಕೆ ಫಿಲ್ಟರ್‌ ಅಳವಡಿಸಲಾಗಿದೆ.

ಅಧ್ಯಕ್ಷ ಜಯ ಶೆಟ್ಟಿ, ಆಡಳಿತ ಮಂಡಳಿಯ ಸರ್ವ ಸದಸ್ಯರ ಸಹಕಾರದಲ್ಲಿ ಈ ವ್ಯವಸ್ಥೆ ಮಾಡಲಾಗಿದೆ. ಪ್ರತೀ ಗ್ರಾಮದಲ್ಲೂ ಮಳೆ ಕೊಯ್ಲು ಆದಲ್ಲಿ ಅಂತರ್ಜಲ ವೃದ್ಧಿ ಆಗುವುದರಲ್ಲಿ ಸಂಶಯವಿಲ್ಲ ಎನ್ನುತ್ತಾರೆ ದೈವಸ್ಥಾನದ ಗೌರವಾಧ್ಯಕ್ಷ ವೈ. ರಮಾನಂದ ರಾವ್‌.

ಜಲಮರುಪೂರಣ ಮಾಹಿತಿ ಕಾರ್ಯಾಗಾರ
ಗುರುಪುರ ಕೈಕಂಬ ಪೊಂಪೈ ಚರ್ಚ್‌ನ ಕೊಳವೆ ಬಾವಿಗೆ ಅಳವಡಿಸಿದ ಜಲಮರುಪೂರಣ ಉದ್ಘಾಟನೆ ಹಾಗೂ ಮಳೆಕೊಯ್ಲು ಮಾಹಿತಿ ಕಾರ್ಯಾಗಾರ ರವಿವಾರ ಚರ್ಚ್‌ನ ಸಭಾಂಗಣದಲ್ಲಿ ನಡೆಯಿತು.

ನಿರ್ಮಿತಿ ಕೇಂದ್ರದ ಯೋಜನ ನಿರ್ದೇಶಕ ರಾಜೇಂದ್ರ ಕಲ್ಬಾವಿ ಅವರು ಮಳೆ ನೀರು ಕೊಯ್ಲು ವಿಷಯದ ಕುರಿತಾಗಿ ಮಾಹಿತಿ ನೀಡಿದರು.ಚರ್ಚ್‌ನ ವಂ| ಆ್ಯಂಟನಿ ಲೋಬೋ, ಪಂಚಾಯತ್‌ ಸದಸ್ಯರು, ಲಯನ್ಸ್‌ ಕ್ಲಬ್‌ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದೆ
ನೀರೆಂಬ ಅಮೃತವನ್ನು ಯಾವ ರೀತಿ ಉಳಿತಾಯ ಮಾಡಬೇಕೆಂಬ ಬಗ್ಗೆ ಮಳೆಕೊಯ್ಲು ಅಭಿಯಾನದ ಮೂಲಕ ಜನತೆಗೆ ತಿಳಿಸಿಕೊಟ್ಟ ‘ಉದಯವಾಣಿ’ಗೆ ಧನ್ಯವಾದಗಳು. ನಾನು ಶಿಕ್ಷಕಿಯಾಗಿದ್ದು, ಹತ್ತನೇ ತರಗತಿಯ ಕನ್ನಡ ವಿಭಾಗದ ಮಕ್ಕಳಿಗೆ ಈ ಮಾಹಿತಿಯನ್ನು ನೀಡಿದ್ದೇನೆ. ಶಿಕ್ಷಕರೂ ತಮ್ಮ ವಿದ್ಯಾರ್ಥಿಗಳಿಗೆ ಮಳೆಕೊಯ್ಲು ಅಳವಡಿಕೆಯ ಮಾಹಿತಿ ನೀಡಿದರೆ ಉತ್ತಮ.
-ಸಪ್ನಾ ಸಲ್ಡಾನ್ಹಾ,, ಶಿಕ್ಷಕಿ, ವಾಮಂಜೂರು

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.