ಯೆಯ್ಯಾಡಿ ಆಹಾರ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅನಾಹುತ
Team Udayavani, Jan 5, 2023, 6:03 PM IST
ಮಂಗಳೂರು : ನಗರದ ಯೆಯ್ಯಾಡಿ ಕೈಗಾರಿಕಾ ಪ್ರದೇಶದ ಆಹಾರ ಸಂಸ್ಕರಣಾ ಘಟಕದಲ್ಲಿ ಗುರುವಾರ ಸಂಜೆ ಬೆಂಕಿ ಅನಾಹುತ ಸಂಭವಿಸಿದೆ.
ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬಂದಿಗಳು ದೌಡಾಯಿಸಿದ್ದು ಬೆಂಕಿ ನಿಯಂತ್ರಿಸಲಾಗುತ್ತಿದೆ.
ಭಾರಿ ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.