ಕಾಡುಕೋಣ ಸಾವು: ತನಿಖೆಗೆ ಆಗ್ರಹ

ನಿಡಿಗಲ್‌ ಸಮೀಪದ ರಕ್ಷಿತಾರಣ್ಯದಲ್ಲಿ ಅಂತ್ಯಸಂಸ್ಕಾರ

Team Udayavani, May 7, 2020, 5:36 AM IST

ಕಾಡುಕೋಣ ಸಾವು: ತನಿಖೆಗೆ ಆಗ್ರಹ

ಸಾಂದರ್ಭಿಕ ಚಿತ್ರ.

ಬೆಳ್ತಂಗಡಿ/ಮಂಗಳೂರು: ಮಂಗಳೂರು ನಗರಕ್ಕೆ ಮಂಗಳವಾರ ಬಂದ ಕಾಡುಕೋಣವನ್ನು ಸೆರೆಹಿಡಿದ ಕ್ರಮ ಅವೈಜ್ಞಾನಿಕ ವಾಗಿದ್ದ ಕಾರಣ ಅದು ಸಾವನ್ನಪ್ಪಿದ್ದು, ಕೂಲಂಕಷವಾಗಿ ತನಿಖೆ ನಡೆಸಬೇಕು ಎಂದು ಪ್ರಾಣಿಪ್ರಿಯರು ಆಗ್ರಹಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಹೋರಾಟಗಾರ ಜೆರಾರ್‌x ಟವರ್‌ ಅವರು ಬುಧವಾರ ಬರ್ಕೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಕಾಡುಕೋಣ ಸಾವನ್ನಪ್ಪುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಆಕ್ರೋಶ ಭರಿತ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
“ಮೊದಲು ಆ ಕಾಡುಕೋಣ ನಗರಕ್ಕೆ ಹೇಗೆ ಬಂತು ಎಂಬ ಪ್ರಶ್ನೆ ಮೂಡುತ್ತದೆ. ದಾರಿ ತಪ್ಪಿ ಬಂದಿದ್ದರೆ ಅದರ ಜೀವಕ್ಕೆ ಅಪಾಯವಾಗದಂತೆ ಹಿಡಿದು ಕಾಡಿಗೆ ಬಿಡುವುದಕ್ಕೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕಿತ್ತು’ ಎಂದು ಪರಿಸರವಾದಿ ದಿನೇಶ್‌ ಹೊಳ್ಳ ಪ್ರತಿಕ್ರಿಯಿಸಿದ್ದಾರೆ.

ಚಾರ್ಮಾಡಿಯಲ್ಲಿ ಸಾವು
ನಗರದಲ್ಲಿ ಓಡಾಡಿ ಸುಸ್ತಾಗಿದ್ದ ಕಾಡು ಕೋಣ ವನ್ನು ಪೂರ್ವಾಹ್ನ 11 ಗಂಟೆ ವೇಳೆಗೆ ಅರಿವಳಿಕೆ ಚುಚ್ಚು ಮದ್ದು ನೀಡಿ ಸೆರೆಹಿಡಿದು ಲಾರಿಯಲ್ಲಿ ಚಾರ್ಮಾಡಿಯ ಅರಣ್ಯಕ್ಕೆ ಕೊಂಡೊಯ್ಯಲಾಗಿತ್ತು. ಎರಡೂವರೆ ಗಂಟೆ ಬಳಿಕ ಬಿ.ಸಿ. ರೋಡ್‌ಗೆ ತಲುಪುವಾಗ ಕೋಣಕ್ಕೆ ಪ್ರಜ್ಞೆ ಬಂದಿತ್ತು. ಚಾರ್ಮಾಡಿ ತಲುಪಿದ ಬಳಿಕವೂ 2 ತಾಸು ಕಾಲ ಪ್ರಜ್ಞೆಯಿತ್ತು.

