Mangaluru: ಧರ್ಮದ ಅವಹೇಳನ ಪ್ರಕರಣ: ವಿಎಚ್ ಪಿ ಪ್ರತಿಭಟನೆ; ಪೊಲೀಸರಿಂದ ಹಲವರು ವಶಕ್ಕೆ
Team Udayavani, Feb 19, 2024, 12:02 PM IST
ಮಂಗಳೂರು: ನಗರದ ಖಾಸಗಿ ಶಾಲೆಯೊಂದರ ಶಿಕ್ಷಕಿ ತರಗತಿಯಲ್ಲಿ ಹಿಂದೂ ಧರ್ಮದ ಅವಹೇಳನ ಮಾಡಿದ್ದಾರೆನ್ನಲಾದ ಘಟನೆಗೆ ಸಂಬಂಧಿಸಿದಂತೆ ಶಿಕ್ಷಕಿ ವಿರುದ್ದ ಕ್ರಮ ಕೈಗೊಳ್ಳಬೇಕು ಜೊತೆಗೆ ಹಿಂದೂ ಸಂಘಟನೆಯ ಮುಖಂಡರು, ಶಾಸಕರ ಮೇಲೆ ದಾಖಲಿಸಿರುವ ಎಫ್ ಐ ಆರ್ ರದ್ದುಗೊಳಿಸಬೇಕೆಂದು ಒತ್ತಾಯಿಸಿ ಇಂದು(ಸೋಮವಾರ) ನಗರದ ಮಿನಿ ವಿಧಾನ ಸೌಧದ ಎದುರು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರು ಪ್ರತಿಭಟನಾ ಸ್ಥಳದಿಂದ ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿ ಮನವಿ ಸಲ್ಲಿಸಲು ಹೊರಟ ವೇಳೆ ಹೋರಾಟಗಾರನ್ನು ಪೊಲೀಸರು ತಡೆದಿದ್ದಾರೆ ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ತಳ್ಳಾಟ ನಡೆದಿದ್ದು ಬಳಿಕ ಪೊಲೀಸರು ಹಲವು ಕಾರ್ಯಕರ್ತರು ಹಾಗೂ ಮುಖಂಡರನ್ನು ವಶಕ್ಕೆ ಪಡೆದರು.
ಇದನ್ನೂ ಓದಿ: Kt gatti: ಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿ ನಿಧನ