ಗ್ರಾ.ಪಂ.ಗಳ ನಡುವೆ ಶುರುವಾಗಿದೆ ತ್ಯಾಜ್ಯ ಸಮರ!

ಎಲ್ಲೆಂದರಲ್ಲಿ ತ್ಯಾಜ್ಯ ವಿಲೇವಾರಿ; ತೀವ್ರಗೊಂಡ ಸಮಸ್ಯೆ

Team Udayavani, Nov 23, 2019, 4:37 AM IST

tt-5

ಬಜಪೆ: ಇಲ್ಲಿನ ಗ್ರಾ.ಪಂ.ಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಒಂದು ಗ್ರಾ.ಪಂ. ಇನ್ನೊಂದು ಗ್ರಾ.ಪಂ. ವ್ಯಾಪ್ತಿಯಲ್ಲಿ ಹಾಕಲಾಗುತ್ತಿದ್ದು ಇದರಿಂದಾಗಿ ಗ್ರಾಮ ಪಂಚಾಯತ್‌ಗಳ ನಡುವೆ ಈಗ ಹೊಸದೊಂದು ತ್ಯಾಜ್ಯ ಸಮರ ಆರಂಭಗೊಂಡತಾಗಿದೆ.

ಗುತ್ತಿಗೆದಾರರು ಎಲ್ಲೆಂದರಲ್ಲಿ ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದಾರೆ ಆದರೆ ಗ್ರಾ.ಪಂ. ಆಡಳಿತ ಮಾತ್ರ ಇನ್ನೊಂದು ಗ್ರಾ.ಪಂ. ವಿರುದ್ಧ ದೂರು ನೀಡುತ್ತಿ ದ್ದಾರೆ. ಈಗಾಗಲೇ ಕೆಲವು ಪ್ರಕರ ಣಗಳು ಪೊಲೀಸ್‌ ಠಾಣೆಯ ಮೆಟ್ಟಿಲು ಹತ್ತಿದ್ದು, ಕೆಲವರು ತಾ.ಪಂ. ಕಾರ್ಯನಿರ್ವಾ ಹಣಾಧಿಕಾರಿಗಳಿಗೆ ದೂರು ನೀಡಿವೆ.

ಘಟನೆ ಒಂದು: ಪಡುಪೆರಾರ ಗ್ರಾ.ಪಂ.ನ ಕತ್ತಲ್‌ಸಾರ್‌ ವ್ಯಾಪ್ತಿಯಲ್ಲಿ 4ತಿಂಗಳ ಹಿಂದೆ ಬೇರೆ ಪಂಚಾಯತ್‌ನ ತ್ಯಾಜ್ಯ ಹಾಕಲಾಗಿದೆ. ಈ ಬಗ್ಗೆ ತ್ಯಾಜ್ಯ ಹಾಕಿದವರು ಯಾರೂ ಎಂದು ಗೊತ್ತಿದ್ದರೂ ಸಮರ್ಪಕ ದಾಖಲೆ ಇಲ್ಲದ ಕಾರಣ ಪಂಚಾಯತ್‌ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಲು ಶಕ್ತವಾಗಿಲ್ಲ.

ಘಟನೆ ಎರಡು: ಗುರುಪುರ ಕೈಕಂಬದ 4 ಟಿಪ್ಪರ್‌ ತ್ಯಾಜ್ಯವನ್ನು ಗುತ್ತಿಗೆದಾರರು ಎಕ್ಕಾರು ಗ್ರಾ.ಪಂ.ನ ವ್ಯಾಪ್ತಿಯಲ್ಲಿ ವಿಲೇವಾರಿ ಮಾಡಿದ್ದಾರೆ. ಈ ಬಗ್ಗೆ ಎಕ್ಕಾರು ಗ್ರಾ.ಪಂ. ಆಡಳಿತ ತಾ.ಪಂ. ಕಾರ್ಯ ನಿರ್ವಾಹಣಾಧಿಕಾರಿಗೆ ದೂರು ನೀಡಿದೆ.

