Mangaluru ಅದ್ದೂರಿ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಿದ ವೇದವ್ಯಾಸ ಕಾಮತ್
Team Udayavani, Apr 17, 2023, 4:02 PM IST
ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರು ಸೋಮವಾರ ಮಂಗಳೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಉಪಸ್ಥಿಯಲ್ಲಿ ಚುನಾವಣ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಿಂದ ಅಪಾರ ಸಂಖ್ಯೆ ಯಲ್ಲಿ ಅಪಾರ ಸಂಖ್ಯೆಯ ನಾಯಕರು, ಕಾರ್ಯಕರ್ತರ ಜೊತೆ ಮೆರವಣಿಗೆಯಲ್ಲಿ ಪಾಲಿಕೆ ಕಚೇರಿಗೆ ಆಗಮಿಸಿದರು.
ಇದಕ್ಕೂ ಮೊದಲು ಅವರು ನಗರದ ಕದ್ರಿ ಮಂಜುನಾಥ, ಮಂಗಳಾದೇವಿ, ರಥಬೀದಿಯ ವೆಂಕಟರಮಣ, ಬಜಿಲ ಕೇರಿಯ ಮುಖ್ಯಪ್ರಾಣ ದೇವರಿಗೆ ಪೂಜೆ ಸಲ್ಲಿಸಿ, ನಂತರ ಕದ್ರೋಳಿ ಗೋಕರ್ಣನಾಥ ದೇವಾಲಯ ದಲ್ಲಿ ಪೂಜೆ ನೆರವೇರಿಸಿದರು.
ಮೆರವಣಿಗೆ ಹೊರಡುವ ಮೊದಲು ವಿವಿಧ ವಾರ್ಡ್ ಗಳ 100ಕ್ಕೂ ಹೆಚ್ಚು ದೇವಾಲಯಗಳಲ್ಲಿ ಪಕ್ಷದ ಪದಾಧಿಕಾರಿಗಳು ಪೂಜೆ ಸಲ್ಲಿಸಿ ತಂದಿದ್ದ ಪ್ರಸಾದವನ್ನು ಸ್ವೀಕರಿಸಿದರು. ಮೇಯರ್ ಜಯಾನಂದ ಅಂಚನ್, ಪ್ರಮುಖರಾದ ರವಿಶಂಕರ್ ಮಿಜಾರು, ನಿತಿನ್ ಕುಮಾರ್, ಪ್ರೇಮಾನಂದ ಶೆಟ್ಟಿ, ಸುಧೀರ್ ಶೆಟ್ಟಿ ಇದ್ದರು.