ಮಂಗಳಾ ಸಂಸ್ಥೆಯ ಹೆಗಲಿಗೆ ತ್ಯಾಜ್ಯ ನಿರ್ವಹಣೆ

ಪಾಲಿಕೆಯ 1 ವಾರ್ಡ್‌ನಲ್ಲಿ ಪ್ರಾಯೋಗಿಕ ಯೋಜನೆಗೆ ಅನುಮೋದನೆ

Team Udayavani, May 19, 2022, 11:13 AM IST

corporation

ಮಂಗಳಾದೇವಿ: ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮುಂಬರುವ ತ್ಯಾಜ್ಯ ನಿರ್ವಹಣೆಯ ಗುತ್ತಿಗೆ ಪ್ರಕ್ರಿಯೆ ಅಂತಿಮಗೊಳ್ಳುವ ಮುನ್ನ, 1 ವಾರ್ಡ್‌ ವ್ಯಾಪ್ತಿಯ ತ್ಯಾಜ್ಯ ನಿರ್ವಹಣೆಯನ್ನು ಶ್ರೀ ರಾಮಕೃಷ್ಣ ಮಠದ ಮಾರ್ಗದರ್ಶನದ ಮಂಗಳಾ ರಿಸೋರ್ಸ್‌ ಮ್ಯಾನೇಜ್‌ಮೆಂಟ್‌ ಪ್ರೈ.ಲಿ.ಗೆ ಪ್ರಾಯೋಗಿಕ ವಾಗಿ ನೀಡುವ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಗಿದೆ.

ಮನೆ ಮನೆ ಕಸ ಸಂಗ್ರಹಣೆಗೆ ಆ್ಯಂಟೊನಿ ವೇಸ್ಟ್‌ ಹ್ಯಾಂಡ್‌ಲಿಂಗ್‌ ಸೆಲ್‌ ಪ್ರೈ.ಲಿ.ನ 7 ವರ್ಷಗಳ ಅವಧಿ 2022ರ ಜನವರಿಗೆ ಅಂತ್ಯಗೊಂಡಿದೆ. ಮುಂದೆ ಹೊಸ ಟೆಂಡರ್‌ ಆಗುವವರೆಗೆ ಆ್ಯಂಟೊನಿ ಸಂಸ್ಥೆಯೇ ತ್ಯಾಜ್ಯ ನಿರ್ವಹಣೆ ನಡೆಸಲಿದೆ. ಮಂಗಳಾ ರಿಸೋರ್ಸ್‌ ಮ್ಯಾನೇಜ್‌ಮೆಂಟ್‌ ಪ್ರೈ.ಲಿ., ಪಾಲಿಕೆ ವತಿಯಿಂದ ಡಿಪಿಆರ್‌ ಸರಕಾರಕ್ಕೆ ಸಲ್ಲಿಕೆಯಾಗಿದ್ದು, ಇನ್ನಷ್ಟೇ ಅಂತಿಮ ವಾಗಬೇಕಿದೆ. ಇದೀಗ ಮಂಗಳಾ ರಿಸೋರ್ಸ್‌ ಸಂಸ್ಥೆಗೆ ಪ್ರಾಯೋಗಿಕವಾಗಿ ಮಂಗಳಾದೇವಿ ವಾರ್ಡ್‌ ನ ತ್ಯಾಜ್ಯ ನಿರ್ವಹಣೆ ಜವಾಬ್ದಾರಿಯನ್ನು ಪಾಲಿಕೆ ನೀಡಿದೆ. ಜುಲೈನಿಂದ ಇದು ಅನುಷ್ಠಾನಕ್ಕೆ ಬರುವ ಸಾಧ್ಯತೆಯಿದೆ.