ಘಟನೆ ಮೂರು: ಬಜಪೆ ಪಂಚಾಯತ್‌ ಎದುರು ಹಳೆಯಂಗಡಿ ಗ್ರಾ.ಪಂ. ವ್ಯಾಪ್ತಿ ತ್ಯಾಜ್ಯ ಹಾಕಿದ್ದು ಈ ಬಗ್ಗೆ ಪಂಚಾಯತ್‌ ದಾಖಲೆ ಸಹಿತ ಪತ್ತೆ ಹಚ್ಚಿದೆ.

ಘಟನೆ ನಾಲ್ಕು: ಮಳವೂರು ಗ್ರಾ.ಪಂ.ಗೆ ಸುತ್ತಮುತ್ತಲೂ ಗ್ರಾಮ ಪಂಚಾಯತ್‌ನ ತ್ಯಾಜ್ಯಹಾಕಿದ್ದ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಬಜಪೆ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

ಘಟನೆ ಐದು: ಜೋಕಟ್ಟೆ ಗ್ರಾ.ಪಂ. ವ್ಯಾಪ್ತಿಯ ಕೆಐಎಡಿಬಿಯು ನಿವೇಶನಕ್ಕೆ ಸ್ವಾಧೀನ ಮಾಡಿದ ಜಾಗದಲ್ಲಿ ಸುತ್ತ ಮುತ್ತಲಿನ ಎಲ್ಲ ಪಂಚಾಯತ್‌ನವರು ತ್ಯಾಜ್ಯ ಹಾಕುವ ಬಗ್ಗೆ ವರದಿಯಾಗಿದೆ.

ಘಟನೆ ಆರು:
ಕಂದಾವರ ಗ್ರಾ.ಪಂ.ನ ತ್ಯಾಜ್ಯ ಸೌಹಾರ್ದನಗರದಲ್ಲಿ ವಿಲೇವಾರಿ ಮಾಡಿರುವ ಬಗ್ಗೆ ಮಾಹಿತಿ ಬಂದಿದೆ. ಹೀಗೆ ಎಲ್ಲೆಡೆ ಒಂದು ಗ್ರಾ.ಪಂ.ನ ತ್ಯಾಜ್ಯ ಇನ್ನೊಂದು ಗ್ರಾ.ಪಂ. ವ್ಯಾಪ್ತಿಗೆ ಹಾಕಲಾಗುತ್ತಿದೆ.

ಈ ಮೊದಲು ಹೆಚ್ಚಿನ ಎಲ್ಲ ಗ್ರಾ.ಪಂ.ನ ತ್ಯಾಜ್ಯವನ್ನು ಪಚ್ಚನಾಡಿ ಡಂಪಿಂಗ್‌ ಯಾರ್ಡ್‌ ನಲ್ಲಿ ವಿಲೇವಾರಿ ಮಾಡಲಾಗುತ್ತಿತ್ತು. ಆದರೆ ಈಗ ಡಂಪಿಂಗ್‌ ಯಾರ್ಡ್‌ನಲ್ಲಿ ತ್ಯಾಜ್ಯ ವಿಲೇವಾರಿಗೆ ಅವಕಾಶ ಇರದ ಕಾರಣದಿಂದಾಗಿ ಗ್ರಾಮಾಂತರ ಪ್ರದೇಶದ ಗುತ್ತಿಗೆದಾರರು ಎಲ್ಲೆಂದರಲ್ಲಿ ತ್ಯಾಜ್ಯವನ್ನು ಹಾಕುತ್ತಿದ್ದಾರೆ.

ಕೆಲವೆಡೆ ವಿರೋಧ
ಗುರುಪುರ, ಉಳ್ಳಾಯಿಬೆಟ್ಟು ಮಲ್ಲೂರು, ಕುಪ್ಪೆಪದವು, ಎಡಪದವು, ಬಡಗ ಎಡಪದವು, ಅಡ್ಯಾರು ಗ್ರಾ.ಪಂ. ಗಳಿಗೆ ತ್ಯಾಜ್ಯ ಘಟಕ ಜಾಗವನ್ನು ಕಾಯ್ದಿರಿಸಲು ಸಾಧ್ಯವಾಗಿಲ್ಲ. ಕೆಲವೆಡೆ ನೈರ್ಮಲ್ಯ ಸಮಸ್ಯೆ ಉಂಟಾಗುತ್ತದೆ ಎಂಬ ದೃಷ್ಟಿಯಲ್ಲಿ ಗ್ರಾಮಸ್ಥರು ವಿರೋಧಿಸುತ್ತಿದ್ದಾರೆ. ಕಂದಾವರ ಗ್ರಾ.ಪಂ. ವ್ಯಾಪ್ತಿಯಲ್ಲಿ ತ್ಯಾಜ್ಯ ಘಟಕ ಮಾಡಿದಲ್ಲಿ ಹಕ್ಕಿಗಳು ಹಾರಾಟದಿಂದಾಗಿ ವಿಮಾನ ಹಾರಾಟಕ್ಕೆ ತೊಂದರೆಯ ಕಾರಣದಿಂದ ಅನುಮತಿ ದೊರೆತಿಲ್ಲ. ಎಕ್ಕಾರು ಗ್ರಾ.ಪಂ.ಗೆ

