ಕಾನೂನು ಪ್ರಕಾರವೇ ವಿನಯ್ ಕುಲಕರ್ಣಿ ಬಂಧನ, ಕಾಂಗ್ರೆಸ್ ನಿಂದ ಎಲ್ಲಾ ಕಡೆಯೂ ರಾಜಕೀಯ: ನಳಿನ್
Team Udayavani, Nov 5, 2020, 12:06 PM IST
ಮಂಗಳೂರು: ಜಿ.ಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣವನ್ನು ಕಾನೂನು ಪ್ರಕಾರ ತನಿಖೆ ಮಾಡಲಾಗುತ್ತಿತ್ತು. ಇಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನವು ಸಿಬಿಐನ ಕಾನೂನಾತ್ಮತ ನಿರ್ಧಾರವಾಗಿದೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಯೋಗೆಶ್ ಗೌಡ ಹತ್ಯೆಯಾಗಿದ್ದ ಸಂದರ್ಭ ತನಿಖೆ ಮಾಡಿ ಎಂದು ಬಿಜೆಪಿ ಆಗ್ರಹಿಸಿದ್ದು, ಅವರ ಮನೆಗೆ, ಕುಟುಂಬಕ್ಕೆ ನ್ಯಾಯ ಸಿಗಬೇಕು ಎನ್ನುವ ಆಗ್ರಹ ಮಾಡಿತ್ತು. ಎಲ್ಲಾ ತನಿಖೆ ಮಾಡಿದ ನಂತರ ಸಿಬಿಐ ಕಾನೂನು ಕ್ರಮ ಕೈಗೊಂಡಿದೆ ಎಂದರು.
ಕಾಂಗ್ರೆಸ್ಗೆ ಎಲ್ಲಾವಿಚಾರದಲ್ಲೂ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ಆಡಳಿತದಲ್ಲಿರುವ ವೇಳೆಯೂ ಸಿಬಿಐ ದಾಳಿ, ಬಂಧನವಾಗುತ್ತಿತ್ತು. ಆಗೆಲ್ಲಾ ಇದು ಇವರ ಪ್ರೇರಣೆಯಲ್ಲಿ ಆಗುತ್ತಿತ್ತಾ? ಸಿಬಿಐ ಸ್ವತಂತ್ರ ಸಂಸ್ಥೆ ಕಾನೂನು ಪ್ರಕಾರ ಕುಲಕರ್ಣಿಯನ್ನು ಬಂಧಿಸಿದೆ ಎಂದು ಹೇಳಿದರು.
ಇದನ್ನೂ ಓದಿ:ರಾಜ್ಯದಲ್ಲಿ ಲವ್ ಜಿಹಾದ್ ಕಡೆಗಾಣಿಸಲು ಕಠಿಣ ಕ್ರಮ: ಮಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಸಿಬಿಐ ಅಧಿಕಾರಿಗಳ ವಿಚಾರಣೆಯಿಂದ ಸತ್ಯ ಹೊರಬರಲಿದೆ. ಕುಲಕರ್ಣಿ ಬಿಜೆಪಿ ಸೇರುವ ವಿಚಾರವನ್ನು ವರಿಷ್ಟರು, ರಾಜ್ಯಾಧ್ಯಕ್ಷರರು ತೀರ್ಮಾನಿಸಲಿದ್ದಾರೆ ಎಂದರು.
ಇದನ್ನೂ ಓದಿ: ಯೋಗೀಶ್ ಗೌಡ ಹತ್ಯೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ, ಸಹೋದರ ವಿಜಯ್ ಸಿಬಿಐ ವಶಕ್ಕೆ
ವಿನಯ್ ಕುಲಕರ್ಣಿ ಪ್ರಕರಣವನ್ನು ಸಿಬಿಐ ನಿಸ್ಪಕ್ಷಪಾತವಾಗಿ ತನಿಖೆ ನಡೆಸಲಿದೆ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.
ಮಂಗಳೂರಿನಲ್ಲಿ ಪ್ರತಿಕ್ರೀಯಿಸಿದ ಅವರು, ತನಿಖೆಯಲ್ಲಿ ವಿನಯ್ ಕುಲಕರ್ಣಿ ನಿರಪರಾಧಿ ಎಂದು ಹೊರಬಂದರೆ ಖುಷಿಯಾಗುತ್ತದೆ. ವಿನಯ್ ಕುಲಕರ್ಣಿ ಅವರನ್ನು ಯಾವುದೇ ಕಾರಣಕ್ಕೆ ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