ನಗರದ ಫುಟ್‌ಪಾತ್‌ನಲ್ಲೇ ವಾಹನ ಸಂಚಾರ!


Team Udayavani, Jul 28, 2022, 11:31 AM IST

4

ಮಹಾನಗರ: ಮಂಗಳೂರು ನಗರ ಸ್ಮಾರ್ಟ್‌ ಸಿಟಿಯಾಗಿ ಬದಲಾಗು ತ್ತಿದ್ದರೂ, ಮೂಲಸೌಕರ್ಯ ಗಳಲ್ಲೊಂದಾದ ಫುಟ್‌ಪಾತ್‌ ವ್ಯವಸ್ಥೆ ಮಾತ್ರ ಕೆಲವು ಕಡೆ ಇನ್ನೂ ಸುಧಾರಿಸಿಲ್ಲ. ನಗರದ ಕೆಲವೆಡೆ ವಾಹನಗಳನ್ನು ಫುಟ್‌ಪಾತ್‌ನಲ್ಲೇ ನಿಲ್ಲಿಸಲಾಗುತ್ತಿದೆ. ಟ್ರಾಫಿಕ್‌ ಜಾಮ್‌ ಇದ್ದರೆ ಕೆಲವೆಡೆ ದ್ವಿಚಕ್ರ ವಾಹನಗಳಂತೂ ರಸ್ತೆ ಬದಲು ಫುಟ್‌ಪಾತ್‌ನಲ್ಲೇ ಸಾಗು ತ್ತಿದೆ. ಇದರ ವಿರುದ್ಧ ಕಠಿನ ಕ್ರಮ ಜಾರಿಗೆ ಪೊಲೀಸರು ಮುಂದಾಗಬೇಕಿದೆ.

ಅನಧಿಕೃತವಾಗಿ ಅಂಗಡಿ

ನಗರದ ಕೆಲವೆಡೆ ಸ್ಮಾರ್ಟ್‌ಸಿಟಿ, ಮನಪಾ ವತಿಯಿಂದ ವ್ಯವಸ್ಥಿತ ಫುಟ್‌ಪಾತ್‌ ವ್ಯವಸ್ಥೆ ನಿರ್ಮಿಸಲಾಗಿದೆ. ಆದರೆ ಬೆಂದೂರ್‌ವೆಲ್‌, ಕಂಕನಾಡಿ, ಬಲ್ಮಠ, ಸ್ಟೇಟ್‌ ಬ್ಯಾಂಕ್‌, ಉರ್ವಾಸ್ಟೋರ್‌, ಚಿಲಿಂಬಿ, ಕೆ.ಎಸ್‌. ರಾವ್‌ ರಸ್ತೆ, ಪಡೀಲ್‌ ಸೇರಿದಂತೆ ವಿವಿಧ ಕಡೆಗಳಲ್ಲಿ ಫುಟ್‌ಪಾತ್‌ ವ್ಯವಸ್ಥೆ ಅಸಮರ್ಪಕವಾಗಿದೆ. ನಗರದ ಫುಟ್‌ಪಾತ್‌ ಗಳಲ್ಲಿ ಅನಧಿಕೃತವಾಗಿ ಅಂಗಡಿ, ತಳ್ಳುಗಾಡಿ ಇಟ್ಟು ವ್ಯಾಪಾರ ಮಾಡುವವರ ವಿರುದ್ಧ ಮಂಗಳೂರು ಮಹಾನಗರ ಪಾಲಿಕೆ ಟೈಗರ್‌ ಕಾರ್ಯಾಚರಣೆ ನಡೆಸುತ್ತಿದೆ. ಈ ಹಿಂದೆ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಅನೇಕ ಬಾರಿ ಈ ವಿಚಾರ ಚರ್ಚೆ ನಡೆಸಿ ಟೈಗರ್‌ ಕಾರ್ಯಾಚರಣೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ತೀರ್ಮಾನಿಸಲಾಗಿತ್ತು. ಆದರೆ, ನಗರದ ಕೆಲವು ಪ್ರದೇಶದ ರಸ್ತೆ ಬದಿಗಳಲ್ಲಿ ಮಾತ್ರ ಪಾಲಿಕೆಯು ಕಾರ್ಯಾಚರಣೆ ನಡೆಸಿದೆ ಎಂಬ ಆಕ್ಷೇಪ ಸಾರ್ವಜನಿಕರಲ್ಲಿ ಕೇಳಿಬರುತ್ತಿದೆ. ಅನೇಕ ಕಡೆಗಳಲ್ಲಿ ಪಾಲಿಕೆ ಟೈಗರ್‌ ಕಾರ್ಯಾಚರಣೆ ನಡೆಸಿದರೂ, ಮರುದಿನ ಅದೇ ಜಾಗದಲ್ಲಿ ಅನಧಿಕೃತ ವ್ಯಾಪಾರ ಸಾಗುತ್ತಿದೆ.

ಮನೆ ಮನೆಗೆ ಗ್ಯಾಸ್‌ ಸಂಪರ್ಕ ಕಾಮಗಾರಿ ಉದ್ದೇಶಕ್ಕೆ ಗೈಲ್‌ ಸಂಸ್ಥೆಯು ನಗರದ ಕೆಲವೊಂದು ಕಡೆಗಳಲ್ಲಿ ಪೈಪ್‌ ಲೈನ್‌ ರಾಶಿ ಹಾಕಿದೆ. ಅದರಲ್ಲೂ ನಗರದ ಎಂ.ಜಿ. ರಸ್ತೆ, ಬಲ್ಲಾಳ್‌ಬಾಗ್‌ ಸಹಿತ ವಿವಿಧ ಕಡೆಗಳಲ್ಲಿ ಫುಟ್‌ಪಾತ್‌ನಲ್ಲೇ ಪೈಪ್‌ ಲೈನ್‌ ರಾಶಿ ಹಾಕಲಾಗಿದೆ. ಈ ರೀತಿ ಪೈಪ್‌ ರಾಶಿ ಹಾಕಿ ಸುಮಾರು ಒಂದು ವರ್ಷ ಸಮೀಪಿಸಿದರೂ ಇದನ್ನು ತೆರವು ಮಾಡಲು ಸಂಬಂಧಪಟ್ಟ ಇಲಾಖೆ ಮುಂದೆ ಬಂದಿಲ್ಲ. ಸದ್ಯ ಈ ಪೈಪ್‌ಗ್ಳು ತುಕ್ಕು ಹಿಡಿದಿದ್ದು, ಸುತ್ತಲೂ ಗಿಡ-ಗಂಟಿಯಿಂದ ಕೂಡಿದೆ. ಇದರಿಂದಾಗಿ ಫುಟ್‌ಪಾತ್‌ನಲ್ಲಿ ನಡೆಯಲು ಸಂಕಷ್ಟ ಎದುರಿಸುವಂತಾಗಿದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.