ಪ್ರಸ್ತುತ ಆ್ಯಂಟನಿ ಸಂಸ್ಥೆಯವರು ತ್ಯಾಜ್ಯ ಸಂಗ್ರಹ, ಸಾಗಾಟವನ್ನು ನಡೆಸುತ್ತಿದ್ದು, ನಿರ್ವಹಣೆಯನ್ನು ಪ್ರತ್ಯೇಕವಾಗಿ ಮಾಡಲಾಗುತ್ತದೆ. ಆದರೆ ಮಂಗಳಾ ಸಂಸ್ಥೆಯು 1 ವಾರ್ಡ್‌ನ ತ್ಯಾಜ್ಯ ಸಂಗ್ರಹ, ಸಾಗಾಟ ಅದನ್ನು ಗೊಬ್ಬರವಾಗಿ ನಿರ್ವಹಿ ಸುವ ಮೂರೂ ಹಂತವನ್ನು ನಿರ್ವ ಹಿಸಲಿದೆ. “ಸ್ವಚ್ಛ ಮಂಗಳೂರು’ ಪರಿಕಲ್ಪನೆಯಲ್ಲಿ ಶ್ರೀ ರಾಮಕೃಷ್ಣ ಮಠ ಮಂಗಳೂರಿನಲ್ಲಿ ನಡೆಸಿದ ಸ್ವಚ್ಛತ ಕಾರ್ಯದ ಆಧಾರದಲ್ಲಿ ಶ್ರೀ ಏಕಗಮ್ಯಾನಂದ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಮಂಗಳಾ ರಿಸೋರ್ಸ್‌ ಮ್ಯಾನೇಜ್‌ಮೆಂಟ್‌ ಸಂಸ್ಥೆ ಇದರ ಜವಾಬ್ದಾರಿ ಹೊತ್ತುಕೊಂಡಿದೆ.

 4 ಎಲೆಕ್ಟ್ರಿಕ್‌ ವಾಹನ!

ಹೊಸದಾಗಿ ತ್ಯಾಜ್ಯ ನಿರ್ವಹಣೆ ಮಾಡುವಾಗ ಎಲೆಕ್ಟ್ರಿಕ್‌ ವಾಹನವನ್ನೇ ಬಳಸಲು ಉದ್ದೇಶಿಸಲಾಗಿದೆ. ಇದು ಸಾಧ್ಯವಾದರೆ ತ್ಯಾಜ್ಯ ನಿರ್ವಹಣೆಯಲ್ಲಿ ಮಂಗಳೂರಿನಲ್ಲಿ ಮೊದಲ ಪ್ರಯೋಗವಾಗಲಿದೆ. ಒಟ್ಟು 4 ಎಲೆಕ್ಟ್ರಿಕ್‌ ವಾಹನವನ್ನು ಖರೀದಿಸಿ ನಿರ್ವಹಣೆ ಮಾಡಲಾಗುತ್ತದೆ. ಪರಿಸರ ಪೂರಕ ಅಂಶಗಳಿಗೆ ಒತ್ತು ನೀಡಿದಂತಾಗುತ್ತದೆ.

