ಮಂಗಳೂರು: ವಾರಾಂತ್ಯಕ್ಕೆ ಯಕ್ಷಗಾನ ತಿರುಗಾಟಕ್ಕೆ ತೆರೆ


Team Udayavani, May 25, 2023, 8:20 AM IST

ಮಂಗಳೂರು: ವಾರಾಂತ್ಯಕ್ಕೆ ಯಕ್ಷಗಾನ ತಿರುಗಾಟಕ್ಕೆ ತೆರೆ

ಮಂಗಳೂರು: ಪ್ರಸಕ್ತ ಸಾಲಿನ ಯಕ್ಷಗಾನ ತಿರುಗಾಟ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಈ ವಾರಾಂತ್ಯದೊಳಗೆ ಕಲಾವಿದರು ಗೆಜ್ಜೆ ಬಿಚ್ಚಲಿದ್ದಾರೆ. ಆ ಮೂಲಕ ಸುಮಾರು ಆರು ತಿಂಗಳ ಯಕ್ಷಗಾನದ ಅಬ್ಬರ ತೆರೆ ಬೀಳಲಿದೆ.

ಈ ಬಾರಿ ರಾತ್ರಿ 10 ಗಂಟೆಯ ಬಳಿಕ ಮೈಕ್‌ ಬಳಕೆ ನಿಷೇಧಿಸಿರುವ ಸುಪ್ರೀಂ ಕೋರ್ಟ್‌ನ ಆದೇಶವನ್ನು ಜಿಲ್ಲಾಡಳಿತಗಳು ಕಟ್ಟುನಿಟ್ಟಾಗಿ ಪಾಲಿಸಿರುವ ಹಿನ್ನೆಲೆಯಲ್ಲಿ ಬಹುತೇಕ ಮೇಳಗಳು ಕಾಲಮಿತಿಯಲ್ಲೇ ಪ್ರದರ್ಶನ ನೀಡಿವೆ. ಕೆಲವು ಕಡೆಗಳಲ್ಲಿ ಕೆಲವು ಪ್ರಸಂಗಗಳು ರಾತ್ರಿಯಿಡೀ ಪ್ರದರ್ಶನ ಕಂಡಿವೆ. ಪ್ರತೀ ವರ್ಷ ಕೊನೆಯ ಒಂದು ತಿಂಗಳು ಮಳೆಯಿಂದ ಪ್ರದರ್ಶನಕ್ಕೆ ಅಡ್ಡಿಯಾಗುತ್ತಿತ್ತು. ಆದರೆ ಈ ಬಾರಿ ಕೊನೆಯ ದಿನಗಳ ವರೆಗೂ ಬಹುತೇಕ ಮಳೆಯ ತೊಂದರೆಯಿಲ್ಲದೆ ಪ್ರದರ್ಶನ ಕಂಡಿವೆ.

ತೆಂಕುತಿಟ್ಟಿನ ಮೇಳಗಳ ಪೈಕಿ ಕಟೀಲು ಯಕ್ಷಗಾನ ಪ್ರದರ್ಶನ ಹೆಚ್ಚಿನ ಬೇಡಿಕೆಯೊಂದಿಗೆ ಸಾಂಗವಾಗಿ ನೆರವೇರಿದೆ. ಕಟೀಲು ಎಲ್ಲ ಆರು ಮೇಳಗಳು ಒಂದೊಂದು ಮೇಳ ತಲಾ 170ರಷ್ಟು ಪ್ರದರ್ಶನ ನೀಡಿವೆ. ಮೇ 26ರಂದು ರಾತ್ರಿ ಈ ಎಲ್ಲ ಮೇಳಗಳು ಏಕಕಾಲದಲ್ಲಿ ಕ್ಷೇತ್ರದ ರಥಬೀದಿಯಲ್ಲಿ ಪ್ರದರ್ಶನ ನೀಡಿಲಿದ್ದು, ಬಳಿಕ ದೇವಿಯ ಸನ್ನಿಧಿಯಲ್ಲಿ ಕಲಾವಿದರು ಗೆಜ್ಜೆ ಬಿಚ್ಚಲಿದ್ದಾರೆ.

ಧರ್ಮಸ್ಥಳ ಮೇಳದ ಯಕ್ಷಗಾನಗಳೂ ಈ ಬಾರಿ ಎಲ್ಲ ಕಡೆಗಳಲ್ಲಿ ಪ್ರೇಕ್ಷಕರ ಮೆಚ್ಚುಗೆ ಪಡೆಯಿತು. ಈ ಬಾರಿ ಸುಮಾರು 195 ಪ್ರದರ್ಶನ ನೀಡಿದ್ದು, ಮೇ 28ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕೊನೆಯ ಪ್ರದರ್ಶನ ನಡೆಯಲಿದೆ.

ಪಾವಂಜೆ ಮೇಳಕ್ಕೂ ಹೆಚ್ಚಿನ ಬೇಡಿಕೆಯಿತ್ತು. ಒಟ್ಟು 206 ಪ್ರದರ್ಶನ ನೀಡಿದ್ದು, ಕೊನೆಯ ಪ್ರದರ್ಶನ ಮೇ 25ರಂದು ಕ್ಷೇತ್ರದಲ್ಲಿ ನಡೆಯಲಿದೆ. ಈ ಬಾರಿ ಹೊಸದಾಗಿ ಆರಂಭವಾಗಿರುವ ಗೆಜ್ಜೆಗಿರಿ ಕ್ಷೇತ್ರದ ಮೇಳವೂ 170ಕ್ಕೂ ಹೆಚ್ಚಿನ ಕಡೆಗಳಲ್ಲಿ ಪ್ರದರ್ಶನ ನೀಡಿದೆ.

ಗೆಜ್ಜೆಗಿರಿ, ಹನುಮಗಿರಿ, ಬಪ್ಪನಾಡು, ಕೊಲ್ಲಂಗಾನ, ಸಸಿಹಿತ್ಲು, ಸುಂಕದಕಟ್ಟೆ ಮೇಳಗಳ ಪ್ರದರ್ಶನ ಈಗಾಗಲೇ ಅಂತ್ಯಕಂಡಿದೆ. ಇನ್ನು ಕಲಾವಿದರು ಪರ್ಯಾಯ ಉದ್ಯೋಗದತ್ತ ಮುಖ ಮಾಡಬೇಕಾಗಿದ್ದು, ಕೆಲವು ಮೇಳಗಳಲ್ಲಿ ಅರ್ಧ ಸಂಬಳ ನೀಡುವ ಸಂಪ್ರದಾಯವೂ ಇದೆ. ಮಳೆಗಾಲದಲ್ಲಿ ಕರಾವಳಿಯ ವಿವಿಧೆಡೆ ಸಹಿತ, ಬೆಂಗಳೂರು, ಮುಂಬಯಿ ಎಂದು ದೂರದ ಊರುಗಳಲ್ಲಿ ಯಕ್ಷಗಾನ ಪ್ರದರ್ಶನಗಳು ನಡೆಯುವುದರಿಂದ ಕೆಲವು ಕಲಾವಿದರು ಅದರಲ್ಲಿ ಪಾತ್ರಮಾಡುವ ಅವಕಾಶವನ್ನೂ ಪಡೆಯುತ್ತಾರೆ.

ಟಾಪ್ ನ್ಯೂಸ್

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.