Drinking water problem: ಮೂರು ವರ್ಷಗಳ ಬಳಿಕ ಮಂಗಳೂರಿನಲ್ಲಿ ನೀರು ಕಡಿತ

ಉಲ್ಬಣಿಸುತ್ತಿದೆ ಕುಡಿಯುವ ನೀರಿನ ಸಮಸ್ಯೆ

Team Udayavani, May 5, 2023, 3:49 PM IST

Drinking water problem: ಮೂರು ವರ್ಷಗಳ ಬಳಿಕ ಮಂಗಳೂರಿನಲ್ಲಿ ನೀರು ಕಡಿತ

ಮಹಾನಗರ: ತುಂಬೆ ವೆಂಟೆಡ್‌ ಡ್ಯಾಂನಲ್ಲಿ ನೀರಿನ ಮಟ್ಟ ಗಣ ನೀಯ ಕುಸಿಯುತ್ತಿದ್ದು, ಮೂರು ವರ್ಷಗಳ ಬಳಿಕ ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ರೇಷನಿಂಗ್‌ ಆರಂಭಗೊಂಡಿದೆ.

2019ರಲ್ಲಿ ಎಪ್ರಿಲ್‌ 11ರಿಂದ ಮೊದಲನೇ ಹಂತದ ನೀರಿನ ರೇಷನಿಂಗ್‌ ಆರಂಭಗೊಂಡಿತ್ತು. ಆದರೆ, ಆ ಬಾರಿ 5.5 ಮೀ.ನಷ್ಟು ನೀರಿನ ಮಟ್ಟ ಇತ್ತು. ಬಳಿಕದ ವರ್ಷಗಳಲ್ಲಿ ಉತ್ತಮ ಪೂರ್ವ ಮುಂಗಾರು ಮಳೆ ಸುರಿದ ಪರಿಣಾಮ ನಗರದಲ್ಲಿ ನೀರಿನ ರೇಷನಿಂಗ್‌ ಮಾಡುವ ಅಗತ್ಯ ಬಂದಿರಲಿಲ್ಲ. ಆದರೆ, ಈ ಬಾರಿ ನಿರೀಕ್ಷಿತ ಮಳೆ ಸುರಿದಿಲ್ಲ. ಸದ್ಯ ತುಂಬೆ ಡ್ಯಾಂನಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಮೇ 4ರಂದು 4.21 ಮೀ.ಗೆ ಇಳಿಕೆ ಕಂಡಿದೆ. ತುಂಬೆ ಕೆಳ ಭಾಗದಿಂದ ನೀರೆತ್ತಲಾಗುತ್ತಿದೆಯಾದರೂ ಎರಡು ವಾರಗಳಿಗೆ ಬೇಕಾಗುವಷ್ಟು ಮಾತ್ರ ನೀರಿದೆ.

ನೀರು ರೇಷನಿಂಗ್‌ ಮಾಡುವ ಬಗ್ಗೆ ಪಾಲಿಕೆ ಕಳೆದ ಕೆಲವು ದಿನಗಳ ಹಿಂದೆಯೇ ಸುಳಿವು ನೀಡಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಯಾದ ಪೂರ್ವ ಮುಂಗಾರು ಮಳೆ ಕೊರತೆ ಇದೆ. ಪರಿಣಾಮ ಸುಬ್ರಹ್ಮಣ್ಯ ಸಹಿತ ವಿವಿಧೆಡೆ ಮಳೆಯಾಗಲಿಲ್ಲ. ನಿರೀಕ್ಷಿತ ಪ್ರಮಾಣದಲ್ಲಿ ತುಂಬೆ ಡ್ಯಾಂನಲ್ಲಿ ನೀರು ಸಂಗ್ರಹವಾಗದ ಕಾರಣ ರೇಷನಿಂಗ್‌ ಮಾಡಲು ನಿರ್ಧರಿಸಲಾಗಿದೆ. ವಾಶಿಂಗ್‌ ಶೋರೂಂಗಳಿಗೆ, ಕಟ್ಟಡ ಕಾಮಗಾರಿಗಳಿಗೆ (ಮನೆ/ವಾಣಿಜ್ಯ ಸಂಕಿರ್ಣ/ಅಪಾರ್ಟ್‌ ಮೆಂಟ್ಸ್‌), ತುಂಬೆಯಿಂದ ಮಂಗಳೂರು ನಗರಕ್ಕೆ ಬರುವ ಮಾರ್ಗದಲ್ಲಿ ಇರುವಂತಹ ವಾಣಿಜ್ಯ ಸಂಕೀರ್ಣಗಳಿಗೆ ನೀರು ಸರಬರಾಜು ಸ್ಥಗಿತಗೊಳಿಸಲು ಜಿಲ್ಲಾಡಳಿತದಿಂದ ಸೂಚನೆ ನೀಡಲಾಗಿದೆ.