ನಿರ್ವಹಣೆ: ವರ್ಮಿ ಕಂಪೋಸ್ಟಿಂಗ್‌

ಹಸಿ ಕಸವನ್ನು ಮನೆಯವರಿಂದ ‘ಕ್ರೇಟ್‌ ‘ನಲ್ಲಿ ಸಂಗ್ರಹಿಸಿದರೆ, ಒಣಕಸವನ್ನು ಚೀಲದ ಮುಖೇನ ಪಡೆಯಲಾಗುತ್ತದೆ. ಹಸಿ ಕಸವನ್ನು ಪಡೆದ ಅನಂತರ ಅದನ್ನು ಪಚ್ಚನಾಡಿಯ ನಿಗದಿತ ಸ್ಥಳದಲ್ಲಿ ‘ವರ್ಮಿ ಕಂಪೋಸ್ಟಿಂಗ್‌ ಟೆಕ್ನಾಲಜಿ’ ಮುಖಾಂತರ ಗೊಬ್ಬರವಾಗಿ ಪರಿವರ್ತಿಸಲಾಗುತ್ತದೆ. ಸುಮಾರು 4-5 ಟನ್‌ ತ್ಯಾಜ್ಯ ನಿರ್ವಹಣೆಗಾಗಿ 18 ಫೀಟ್‌ನ ವರ್ಮಿ ಕಂಪೋಸ್ಟಿಂಗ್‌ ಅಗತ್ಯವಿದೆ. ಇದರ ಮೇಲ್ದರ್ಜೆಗೇರುವ ಕೆಲಸವನ್ನು ಪಾಲಿಕೆ ಮಾಡಿಕೊಡಬೇಕಿದೆ. ಬೀದಿ ಬದಿ ಗುಡಿಸುವ ಕಾರ್ಯವನ್ನು ಪೌರಕಾರ್ಮಿಕರು ನಡೆಸಿದರೆ ಅದರ ತ್ಯಾಜ್ಯವನ್ನು ಮಂಗಳಾ ಸಂಸ್ಥೆಯೇ ಸಾಗಾಟ ನಡೆಸಲಿದೆ.

ಪ್ರತೀದಿನವೂ ಒಣ ಕಸ ಸಂಗ್ರಹ

ಪ್ರತೀದಿನವೂ ಹಸಿ, ಒಣಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸಲಾಗುತ್ತದೆ. ಒಣಕಸವನ್ನು ಕಾವೂರಿನಲ್ಲಿರುವ ಡ್ರೈ ವೇಸ್ಟ್‌ ಕಲೆಕ್ಷನ್‌ ಸೆಂಟರ್‌ಗೆ ನಿರ್ವಹಣೆಗಾಗಿ ಕಳು ಹಿಸಲಾಗುತ್ತದೆ. ಅಲ್ಲಿ ಇದನ್ನು ಕಂಪ್ರಸ್‌ ಮಾಡಿ ಮರು ಬಳಕೆಗೆ ಕಳುಹಿಸಲಾಗುತ್ತದೆ. ಒಂದು ವೇಳೆ ಮರು ಬಳಕೆಗೆ ಯೋಗ್ಯವಿಲ್ಲದಿದ್ದರೆ ಅದನ್ನು ಸಿಮೆಂಟ್‌ ಫ್ಯಾಕ್ಟರಿಗೆ ನೀಡಲು ಉದ್ದೇಶಿಸಲಾಗಿದೆ.

ಎಂಆರ್‌ಪಿಎಲ್‌ ತ್ಯಾಜ್ಯ ನಿರ್ವಹಣೆ!

ಕಾರ್ಕಳದ ನಿಟ್ಟೆಯಲ್ಲಿ ಸ್ಥಳೀಯ 45 ಗ್ರಾಮ ಪಂಚಾಯತ್‌ ಗಳಿಂದ ಸಂಗ್ರಹಿಸಿದ ಒಣತ್ಯಾಜ್ಯವನ್ನು ಮಂಗಳಾ ರಿಸೋರ್ಸ್‌ ಮ್ಯಾನೆಜ್‌ಮೆಂಟ್‌ ವತಿಯಿಂದ ಎಂಆರ್‌ ಎಫ್‌ (ಸಮಗ್ರ ಘನತ್ಯಾಜ್ಯ ನಿರ್ವಹಣೆ) ಘಟಕ ನಿರ್ಮಿಸಿ ನಿರ್ವಹಣೆ ಮಾಡಲಾಗುತ್ತಿದೆ. ಶ್ರೀ ಕ್ಷೇತ್ರ ಕಟೀಲು, ಉಪ್ಪಿನಂಗಡಿಯ ಗ್ರಾ.ಪಂ. ಸಹಿತ ಕೆಲವು ಕಡೆಯಲ್ಲಿ ಇಂತಹ ಪರಿಕಲ್ಪನೆ ಅನುಷ್ಠಾನದಲ್ಲಿದೆ. ಮುಂದೆ ಎಂಆರ್‌ಪಿಎಲ್‌, ದೇರಳಕಟ್ಟೆ ಕೆ.ಎಸ್.ಹೆಗ್ಡೆ ಕ್ಯಾಂಪಸ್‌, ಸಹ್ಯಾದ್ರಿ ಶಿಕ್ಷಣ ಸಂಸ್ಥೆ ಸಹಿತ ವಿವಿಧ ಕಡೆಗಳಲ್ಲಿ ಅನುಷ್ಠಾನವಾಗಲಿದೆ.