ಅರಣ್ಯ ಇಲಾಖೆ, ಪೆರ್ಮುದೆ ಗ್ರಾ.ಪಂ. ಗಣಿ ಮತ್ತು ಆರೋಗ್ಯ ಇಲಾಖೆ ಮತ್ತು ಮಳವೂರು ಗ್ರಾ.ಪಂ.ಗೆ ಸಿಆರ್‌ಝಡ್‌ನ‌ ಆಕ್ಷೇಪಣೆಯಿಂದಾಗಿ ಜಾಗ ಕಾಯ್ದಿರಿಸಿದ್ದರೂ ಕೂಡ ತ್ಯಾಜ್ಯ ಘಟಕ ಆರಂಭಕ್ಕೆ ಅನುಮತಿ ಸಿಗದಂತಾಗಿದೆ. 4 ಅಥವಾ 5 ಪಂಚಾಯತ್‌ನ್ನು ಒಟ್ಟು ಗೂಡಿಸಿ ಒಂದು ತ್ಯಾಜ್ಯ ಘಟಕಕ್ಕೆ ಜಾಗ ವನ್ನು ಜಿಲ್ಲಾಧಿಕಾರಿಯವರೇ ನೇರವಾಗಿ ಮೀಸಲಿಡಬೇಕಾಗಿದೆ. ಸಣ್ಣ ಪಂಚಾ ಯತ್‌ಗಳು ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿಯೊಂದಿಗೆ ತ್ಯಾಜ್ಯ ಸುಡುವ ಯಂತ್ರ ಅಳವಡಿಸಲು ಸರಕಾರ ಸೂಚಿಸಬೇಕು.

ಸಾರ್ವಜನಿಕರಿಗೆ ರಸ್ತೆ ಬದಿ ತ್ಯಾಜ್ಯ ಬಿಸಾಡಿದರೆ ನ್ಯಾಯಾಲಯಕ್ಕೆ ಹಾಜರುಪಡಿಸಿ, ದಂಡ ಕಟ್ಟಲು ಕಾನೂನಿನ ಮಾರ್ಪಾಡಿನ ಅಗತ್ಯವಿದೆ. ಪಂಚಾಯತ್‌ಗಳು ಪ್ಲಾಸ್ಟಿಕ್‌ ಮಾರಾಟ ಮಾಡುವ ಅಂಗಡಿಗಳಿಗೆ ರಾಜ್ಯ ಪತ್ರದಲ್ಲಿ ಸೂಚಿಸಿರುವಂತೆ ದಿಢೀರ್‌ ದಾಳಿ ಮಾಡಿ ದಂಡ ಹಾಕಲು ಜಿಲ್ಲಾ ಪಂಚಾಯತ್‌ ನೈತಿಕ ಬಲವನ್ನು ನೀಡಬೇಕಾಗಿದೆ ಈ ಕ್ರಮಗಳಿಂದ ತ್ಯಾಜ್ಯ ಸಮಸ್ಯೆಯನ್ನು ನಿವಾರಿಸಿಬಹುದು ಎಂಬುದು ಅಭಿಪ್ರಾಯ.

