ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ
Team Udayavani, Dec 22, 2020, 1:17 AM IST
ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2020ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ ಮತ್ತು ಯಕ್ಷಸಿರಿ ವಾರ್ಷಿಕ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ಹಿರಿಯ ಯಕ್ಷಗಾನ ಅರ್ಥಧಾರಿ ಮತ್ತು ಪ್ರಸಂಗಕತೃì ಡಿ.ಎಸ್. ಶ್ರೀಧರ ಅವರು “ಪಾರ್ತಿಸುಬ್ಬ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಅಕಾಡೆಮಿ ಅಧ್ಯಕ್ಷ ಪ್ರೊ| ಎಂ.ಎ. ಹೆಗಡೆ ಅವರು ಮಂಗಳೂರಿನಲ್ಲಿ ಸೋಮವಾರ ಪತ್ರಿಕಾ ಗೋಷ್ಠಿಯಲ್ಲಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟಿಸಿ ದರು. “ಪಾರ್ತಿಸುಬ್ಬ’ ಪ್ರಶಸ್ತಿ ಒಂದು ಲಕ್ಷ ರೂ. ನಗದು ಮತ್ತು ಪ್ರಮಾಣಪತ್ರ, ಗೌರವ ಪ್ರಶಸ್ತಿಗಳು ತಲಾ 50 ಸಾವಿರ ರೂ. ನಗದು ಮತ್ತು ಪ್ರಮಾಣಪತ್ರ, ಯಕ್ಷ ಸಿರಿ ವಾರ್ಷಿಕ ಪ್ರಶಸ್ತಿಗಳು ತಲಾ 25 ಸಾವಿರ ರೂ. ನಗದು ಮತ್ತು ಪ್ರಮಾಣ ಪತ್ರ ವನ್ನು ಒಳ ಗೊಂಡಿದೆ ಎಂದರು. ಪ್ರಶಸ್ತಿ ಪ್ರದಾನ ಸಮಾರಂಭ ಫೆಬ್ರವರಿ 2ನೇ ಅಥವಾ 3ನೇ ವಾರದಲ್ಲಿ ನಡೆಸಲಾಗುವುದು ಎಂದು ತಿಳಿಸಿದರು.
ಪುರಸ್ಕೃತರಲ್ಲಿ ಕರಾವಳಿಯ ಯಕ್ಷ ಸಾಧಕರಾದ ಬನ್ನಂಜೆ ಸಂಜೀವ ಸುವರ್ಣ, ತಿಮ್ಮಪ್ಪ ಗುಜರನ್ (ಮರಣೋತ್ತರ), ತೀರ್ಥಹಳ್ಳಿ ಗೋಪಾಲ ಆಚಾರ್ಯ, ಆವರ್ಸೆ ಶ್ರೀನಿವಾಸ ಮಡಿವಾಳ, ಬೆಳೂ¤ರು ರಮೇಶ್, ಸಂಜಯ ಕುಮಾರ್, ಗೋಣಿಬೀಡು, ಸುಬ್ರಹ್ಮಣ್ಯ ಧಾರೇಶ್ವರ, ವಿಟ್ಲ ಶಂಭು ಶರ್ಮ ಸೇರಿದ್ದಾರೆ.
ಗೌರವ ಪ್ರಶಸ್ತಿ ಪುರಸ್ಕೃತರು
ಗೌರವ ಪ್ರಶಸ್ತಿಗೆ ತೆಂಕುತಿಟ್ಟಿನ ಕೆ. ತಿಮ್ಮಪ್ಪ ಗುಜರನ್, ಉಡುಪಿಯ ಯಕ್ಷಗಾನ ಕೇಂದ್ರದ ಗುರು ಬಿ. ಸಂಜೀವ ಸುವರ್ಣ, ಪಡುವಲಪಾಯದ ವಿದ್ವಾಂಸ ಡಾ| ವಿಜಯ ನಳಿನಿ ರಮೇಶ್, ಮೂಡಲಪಾಯ ಯಕ್ಷಗಾನ ವಿದ್ವಾಂಸ, ಸಂಘಟಕ ಡಾ| ಚಕ್ಕೆರೆ ಶಿವಶಂಕರ್, ಮೂಡಲಪಾಯದ ಕಲಾವಿದ ಹಾಗೂ ಸಂಘಟಕ ಬಿ. ಪರಶುರಾಮ್ ಆಯ್ಕೆಯಾಗಿ ದ್ದಾರೆ. ತಿಮ್ಮಪ್ಪ ಗುಜರನ್ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿ ನೀಡಲಾಗುವುದು. ಅವರು ನಿಧನ ಹೊಂದುವ ಹೆಸರು ಆಯ್ಕೆಯಾಗಿತ್ತು ಎಂದು ಪ್ರೊ| ಎಂ.ಎ. ಹೆಗಡೆ ಹೇಳಿದರು.