ಪ್ರಾಯೋಗಿಕ ಜಾರಿ
ರಾಮಕೃಷ್ಣ ಮಠದ ಮಾರ್ಗದರ್ಶನದ ಮಂಗಳಾ ರಿಸೋರ್ಸ್‌ ಮ್ಯಾನೇಜ್‌ ಮೆಂಟ್‌ ಸಂಸ್ಥೆಗೆ ಪ್ರಾಯೋಗಿಕವಾಗಿ ಮಂಗಳಾದೇವಿ ವಾರ್ಡ್‌ನಲ್ಲಿ ತ್ಯಾಜ್ಯ ನಿರ್ವಹಣೆ ಮಾಡಲು ಒಪ್ಪಿಗೆ ನೀಡಲಾಗಿದೆ. ಈ ಸಂಬಂಧ ಮಾಹಿತಿ ವಿನಿಮಯ, ಪೂರಕ ಪ್ರಕ್ರಿಯೆ ಸದ್ಯ ನಡೆಯುತ್ತಿದೆ. 1 ವಾರ್ಡ್‌ನ ಅನುಷ್ಠಾನ ಸ್ವರೂಪ ಪರಿಶೀಲಿಸಿ ಇತರ ವಾರ್ಡ್‌ ಬಗ್ಗೆ ಮುಂದಿನ ದಿನದಲ್ಲಿ ಕ್ರಮ ಕೈಗೊಳ್ಳಲಾಗುವುದು. ಪ್ರೇಮಾನಂದ ಶೆಟ್ಟಿ, ಮನಪಾ ಮೇಯರ್‌

ಸಚ್ಛ –ಸುಂದರ ವಾರ್ಡ್‌ ಸಂಕಲ್ಪ

ಮಂಗಳಾದೇವಿ ವಾರ್ಡ್‌ನ ತ್ಯಾಜ್ಯ ನಿರ್ವಹಣೆಯನ್ನು ಪ್ರಾಯೋಗಿಕವಾಗಿ ನಡೆಸುವಂತೆ ಈಗಾಗಲೇ ಪಾಲಿಕೆಯಿಂದ ಬಹುತೇಕ ಒಪ್ಪಿಗೆ ದೊರೆತಿದೆ. ಸ್ವಚ್ಛ ಮಂಗಳೂರು ಪರಿಕಲ್ಪನೆ ಜಾರಿಗೊಳಿಸಿದ ರಾಮಕೃಷ್ಣ ಮಠದ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ 1 ವಾರ್ಡ್‌ ಅನ್ನು ಸ್ವಚ್ಛ-ಸುಂದರ ವಾರ್ಡ್‌ ಆಗಿ ಮಾದರಿ ಸ್ವರೂಪದಲ್ಲಿ ಬದಲಿಸುವ ಸಂಕಲ್ಪ ನಮ್ಮದು. ದಿಲ್‌ರಾಜ್‌ ಆಳ್ವ, ವ್ಯವಸ್ಥಾಪಕ ನಿರ್ದೇಶಕರು ಮಂಗಳಾ ರಿಸೋರ್ಸ್‌ ಮ್ಯಾನೆಜ್‌ಮೆಂಟ್‌ ಪ್ರೈ.ಲಿ.

ದಿನೇಶ್‌ ಇರಾ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.