ನೀರು ಬಳಕೆ ಮಿತವಾಗಿರಲಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬಾರದಿದ್ದರೆ ನಗರಕ್ಕೆ ಮುಂದಿನ ದಿನಗಳಲ್ಲಿ ಆತಂಕ ಎದುರಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಲಭ್ಯ ನೀರನ್ನು ಮಿತವಾಗಿ ಬಳಸಬೇಕಿದೆ. ನೀರನ್ನು ಪೋಲು ಮಾಡದೆ, ಅಪವ್ಯಯವಾಗದಂತೆ ಮುಂಜಾಗ್ರತೆ ವಹಿಸಿ ಮಳೆ ಪ್ರಾರಂಭವಾಗುವವರೆಗೆ ಲಭ್ಯ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಲು ಹೆಚ್ಚು ಒತ್ತು ನೀಡಬೇಕು. ಕುಡಿಯುವ ನೀರು ಪ್ರಥಮ ಆದ್ಯತೆಯಾಗಿ ನೀಡಬೇಕಾದ ಹಿನ್ನೆಲೆಯಲ್ಲಿ ಮನೆಯಲ್ಲಿ ಕಾರು/ದ್ವಿಚಕ್ರ/ರಿಕ್ಷಾ/ಗಾರ್ಡನ್‌ಗಳಿಗೆ ಹಾಗೂ ಪ್ರಾಣಿಗಳನ್ನು ತೊಳೆಯಲು ನೀರು ಹೆಚ್ಚಾಗಿ ಬಳಕೆ ಮಾಡಬಾರದು.

2016, 2019: ನೀರಿಗಾಗಿ ಹಾಹಾಕಾರ
2016ರ ಆರಂಭದ ತಿಂಗಳಿನಿಂದ ಮಹಾ ನಗರ ಹಿಂದೆಂದೂ ಕಂಡರಿಯದ ಭೀಕರ ನೀರಿನ ಕೊರತೆ ಎದುರಿಸುವಂತಾಗಿತ್ತು. ತುಂಬೆ ಡ್ಯಾಂನಲ್ಲಿ ನೀರಿಲ್ಲದ ಪರಿಸ್ಥಿತಿ ಎದುರಾಗಿ, ನಗರದಲ್ಲಿ ಟ್ಯಾಂಕರ್‌ ನೀರು ಬಳಸಲಾಗಿತ್ತು. ಅದೂ ಖಾಲಿಯಾದಾಗ, ಖಾಸಗಿ ಬಾವಿಗಳಿಂದ ನೀರು ತರಿಸಲಾಗಿತ್ತು. ಅದೂ ಪೂರ್ಣವಾಗಿ ಸಾಧ್ಯವಾಗದಾಗ ಲಕ್ಯಾ ಡ್ಯಾಂ ನೀರನ್ನು ತರಿಸಲಾಗಿತ್ತು. ಇದರಿಂದ ಎಚ್ಚೆತ್ತ ಪಾಲಿಕೆ 2017ರಲ್ಲಿ ಪ್ರತಿ 48 ಗಂಟೆ ನಿರಂತರ ನೀರು ಪೂರೈಕೆ ಮಾಡಿದರೆ, ಬಳಿಕದ 36 ಗಂಟೆ ನೀರು ಪೂರೈಕೆ ಸ್ಥಗಿತಗೊಳಿಸುವ ಮೂಲಕ ರೇಷನಿಂಗ್‌ ಆರಂಭಿಸಿತು. 2019ರಲ್ಲಿಯೂ ತುಂಬೆಯಲ್ಲಿ ನೀರಿನ ಮಟ್ಟ ಗಣನೀಯ ಕಡಿಮೆಯಾಗಿ ಹಂತ ಹಂತವಾಗಿ ರೇಷನಿಂಗ್‌ ಆರಂಭಿಸಿತ್ತು.

ಇಂದು ಸುರತ್ಕಲ್‌, ನಾಳೆ ಸಿಟಿಗೆ ನೀರು ಪೂರೈಕೆ
ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದ ಹಿನ್ನೆಲೆಯಲ್ಲಿ ನಗರಕ್ಕೆ ದಿನ ಬಿಟ್ಟು ದಿನ ನೀರು ಪೂರೈಕೆಯಾಗಲಿದೆ. ಮೇ 5ರಂದು ಮಂಗಳೂರು ನಗರ ಉತ್ತರಕ್ಕೆ (ಸುರತ್ಕಲ್‌ ಪ್ರದೇಶಕ್ಕೆ) ಮತ್ತು ಮೇ 6ರಂದು ಮಂಗಳೂರು ನಗರ ದಕ್ಷಿಣ (ನಗರ ಪ್ರದೇಶಕ್ಕೆ) ಇದೇ ರೀತಿ, ಕ್ರಮಾನುಗತವಾಗಿ ನೀರು ಪೂರೈಕೆಯಾಗಲಿದೆ. ಎರಡು ದಿನಗಳಿಗೊಮ್ಮೆ ನೀರು ಪೂರೈಕೆಯಾದರೆ, ಪೈಪ್‌ನಲ್ಲಿ ಗಾಳಿ ತುಂಬಿ ಎತ್ತರದ ಪ್ರದೇಶಗಳಿಗೆ ನೀರು ಬರಲು ಕೆಲವು ಸಮಯ ಬೇಕಾಗಬಹುದು. ತುಂಬೆಯಲ್ಲಿ ತಾಂತ್ರಿಕ ಕಾಮಗಾರಿ ಇದ್ದ ಕಾರಣ ಕೆಲ ದಿನಗಳ ಹಿಂದೆ ಎರಡು ದಿನ ನೀರು ಸ್ಥಗಿತಗೊಂಡಿತ್ತು. ಬಳಿಕ ಸಮರ್ಪಕ ನೀರು ಸರಬರಾಜು ಆಗಲು ಮೂರು ದಿನ ತಗುಲಿತ್ತು.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.