ಬಳಿಕ ಅದು ಯಾವುದೇ ರೀತಿಯ ಚಲನೆ ತೋರದ ಕಾರಣ ಸಂಶಯದಿಂದ ಚಾರ್ಮಾಡಿ ಯಲ್ಲಿ ರುವ ಸರಕಾರಿ ಪಶು ವೈದ್ಯರನ್ನು ಸ್ಥಳಕ್ಕೆ ಕರೆಯಿಸಿ ಪರೀಕ್ಷಿಸಿದ್ದು, ಅವರು ಸಾವನ್ನು ದೃಢಪಡಿಸಿದರು. ಬಳಿಕ ನಿಡಿಗಲ್‌ ಸಮೀಪದ ನರ್ಸರಿಯಲ್ಲಿ ಅರಣ್ಯ ಇಲಾಖೆ ಮಾರ್ಗಸೂಚಿಯಂತೆ ಕಾಡುಕೋಣವನ್ನು ದಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.ಕೋಣ ವಿಪರೀತ ಬಳಲಿತ್ತು. ಅರಣ್ಯಕ್ಕೆ ಬಿಡುವ ಮುನ್ನ 4 ಟಬ್‌ ನೀರು ಸುರಿದ ಬಳಿಕ ಚೇತರಿಸಿಕೊಂಡಂತೆ ಕಂಡಿತ್ತು. ಎರಡು ಬಾರಿ ಎದ್ದು ನಿಂತಿತ್ತಾದರು ಮೂರನೇ ಬಾರಿಗೆ ಕುಸಿದು ಬಿದ್ದು ಸಾವನ್ನಪ್ಪಿದೆ ಎಂದು ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಬಿ. ಸುಬ್ಬಯ್ಯ ನಾಯ್ಕ ತಿಳಿಸಿದ್ದಾರೆ.

ಅಂತ್ಯಸಂಸ್ಕಾರ ವೇಳೆ ವಲಯಾರಣ್ಯಾಧಿಕಾರಿಗಳಾದ ಬಿ. ಸುಬ್ಬಯ್ಯ ನಾಯ್ಕ,ಶ್ರೀಧರ್‌,ಸಿಬಂದಿ ಉಪಸ್ಥಿತರಿದ್ದರು.

ಹೈಡೋಸೇಜ್‌ನಿಂದ ಸಾವನ್ನಪ್ಪಿಲ್ಲ
ಅರಿವಳಿಕೆ ಪ್ರಮಾಣ ಹೆಚ್ಚಳದಿಂದ ಮೃತ ಪಟ್ಟಿದೆ ಎಂಬುದು ವದಂತಿಯಷ್ಟೆ. ಮನುಷ್ಯರ ಸಂಪರ್ಕದಿಂದ ದೂರ ಇರುವ ಕಾಡುಪ್ರಾಣಿಗಳು ಒಮ್ಮಿಂದೊಮ್ಮೆಲೆ ಜನನಿಬಿಡ ಪ್ರದೇಶಕ್ಕೆ ಕಾಲಿಟ್ಟರೆ ಭಯಗೊಂಡು ಹೃದಯ ಬಡಿತ ಹೆಚ್ಚಾಗುತ್ತದೆ. ಜಿಂಕೆಯಂಥ ಜೀವಿಗಳು ಮನುಷ್ಯ ಮುಟ್ಟಿದ ಕ್ಷಣ ದಲ್ಲೇ ಸಾವನ್ನಪ್ಪುತ್ತವೆ. ಕಾಡುಕೋಣ ಆರೋಗ್ಯ ವಾಗಿದ್ದರೂ ಬಳಲಿಕೆ ಮತ್ತು ಭಯ ದಿಂದ ಹೃದಯಾ ಘಾತ ವಾಗಿದೆ ಎಂದು ಮರಣೋ ತ್ತರ ಪರೀಕ್ಷೆ ನಡೆಸಿದ ಚಾರ್ಮಾಡಿಯ ಸರಕಾರಿ ಪಶು ವೈದ್ಯಾಧಿಕಾರಿ ಮಂಜ ನಾಯ್ಕ ಮತ್ತು ಅರಿವಳಿಕೆ ನೀಡಿದ್ದ ಪಿಲಿಕುಳದ ಜೈವಿಕ ಉದ್ಯಾನವನದ ಪಶು ಅಧಿಕಾರಿ ಡಾ| ವಿಷ್ಣು ತಿಳಿಸಿದ್ದಾರೆ.

ಅರಿವಳಿಕೆ ಔಷಧ ಅಧಿಕವಾಗಿ ಸಾವ ನ್ನಪ್ಪಿದೆ ಎಂಬುದು ಆರೋಪ ವಷ್ಟೆ. ಶಿಷ್ಟಾಚಾರ ದಂತೆ ಮರಣೋ ತ್ತರ ಪರೀಕ್ಷೆ, ಅಂತ್ಯ ಸಂಸ್ಕಾರ ಎಲ್ಲವೂ ನಡೆದಿವೆ. ಎಲ್ಲ ಪ್ರಕ್ರಿಯೆ ಗಳ ವೀಡಿಯೋ, ಫೋಟೋ ಗಳು ಇಲಾಖೆ ಯಲ್ಲಿವೆ. ಮರಣೋತ್ತರ ಪರೀಕ್ಷೆಯ ವರದಿ ಶುಕ್ರವಾರ ಕೈಸೇರಲಿದೆ.
– ಕರಿಕಾಳನ್‌,
ದ.ಕ. ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.