ಸೂರಲ್ಪಾಡಿ, ಕೈಕಂಬಕ್ಕೆ ಟ್ಯಾಂಕರ್ ನೀರು ಪೂರೈಕೆ
Team Udayavani, Jun 5, 2019, 6:00 AM IST
ಗುರುಪುರ: ಬೋರ್ವೆಲ್ನಲ್ಲಿ ನೀರು ಸಿಗದ ಕಾರಣ ಗಂಜಿಮಠ ಪಂ.ವ್ಯಾಪ್ತಿಯ ಸುರಲ್ಪಾಡಿ, ಕೈಕಂಬ ಪ್ರದೇಶಗಳಿಗೆ ಟ್ಯಾಂಕರ್ನಿಂದ ನೀರು ಪೂರೈಸಬೇಕಾದ ಪರಿಸ್ಥಿತಿ ಬಂದೊದಗಿದೆ. ಮಳೆ ಕಡಿಮೆಯಾದ ಹಿನ್ನೆಲೆ ಯಲ್ಲಿ ಬೋರ್ವೆಲ್ನಲ್ಲಿ ನೀರು ಕಡಿಮೆಯಾಗಿದ್ದು, ಮೊದಲೇ ನೀರು ಪೂರೈಕೆಯಲ್ಲಿ ವ್ಯತ್ಯಯ ಕಂಡುಬಂದ ಕಾರಣ ಕೆಲವೆಡೆ ಟ್ಯಾಂಕರ್ ನೀರು ಪೂರೈಸಲಾಗುತ್ತಿತ್ತು. ಈಗ ಕೈಕಂಬದಲ್ಲಿರುವ ಬೋರ್ವೆಲ್ನಲ್ಲೂ ನೀರು ಸಿಗದಿರುವ ಕಾರಣ ಟ್ಯಾಂಕರ್ನಲ್ಲಿ ನೀರು ಪೂರೈಕೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಅನೇಕ ಮನೆಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗಿದೆ. ಮಳೆ ಬಾರದೇ ಇದ್ದರೆ ಸಮಸ್ಯೆ ಮತ್ತಷ್ಟು ಬಿಗಡಾಯಿಸಲಿದೆ.
ಈ ಹಿನ್ನೆಲೆಯಲ್ಲಿ ಪಂಚಾಯತ್ ಉಪಾಧ್ಯಕ್ಷ ಝಾಕಿರ್ ಅವರ ಮುಂದಾಳುತ್ವದಲ್ಲಿ ಟ್ಯಾಂಕರ್ನಲ್ಲಿ ನೀರು ಪೂರೈಸಲಾಗುತ್ತಿದೆ. ಬೆಳಗ್ಗಿನಿಂದ ಸಂಜೆ ಆರರ ತನಕ ನೀರು ಪೂರೈಕೆಗೆ ಕ್ರಮಕೈಗೊಳ್ಳಲಾಗಿದೆ. ಹಳೆಯ ಬೋರ್ವೆಲ್ನಲ್ಲಿ ನೀರು ಸಿಗದ ಕಾರಣ ಇನ್ನು ಮತ್ತೂಂದು ಬೋರ್ವೆಲ್ ಕೊರೆಸಬೇಕಾದ ಅನಿವಾರ್ಯ ಸ್ಥಿತಿ ಬಂದೊದಗಿದೆ.
ಹೊಸ ಪಾಯಿಂಟ್ ನೋಡಿದ್ದೇವೆ
ಕಳೆದ ಹತ್ತು ದಿನಗಳಿಂದ ನೀರು ಸಮಸ್ಯೆ ಇರುವುದರಿಂದ ಹೊಸ ಪಾಯಿಂಟ್ ನೋಡಲಾಗಿದೆ. ಅಲ್ಲಿ ಬೋರ್ವೆಲ್ ಕೊರೆಸಲು ಮುಂದಾಗಿದ್ದೇವೆ. ಮಳೆ ಬಾರದ ಕಾರಣ ಟ್ಯಾಂಕರ್ನಲ್ಲಿ ನೀರು ಪೂರೈಸಬೇಕಾದ ಅನಿವಾರ್ಯ ಸ್ಥಿತಿ ಇದೆ. ಜನರಿಗೆ ತೊಂದ ರೆಯಾಗದಂತೆ ನೀರು ಪೂರೈಕೆಯಲ್ಲಿ ತೊಡಗಿದ್ದೇವೆ.
- ಝಾಕಿರ್, ಉಪಾಧ್ಯಕ್ಷ, ಗಂಜಿಮಠ ಪಂಚಾಯತ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು