ವಾಹನದಲ್ಲಿ ಸಂಚರಿಸುವಾಗ ಮಾಸ್ಕ್ ಧರಿಸಿ ಇಲ್ಲವೇ ದಂಡ ಕಟ್ಟಿ

ಎಸಿ ಕಾರು ಪ್ರಯಾಣಕ್ಕೆ ವಿನಾಯಿತಿ, ಬೈಕ್‌ ಸಂಚಾರಕ್ಕೆ ಕಡ್ಡಾಯ

Team Udayavani, Oct 2, 2020, 6:22 AM IST

ವಾಹನದಲ್ಲಿ ಸಂಚರಿಸುವಾಗ ಮಾಸ್ಕ್ ಧರಿಸಿ ಇಲ್ಲವೇ ದಂಡ ಕಟ್ಟಿ

ಮಾಸ್ಕ್ ಧರಿಸದೇ ಸಂಚರಿಸುವವರಿಗೆ ದಂಡ ವಿಧಿಸಿರುವುದು.

ಮಹಾನಗರ: ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ಮನಪಾ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದೆ ಸಂಚರಿಸುವವರಿಗೆ ದಂಡ ವಿಧಿಸುವ ಪ್ರಕ್ರಿಯೆ ಪರಿಣಾಮಕಾರಿಯಾಗಿ ಮುಂದುವರಿಯುತ್ತಿದೆ. ಆದರೆ ಹವಾ ನಿಯಂತ್ರಿತ, ಕಿಟಿಕಿ ಮುಚ್ಚಿ ಕಾರಿನಲ್ಲಿ ಸಂಚರಿಸುವವರಿಗೆ ದಂಡದಿಂದ
ವಿನಾಯಿತಿ ಇದೆ.

ನಗರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನೇದಿನೇ ಏರಿಕೆಯಾಗುತ್ತಿದೆ. ಸೋಂಕು ಹರಡುವಿಕೆಯನ್ನು ನಿಯಂ ತ್ರಣಕ್ಕೆ ತರುವ ನಿಟ್ಟಿನಲ್ಲಿ ದ.ಕ. ಜಿಲ್ಲಾ ಡಳಿತ, ಮಹಾನಗರ ಪಾಲಿಕೆಯು ಶಕ್ತಿ ಮೀರಿ ಪ್ರಯತ್ನಿಸುತ್ತಿದೆ. ಕೋವಿಡ್‌ ನಿಯಮಾವಳಿ ಗಳನ್ನು ಪಾಲಿಸದವರ ಮೇಲೆ ದಂಡ ಪ್ರಯೋಗ ಮಾಡಿ ಎಚ್ಚರಿಕೆ ನೀಡುವ ಕೆಲಸ ನಿರಂತರವಾಗಿ ನಡೆಯುತ್ತಿದ್ದು, ಒಂದು ವಾರದಿಂದ ಇದು ಪರಿಣಾಮಕಾರಿಯಾಗಿ ಸಾಗುತ್ತಿದೆ. ದ್ವಿಚಕ್ರ ವಾಹನ, ಬಸ್‌ಗಳಲ್ಲಿ ಮಾಸ್ಕ್ ಧರಿಸದೆ ಸಂಚರಿಸುವವರಿಗೆ ದಂಡ ವಿಧಿಸಲಾಗುತ್ತಿದೆ.

ಎಸಿ ಕಾರು ಪ್ರಯಾಣಕ್ಕಿಲ್ಲ ದಂಡ
ಕಾರಿನಲ್ಲಿ ಪ್ರಯಾಣಿಸುವವರಿಗೆ ಸದ್ಯ ಯಾವುದೇ ದಂಡ ವಿಧಿಸುತ್ತಿಲ್ಲ. ಆದರೆ ಪ್ರಯಾಣಿಸುವಾಗ ಎಸಿ ಹಾಕಿ ಕಾರಿನ ಗ್ಲಾಸ್‌ಗಳನ್ನು ಬಂದ್‌ ಮಾಡಿಯೇ ಸಂಚರಿಸಬೇಕು. ಗ್ಲಾಸ್‌ ತೆಗೆದು ಸಂಚರಿಸಿದವರಿಗೆ ದಂಡ ಹಾಕಲಾಗುತ್ತದೆ ಎಂದು ಪಾಲಿಕೆಯ ಹಿರಿಯ ಆರೋಗ್ಯ ನಿರೀಕ್ಷಕ ಶಿವಲಿಂಗ ಕೊಂಡಗುಳಿ ತಿಳಿಸಿದ್ದಾರೆ. ಕಾರಿನಲ್ಲಿ ಕುಟುಂಬದವರೇ ಪ್ರಯಾಣಿಸಿದರೆ ಎರಡಕ್ಕಿಂತ ಹೆಚ್ಚು ಮಂದಿ ಇದ್ದರೂ ಮಾಸ್ಕ್ ಧರಿಸುವುದು ಅಗತ್ಯವಿಲ್ಲ. ಆದರೆ ಸಂಚರಿಸುವವರು ಕುಟುಂಬದವರೇ ಎಂಬುದನ್ನು ತಿಳಿದುಕೊಳ್ಳುವುದು ಕಷ್ಟ. ಹೀಗಾಗಿ ಸ್ವಯಂಪ್ರೇರಿತವಾಗಿ ಮಾಸ್ಕ್ ಹಾಕಿಕೊಂಡರೆ ಕ್ಷೇಮ.

ಮಾಸ್ಕ್ ಧರಿಸಲ್ಲ: ಕಾರಣ ಹತ್ತಾರು
ದ್ವಿಚಕ್ರ ವಾಹನಗಳಲ್ಲಿ ತೆರಳುವವರು ದಂಡದಿಂದ ತಪ್ಪಿಸಿಕೊಳ್ಳಲು ಹತ್ತಾರು ಕಾರಣಗಳನ್ನು ನೀಡುತ್ತಾರೆ ಎನ್ನುತ್ತಾರೆ ಅಧಿಕಾರಿಗಳು. ಹೆಲ್ಮೆಟ್‌ ಸಂಪೂರ್ಣ ಕವರ್‌ ಮಾಡಲಾಗಿದೆ, ಮಾಸ್ಕ್ ಧರಿಸಿದರೆ ಉಸಿರುಗಟ್ಟಿದಂತಾಗುತ್ತದೆ, ತಲೆ ನೋವಾಗುತ್ತದೆ ಮುಂತಾದ ಕಾರಣಗಳನ್ನು ನೀಡುತ್ತಾರೆ. ಹೆಲ್ಮೆಟ್‌ನ ಗ್ಲಾಸ್‌ನ್ನು ಮುಖಕ್ಕೆ ಕವರ್‌ ಮಾಡಿದರೂ ಮಾಸ್ಕ್ ಧರಿಸುವುದು ಅವಶ್ಯ. ಇದರಿಂದ ಹೊರ ಭಾಗದಿಂದ ಸೋಂಕು ಹರಡುವಿಕೆಯನ್ನು ತಡೆಯಬಹುದು ಎನ್ನುತ್ತಾರೆ ಅಧಿಕಾರಿಗಳು. ನಿಯಮ ಪಾಲಿಸದ ವ್ಯಾಪಾರ ವಹಿವಾಟು ಕೇಂದ್ರಗಳ ಪರವಾನಿಗೆಯನ್ನು ವಶಪಡಿಸಿ ಎಚ್ಚರಿಕೆ ನೀಡಲಾಗುತ್ತಿದೆ.

ಬಸ್‌ನಲ್ಲೂ ಮಾಸ್ಕ್ ಕಡ್ಡಾಯ
ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕ ಬಸ್‌ಗಳಲ್ಲಿ 40 ಸೀಟುಗಳಿದ್ದರೆ 20 ಮಂದಿ ಮಾತ್ರ ಸೀಟಿಗೊಬ್ಬರಂತೆ ಪ್ರಯಾಣಿಸಬೇಕು. ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯ. ಪೊಲೀಸ್‌ ಇಲಾಖೆಯವರು ಬಸ್‌ನಲ್ಲಿ ಕಾರ್ಯಾಚರಣೆ ನಡೆಸಿದಾಗ ಮಾಸ್ಕ್ ಧರಿಸ ದಿರುವುದು ಕಂಡು ಬಂದರೆ ಅಂತಹವರಿಗೂ 200 ರೂ. ದಂಡ ವಿಧಿಸಲಾಗುತ್ತದೆ. ರಿಕ್ಷಾ ಅಥವಾ ಇತರ ಸಾರ್ವಜನಿಕ ವಾಹನಗಳಲ್ಲಿ ಸಂಚರಿಸುವವರಿಗೂ ಇದೇ ನಿಯಮ ಅನ್ವಯವಾಗುತ್ತದೆ.

ಸದ್ಯ 200 ರೂ. ದಂಡ
ಕೋವಿಡ್‌ ನಿಯಮಗಳನ್ನು ಪಾಲಿಸದ ಸಾರ್ವಜನಿಕರಿಗೆ ವಿಧಿಸಲಾಗುವ ದಂಡದ ಮೊತ್ತ ಸದ್ಯ ನಗರ ಪ್ರದೇಶದಲ್ಲಿ 200 ರೂ., ಗ್ರಾಮೀಣ ಭಾಗದಲ್ಲಿ 100 ರೂ.ಗಳಿವೆ. ಮುಂದೆ ಇದು ಜಾಸ್ತಿಯಾಗಬಹುದು. ದಂಡ ವಿಧಿಸುವುದೇ ನಮ್ಮ ಉದ್ದೇಶವಲ್ಲ. ಆದರೆ ಜನ ಕೊರೊನಾ ಹರಡುವಿಕೆಯ ಬಗ್ಗೆ ಜಾಗೃತರಾಗಬೇಕು ಮತ್ತು ನಿಯಮಗಳನ್ನು ಪಾಲಿಸಬೇಕು ಎಂಬ ನಿಟ್ಟಿನಲ್ಲಿ ದಂಡ ವಿಧಿಸುವ ಮೂಲಕ ಎಚ್ಚರ ನೀಡಲಾಗುತ್ತಿದೆ.
-ದಿವಾಕರ್‌ ಪಾಂಡೇಶ್ವರ, ಮೇಯರ್‌

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.