ಯಕ್ಷಸಿರಿ ಪ್ರಶಸ್ತಿ ಪುರಸ್ಕೃತರು
ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ಕಲಾವಿದರಾದ ಗೋಪಾಲ ಆಚಾರ್ಯ ತೀರ್ಥಹಳ್ಳಿ, ಆವರ್ಸೆ ಶ್ರೀನಿವಾಸ ಮಡಿವಾಳ, ಬೆಳೂ¤¤ರು ರಮೇಶ್, ಸ್ತ್ರೀ ವೇಷಧಾರಿ ಸಂಜಯ್ ಕುಮಾರ್ ಶೆಟ್ಟಿ, ಪಡುವಲಪಾಯ ಸಂಘಟಕ ಎಂ.ಆರ್. ಹೆಗಡೆ ಕಾನಗೋಡ, ಭಾಗವತ ಸುಬ್ರಹ್ಮಣ್ಯ ಧಾರೇಶ್ವರ, ಅರ್ಥ ಧಾರಿ ವಿಟ್ಲ ಶಂಭು ಶರ್ಮ, ಮೂಡ ಲಪಾಯ ಭಾಗ ವತ ಹನುಮಂತರಾಯಪ್ಪ, ಮುಖವೀಣೆ ಕಲಾವಿದ ಎ.ಎಂ. ಮುಳವಾಗಲಪ್ಪ ಆಯ್ಕೆ ಆಗಿದ್ದಾರೆ.
ಅಕಾಡೆಮಿ ಸದಸ್ಯರಾದ ರಾಧಾಕೃಷ್ಣ ಕಲ್ಚಾರ್, ಕದ್ರಿ ನವನೀತ ಶೆಟ್ಟಿ, ಸಹ ಸದಸ್ಯದಾಮೋದರ ಶೆಟ್ಟಿ, ರಿಜಿಸ್ಟ್ರಾರ್ ಎಸ್.ಎಚ್. ಶಿವರುದ್ರಪ್ಪ ಅವರು ಉಪಸ್ಥಿತರಿದ್ದರು.
ಪಠ್ಯದಲ್ಲಿ ಯಕ್ಷಗಾನ
ಪ್ರೌಢಶಾಲಾ ಪಠ್ಯದಲ್ಲಿ ಯಕ್ಷಗಾನವನ್ನು ಸೇರಿಸುವ ಪ್ರಯತ್ನ ನಡೆಯುತ್ತಿದೆ. ಈ ವಿಚಾರ ಸದ್ಯ ಪಠ್ಯ ಪುಸ್ತಕ ರಚನೆ ಸಮಿತಿಯ ಮುಂದಿದೆ. ತುಳುವಿನ ಪ್ರಸಂಗಗಳನ್ನು ಪ್ರಕಟಿಸಲು ಅಕಾಡೆಮಿ ಯೋಜನೆ ಹಾಕಿಕೊಂಡಿದೆ. ಅಲ್ಲದೆ ಹಿರಿಯ ಯಕ್ಷಗಾನ ಕಲಾವಿದರ ಜತೆ “ನೆನಪಿನ ಬುತ್ತಿ’ ಕಾರ್ಯಕ್ರಮ ನಡೆಸಲಾಗುವುದು. ಈ ಬಾರಿಯ ಅಕಾಡೆಮಿಯ ಪುಸ್ತಕ ಬಹುಮಾನವನ್ನು ಮುಂದಿನ ಬಾರಿಯ ಬಹುಮಾನದೊಂದಿಗೆ ನೀಡಲಾಗುವುದು. ಕೊರೊನಾ ಹಿನ್ನೆಲೆಯಲ್ಲಿ ಯಕ್ಷಗಾನ ಅಕಾಡೆಮಿಗೂ 5 ಲ.ರೂ. ಕಡಿಮೆ ಅನುದಾನ ದೊರೆತಿದೆ ಎಂದು ಪ್ರೊ| ಎಂ.ಎ. ಹೆಗಡೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!