ಕೆಲವೇ ಪಂಚಾಯತ್‌ಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕ
ಮಂಗಳೂರು ತಾಲೂಕು ವ್ಯಾಪ್ತಿಯ ಸುರತ್ಕಲ್‌ ಹೋಬಳಿಯಲ್ಲಿ ಬಜಪೆ ಗ್ರಾ. ಪಂ. ಗ್ರಾಮಸ್ಥರ ವಿರೋಧದ ನಡುವೆಯೂ 25ಸೆಂಟ್‌ ಜಾಗವನ್ನು ತ್ಯಾಜ್ಯ ವಿಲೇವಾರಿ ಘಟಕಕ್ಕೆ ಮೀಸಲಿಟ್ಟಿದೆ. ಉಳಿದಂತೆ ಲಭ್ಯ ಮಾಹಿತಿ ಪ್ರಕಾರ ಗುರುಪುರ ಹೋಬಳಿಯಲ್ಲಿ ಗಂಜಿಮಠ, ಮುಚ್ಚಾರು, ಪಡುಪೆರಾರ, ನೀರುಮಾರ್ಗ, ಮುತ್ತೂರು ಗ್ರಾ.ಪಂ. ತ್ಯಾಜ್ಯ ಘಟಕಕ್ಕೆ ಜಾಗವನ್ನು ಕಾಯ್ದಿರಿಸಲಾಗಿದೆ.

ತ್ಯಾಜ್ಯ ಸಮಸ್ಯೆಗೆ ಕಾರಣ
ತ್ಯಾಜ್ಯ ವಿಲೇವಾರಿಗೆ ಮೀಸಲಿಟ್ಟ ಜಾಗದಲ್ಲಿ ಕೆಲವೊಂದು ಕಡೆ ವಿರೋಧ ವ್ಯಕ್ತವಾಗುತ್ತಿದೆ. ಅಲ್ಲದೇ ಜಿ.ಪಂ. ಅಂಗನವಾಡಿ ಕೇಂದ್ರದಿಂದ 4ನೇ ಶನಿವಾರ ಪ್ಲಾಸ್ಟಿಕ್‌ ವಿಲೇವಾರಿಯನ್ನು ಸಮರ್ಪಕವಾಗಿ ಮಾಡದಿರುವುದು ತ್ಯಾಜ್ಯ ಸಮಸ್ಯೆಗೆ ಪ್ರಮುಖ ಕಾರಣವಾಗಿದೆ. ಆದರೆ ಈ ಬಗ್ಗೆ ಜಿ.ಪಂ. ಆಡಳಿತ ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ. ತ್ಯಾಜ್ಯ ವಿಲೇವಾರಿ ದೃಷ್ಟಿಯಲ್ಲಿ ಉಡುಪಿ ಜಿಲ್ಲಾಡಳಿತವೂ ಸೂಕ್ತ ಕ್ರಮವನ್ನು ಕೈಗೊಂಡಿದೆ ಆದರೆ ದ.ಕ. ಜಿಲ್ಲಾಡಳಿತವೂ ಈ ಬಗ್ಗೆ ಗಮನಹರಿಸಬೇಕಿದೆ.

ಎಲ್ಲ ಪಂ.ನಲ್ಲಿ ತ್ಯಾಜ್ಯ ಸಂಸ್ಕರಣೆ ಘಟಕ
ಎಲ್ಲ ಗ್ರಾ. ಪಂ.ಗಳಲ್ಲಿ ತ್ಯಾಜ್ಯ ಸಂಸ್ಕರಣ ಘಟಕ ಆರಂಭಿಸುವ ಬಗ್ಗೆ ಈಗಾಗಲೇ ತೀರ್ಮಾನಿಸಲಾಗಿದ್ದು ಜಿ.ಪಂ. ನಿಂದ ಸೂಚನೆ ನೀಡಲಾಗಿದೆ. ಹೀಗಾಗಿ ಮುಂದಿನ ಕೆಲವು ತಿಂಗಳೊಳಗೆ ಜಿಲ್ಲೆಯ ಎಲ್ಲ ಗ್ರಾ. ಪಂ.ನಲ್ಲಿಯೂ ತ್ಯಾಜ್ಯ ಘಟಕ ಕಾರ್ಯನಿರ್ವಹಿಸಲಿವೆ.
– ಡಾ| ಆರ್‌. ಸೆಲ್ವಮಣಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ,

- ಸುಬ್ರಾಯ ನಾಯಕ್‌ ಎಕ್ಕಾರು

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.